Home / ಲೇಖನ / ಕೃಷಿ / ಬೆಳೆನಾಶಗೊಳಿಸುವ ಕೀಟಗಳ ವಿರುದ್ಧ ಹೊಸ ಅಸ್ತ್ರ

ಬೆಳೆನಾಶಗೊಳಿಸುವ ಕೀಟಗಳ ವಿರುದ್ಧ ಹೊಸ ಅಸ್ತ್ರ

ಅಸಂಖ್ಯಾತ ಕೀಟಗಳ ಭಾಧೆಯಿಂದಾಗಿ ರೈತ ಬೆಳೆದ ಬೆಳೆಗಳು ನಾಶಗೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಸಂಗಗಳಿವೆ. ಸಾಲಮಾಡಿ ಉತ್ತು ಬಿತ್ತಿದ ರೈತನಿಗೆ ಈ ಕೀಟಗಳ ಭಾಧೆಯಿಂದ ಬೆಳೆಗಳೆಲ್ಲ ಅಸ್ತಿ ಪಂಜರವಾಗಿ ಉತ್ಪನ್ನ ಶೂನ್ಯವಾಗಿ ಬಿಡುತ್ತದೆ. ಬೌಮಿಸಿಯ ಟಬಾಕಿ ಎನ್ನುವ ವೈಜ್ಞಾನಿಕ ಹೆಸರಿನ ಪ್ರಾಣಿ ಒಂದು ಅಪಾಯಕಾರಿ ಕೀಟವಾಗಿದೆ. ಇದೊಂದು ಬಿಳಿಯಬಣ್ಣದ ನೊಣವಾಗಿದ್ದು ಸು. ೬೦೦ ಬಗೆಯ ಕೃಷಿ ಬೆಳೆಗಳಿಗೆ ಮಾರಕವಾಗಿದೆ. ಜೆಮಿಸಿಯಾ ನೊಣಗಳಲ್ಲಿ ಇರುವ ಬಿ ಜೈಯೋಟೈಪ್, ಎನ್ನುವ ಜಾತಿಯಂತೂ ಕೃಷಿಬೆಳೆಗೆ ಪರಮ ಶತೃವಾಗಿದೆ. ಈ ಜಾತಿಯ ನೊಣಗಳು ೫ ಪಟ್ಟು ಹೆಚ್ಚು ವೇಗವಾಗಿ ಸಂಖ್ಯೆಯಲ್ಲಿ ವೃದ್ಧಿಯಾಗುತ್ತವೆ. ಸು. ೬೦ ಬಗೆಯ ರೋಗಕಾರಕ ವೈರಸ್‌ಗಳನ್ನು ಗಿಡದಿಂದ ಗಿಡಕ್ಕೆ ಪ್ರಸಾರ ಮಾಡುತ್ತ ಹೋಗುತ್ತವೆ. ಈ ಕೃಷಿ ಪೀಡೆಯ ವಿರುದ್ದ ಸೂಕ್ತಮದ್ದಿನ ತಯಾರಿಕೆಗಾಗಿ ವಿಜ್ಞಾನಿಗಳು ಬಹುಕಾಲದಿಂದ ಸಂಶೋಧನೆ ನಡೆಯಿಸಿ ಯಶಸ್ವಿಯಾಗಿದ್ದಾರೆ. ಒಂದು ಪುಟ್ಟ ಗಾತ್ರದ ಗಿಡವೊಂದು ಬೆಮಿಸಿಯಾ ಕೀಟಗಳನ್ನು ಯಶಸ್ವಿಯಾಗಿ ನಿಯಂತ್ರಿಸುವುದು, ಪತ್ತೆಯಾಗಿದೆ. ಹಳದಿ ಬಣ್ಣದ ಹೂಗಳನ್ನು ಬೀರುವ ಈ ಸಸ್ಯದ ವೈಜ್ಞಾನಿಕ ಹೆಸರು “ಕ್ಯಾಲ್ಸಿಯೋಲೇರಿಯಾ ಆಂಡಿನಾ” ಈ ಗಿಡದಲ್ಲಿರುವ ಎರಡು ಬಗೆಯ ರಾಸಾಯನಿಕಗಳು ಬೆಮಿಸಿಯಾ ನೊಣಗಳ ಪೈಕಿ ಹೆಚ್ಚು ಅಪಾಯಕಾರಿಯಾದ ಬಿ ಬಯೋಟೈಟ್, ನೊಣಗಳನ್ನು ಹತೋಟಿಯಲ್ಲಿಡುತ್ತದೆ. ಕ್ಯಾಲ್ಸಿಯೋಲೇರಿಯಾ ಸಸ್ಯದಲ್ಲಿ ಇರುವ ರಾಸಾಯನಿಕಗಳು ಬೆಸಿಮಿಯಾ ನೊಣಗಳನ್ನು ಅಲ್ಲದೇ ಗಿಡಹೇನು ಮತ್ತು ಇನ್ನಿತರೆ ಕೃಷಿ ಪೀಡೆಗಳನ್ನು ಸಹ ನಾಶಪಡಿಸುವುದಾಗಿ ತಿಳಿದು ಬಂದಿದೆ. ಮಹತ್ವದ ಸಂಗತಿ ಎಂದರೆ ಗಿಡದ ಸಾರವನ್ನು ನಿಯಂತ್ರಿಸುವುದಾಗಿ ತಿಳಿದು ಬಂದಿದೆ. ಈ ಕೀಟಗಳು ಈಗ ಆಧುನಿಕ ಕೀಟನಾಶಕಗಳ ವಿರುದ್ಧ ಪ್ರತಿರೋಧ ಶಕ್ತಿಯನ್ನು ಬೆಳಸಿಕೊಂಡು ಕೃಷಿ ವಿಜ್ಞಾನಿಗಳಿಗೆ ತಲೆನೋವು ತಂದಿದ್ದವು.

ಅಂತರಾಷ್ಟ್ರೀಯ ಮಟ್ಟದ ಸಂಶೋಧಕರ ತಂಡವೊಂದು ನಾಲ್ಕು ನೂರಕ್ಕೂ ಹೆಚ್ಚು ಬಗೆಯ ಗಿಡಗಳನ್ನು ಕೀಟನಾಶಕ ಗುಣಗಳಿಗಾಗಿ ಸಂಗ್ರಹಿಸಿ ಸಮಗ್ರವಾಗಿ ಅಧ್ಯಯನ ನಡೆಸುತ್ತಿರುವಾಗ ಈ ಗಿಡದ ಕುರಿತು ತಿಳಿದು ಬಂತು. ಚಿಲಿ ವಿಶ್ವವಿದ್ಯಾಲಯದ ಹರ್ಮನ್ ನೈಲೇ ಯರ್ ಎಂಬ ವಿಜ್ಞಾನಿ ಈ ಸಸ್ಯ ಸಂಗ್ರಹಣಾ ಕಾರ್ಯವನ್ನು ಮಾಡಿದ್ದರು. ಕ್ಯಾಲ್ಸಿಯೋಲೇರಿಯಾ ಗಿಡಗಳ ಕೀಟ ನಾಶಕ ಸಾಮರ್ಥ್ಯ ಹೆಚ್ಚಿಸಿದ್ದಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...