Home / ಲೇಖನ / ವಿಜ್ಞಾನ / ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಬರಗಾಲದ ಭೀಕರತೆಯಿಂದಾಗಿ ನೀರು ಎಲ್ಲಿಯೂ ಸಕ್ಕುವುದಿಲ್ಲ ಹಳ್ಳಕೊಳ್ಳ ತೊರೆ, ನದಿಗಳು ಬತ್ತಿಹೋಗಿವೆ. ಇಂಥಹ ಸಂದರ್ಭಗಳಲ್ಲಿ ಕೊಳವೆಭಾವಿಗಳನ್ನು ಕೊರೆದು ಅದರಿಂದ ನೀರು ಸಂಗ್ರಹಿಸಿ ಕುಡಿಯಲು ಉಪಯೋಗಿಸುತ್ತಿರುವುದು ಇಂದು ಸಾಮಾನ್ಯ ದೃಷ್ಯ.

ಆದರೆ ಇಂಥಹ ಕೊಳವೆ ಭಾವಿಗಳ ನೀರು ವಿಷಯುಕ್ತವಾಗಿವೆ ಎಂಬ ಸತ್ಯ ಇತ್ತೀಚಿಗೆ ಬಯಲಾಗುತ್ತಲಿದೆ. ನಗರೀಕರಣದ ಒತ್ತಡದಿಂದಾಗಿ ಸುರಂಗಗಳನ್ನು ತೋಡಿ ನೀರು ತೆಗೆಯುವ ಸಾಹಸದಿಂದಾಗಿ ಅಂತಾರ್ಜಲ ಬಿತ್ತಿಹೋಗುತ್ತಲಿದೆ. ಹೀಗಾಗಿ ಈ ಸುರಂಗ ಭಾವಿಗಳನ್ನು ೧೦೦ ರಿಂದ ೫೦೦ ಅಡಿಗಳವರೆಗೂ ಕೊರೆಯಲಾಗುತ್ತದೆ. ಇದು ತೀವ್ರವಾಗತೊಡಗಿದಂತೆ ‘ಆರ್ಸನಿಕ್’, ಅಂಶವು ಹೆಚ್ಚಿನ ಪ್ರಮಾಣದಲ್ಲಿ ಅಂತರಜಲದ ಜೊತೆಗೆ ಸೇರಿಕೊಳ್ಳುತ್ತದೆ. ಥೈಲ್ಯಾಂಡಿನಂತಹ ದೇಶಗಳು ಈ ಹಿಂದೆಯೇ ಆರ್ಸನಿಕ್, ವಿಷಪ್ರಾಶನದಿಂದ ಬಳಲಿ ಪಾಠ ಕಲಿತಿವೆ. ಥೈಲ್ಯಾಂಡಿನ ಕೆಲವು ಪ್ರದೇಶಗಳಲ್ಲಿ ಮಳೆಯ ನೀರನ್ನು ಸಿಮೆಂಟ್ ಜಾಡಿಗಳಲಿ ಸಂಗ್ರಹಿಸಿ ಬಳಸಿಕೊಳ್ಳಲಾಗುತ್ತದೆ. ಅಲ್ಲಿ ವರ್ಷದ ಹತ್ತು ತಿಂಗಳ ಕಾಲ ಕುಡಿಯಲು ಮತ್ತು ಅಡಿಗೆ ತಯಾರಿಕೆಗೆ ಬೇಕಾಗುವ ನೀರನ್ನು ಇಂಥಹ ಮಳೆಯ ನೀರಿನ ಸಂಗ್ರಹದಿಂದಲೇ ಪೂರೈಸಿಕೊಳ್ಳಲಾಗುತ್ತದೆ. ಪಶ್ಚಿಮ ಬಂಗಾಳದ ೮೪೦ ಹಳ್ಳಿಗಳಲ್ಲಿ ಲಕ್ಷಾಂತರ ಜನರು ಅರ್ಸನಿಕ್ ವಿಷ ಪ್ರಾಶನದಿಂದ ನರಳುತ್ತಿದ್ದಾರೆ. ನೆಲದಾಳದಲ್ಲಿರುವ ಕಬ್ಬಿಣದ ಪೈರೈಟ್ಗಳು ಕೊಳವೆ ಭಾವಿಗಳ ಮೂಲಕ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ಅಪಾಯಕಾರಿಯಾದ ಆರ್ಸನಿಕ್ ಬಿಡುಗಡೆ ಹೊಂದಿ ಅಂತರ್ಜಲವನ್ನು ಸೇರುತ್ತದೆ. ನೀರಿನೊಂದಿಗೆ ಸೇರುವ ಈ ಆರ್ಸೆನಿಕ್ ಮನುಷ್ಯರಿಗೂ, ಪ್ರಾಣಿಗಳಿಗೂ ಅತ್ಯಂತ ಅಪಾಯಕಾರಿಯಾಗಿದೆ.

ಸಾಮಾನ್ಯವಾಗಿ ಇಂತಹ ಸಮಸ್ಯಗಳಿಗೆ ಸರಳವಾದ ಸುಲಭವಾದ ಮತ್ತು ಕಡಿಮೆ ಖರ್ಚಿನ ಮಾರ್ಗಗಳಿವೆ. ಆದರೆ ಹಲವಾರು ಕಾರಣಗಳಿಂದಾಗಿ ಇಂಥಹ ಪರ್ಯಾಯ ವ್ಯವಸ್ಥೆಗೆ ಒಪ್ಪಿಗೆ ಸಿಗುವುದಿಲ್ಲ ಮುಖ್ಯವಾಗಿ ಮಳೆ ನೀರನ್ನು ಸಂಗ್ರಹಿಸಿ ಇರುವುದು. ಜಲಮೂಲಗಳಿಂದ ನೀರನ್ನು ಪಡೆಯುವುದು. ಮುಂತಾದ ಕ್ರಮಗಳನ್ನು ಅನುಸರಿಸಬೇಕಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...