Home / ಲೇಖನ / ವಿಜ್ಞಾನ / ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಬರಗಾಲದ ಭೀಕರತೆಯಿಂದಾಗಿ ನೀರು ಎಲ್ಲಿಯೂ ಸಕ್ಕುವುದಿಲ್ಲ ಹಳ್ಳಕೊಳ್ಳ ತೊರೆ, ನದಿಗಳು ಬತ್ತಿಹೋಗಿವೆ. ಇಂಥಹ ಸಂದರ್ಭಗಳಲ್ಲಿ ಕೊಳವೆಭಾವಿಗಳನ್ನು ಕೊರೆದು ಅದರಿಂದ ನೀರು ಸಂಗ್ರಹಿಸಿ ಕುಡಿಯಲು ಉಪಯೋಗಿಸುತ್ತಿರುವುದು ಇಂದು ಸಾಮಾನ್ಯ ದೃಷ್ಯ.

ಆದರೆ ಇಂಥಹ ಕೊಳವೆ ಭಾವಿಗಳ ನೀರು ವಿಷಯುಕ್ತವಾಗಿವೆ ಎಂಬ ಸತ್ಯ ಇತ್ತೀಚಿಗೆ ಬಯಲಾಗುತ್ತಲಿದೆ. ನಗರೀಕರಣದ ಒತ್ತಡದಿಂದಾಗಿ ಸುರಂಗಗಳನ್ನು ತೋಡಿ ನೀರು ತೆಗೆಯುವ ಸಾಹಸದಿಂದಾಗಿ ಅಂತಾರ್ಜಲ ಬಿತ್ತಿಹೋಗುತ್ತಲಿದೆ. ಹೀಗಾಗಿ ಈ ಸುರಂಗ ಭಾವಿಗಳನ್ನು ೧೦೦ ರಿಂದ ೫೦೦ ಅಡಿಗಳವರೆಗೂ ಕೊರೆಯಲಾಗುತ್ತದೆ. ಇದು ತೀವ್ರವಾಗತೊಡಗಿದಂತೆ ‘ಆರ್ಸನಿಕ್’, ಅಂಶವು ಹೆಚ್ಚಿನ ಪ್ರಮಾಣದಲ್ಲಿ ಅಂತರಜಲದ ಜೊತೆಗೆ ಸೇರಿಕೊಳ್ಳುತ್ತದೆ. ಥೈಲ್ಯಾಂಡಿನಂತಹ ದೇಶಗಳು ಈ ಹಿಂದೆಯೇ ಆರ್ಸನಿಕ್, ವಿಷಪ್ರಾಶನದಿಂದ ಬಳಲಿ ಪಾಠ ಕಲಿತಿವೆ. ಥೈಲ್ಯಾಂಡಿನ ಕೆಲವು ಪ್ರದೇಶಗಳಲ್ಲಿ ಮಳೆಯ ನೀರನ್ನು ಸಿಮೆಂಟ್ ಜಾಡಿಗಳಲಿ ಸಂಗ್ರಹಿಸಿ ಬಳಸಿಕೊಳ್ಳಲಾಗುತ್ತದೆ. ಅಲ್ಲಿ ವರ್ಷದ ಹತ್ತು ತಿಂಗಳ ಕಾಲ ಕುಡಿಯಲು ಮತ್ತು ಅಡಿಗೆ ತಯಾರಿಕೆಗೆ ಬೇಕಾಗುವ ನೀರನ್ನು ಇಂಥಹ ಮಳೆಯ ನೀರಿನ ಸಂಗ್ರಹದಿಂದಲೇ ಪೂರೈಸಿಕೊಳ್ಳಲಾಗುತ್ತದೆ. ಪಶ್ಚಿಮ ಬಂಗಾಳದ ೮೪೦ ಹಳ್ಳಿಗಳಲ್ಲಿ ಲಕ್ಷಾಂತರ ಜನರು ಅರ್ಸನಿಕ್ ವಿಷ ಪ್ರಾಶನದಿಂದ ನರಳುತ್ತಿದ್ದಾರೆ. ನೆಲದಾಳದಲ್ಲಿರುವ ಕಬ್ಬಿಣದ ಪೈರೈಟ್ಗಳು ಕೊಳವೆ ಭಾವಿಗಳ ಮೂಲಕ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ಅಪಾಯಕಾರಿಯಾದ ಆರ್ಸನಿಕ್ ಬಿಡುಗಡೆ ಹೊಂದಿ ಅಂತರ್ಜಲವನ್ನು ಸೇರುತ್ತದೆ. ನೀರಿನೊಂದಿಗೆ ಸೇರುವ ಈ ಆರ್ಸೆನಿಕ್ ಮನುಷ್ಯರಿಗೂ, ಪ್ರಾಣಿಗಳಿಗೂ ಅತ್ಯಂತ ಅಪಾಯಕಾರಿಯಾಗಿದೆ.

ಸಾಮಾನ್ಯವಾಗಿ ಇಂತಹ ಸಮಸ್ಯಗಳಿಗೆ ಸರಳವಾದ ಸುಲಭವಾದ ಮತ್ತು ಕಡಿಮೆ ಖರ್ಚಿನ ಮಾರ್ಗಗಳಿವೆ. ಆದರೆ ಹಲವಾರು ಕಾರಣಗಳಿಂದಾಗಿ ಇಂಥಹ ಪರ್ಯಾಯ ವ್ಯವಸ್ಥೆಗೆ ಒಪ್ಪಿಗೆ ಸಿಗುವುದಿಲ್ಲ ಮುಖ್ಯವಾಗಿ ಮಳೆ ನೀರನ್ನು ಸಂಗ್ರಹಿಸಿ ಇರುವುದು. ಜಲಮೂಲಗಳಿಂದ ನೀರನ್ನು ಪಡೆಯುವುದು. ಮುಂತಾದ ಕ್ರಮಗಳನ್ನು ಅನುಸರಿಸಬೇಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...