Home / ಲೇಖನ / ವಿಜ್ಞಾನ / ಮಗುವನ್ನು ಅಲ್ಲಾಡಿಸಬೇಡಿ ಜೋಕೆ?!!

ಮಗುವನ್ನು ಅಲ್ಲಾಡಿಸಬೇಡಿ ಜೋಕೆ?!!

ಹೆತ್ತವರಿಗೆ ಹೆಗ್ಗಣವೂ ಮುದ್ದು ಎನ್ನುವಂತೆ ಮಕ್ಕಳು ಕಂಡರೆ ಯಾರಿಗೆ ತಾನೆ ಮುದ್ದು ಅಥವಾ ಪ್ರೀತಿ ಇರುವುದಿಲ್ಲ ಹೇಳಿ? ಪುಟ್ಟಮಕ್ಕಳನ್ನು ನಾವು ಅತಿಯಾಗಿ ಅಲುಗಿಸುತ್ತೇವೆ. ಸಣ್ಣ ಮಕ್ಕಳನ್ನು ಎತ್ತಿ ಹಿಸುಕಿ ತಲೆಸವರಿ, ಮೈದಡವಿ ಎತ್ತಿ ಹಾಸಿಗೆಯ ಮೇಲೆ ಹಾಕುತ್ತೇವೆ. ಅವು ಸೂಕ್ಷ್ಮವೆಂದು ತಿಳಿದರೂ ಹೊಟ್ಟೆಯ ಭಾಗದಿಂದ ಎತ್ತಿಹಾಗೆಯೆ ಮಲಗಿಸಿದಾಗ ತಲೆ ಅಲ್ಲಾಡಿ ಅಪಾಯ ಗ್ಯಾರೆಂಟಿ ಆಗುತ್ತದೆ. ಸಣ್ಣಮಕ್ಕಳ ಒಳ‌ಅಂಗಾಂಗಗಳು ಬಹಳ ಮೃದುವಾಗಿರುತ್ತವೆ. ಎಷ್ಟೋ ಸಣ್ಣ ಮಕ್ಕಳಲ್ಲಿ ತಲೆಬುರುಡೆಯು ಪೂರ್ಣವಾಗಿ ಗಡುಸಾಗಿರುವುದಿಲ್ಲ ಎಷ್ಟೋ ಜನ ಕಂದಮ್ಮಗಳನ್ನು ಜೋರಾಗಿ ಅಲ್ಲಾಡಿಸುವುದು ಉಂಟು. ಇಂಥಹ ಚಟುವಟಿಕೆಗಳಿಂದ ಮಗುವಿನ ಮೇಲೆ ಆಗಬಹುದಾದ ಆಘಾತಕರ ಪರಿಣಾಮದ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ. ಅಮೇರಿಕ ಒಂದರಲ್ಲೇ ಇಂಥಹ ಆಘಾತಗಳ ಕಾರಣಗಳಿಂದಾಗಿ ಪ್ರತಿ ವರ್ಷ ೧,೧೦೦ ಮಕ್ಕಳು ಸಾವಿಗೀಡಾಗುತ್ತಾರೆ. ಅಮೇರಿಕೆಯ ಕ್ಯಾಲಿಪೋನಿಯಾದಲ್ಲಿರುವ ಮಕ್ಕಳ ಆಸ್ಪತ್ರೆ ಮತ್ತು ಮಕ್ಕಳ ಆರೋಗ್ಯ ಕೇಂದ್ರದ ರಾಬರ್ಟ್ ಸ್ಟೀಯರ್ ಅಮೇರಿಕೆಯ ಪತ್ರಿಕೆಯೊಂದರಲ್ಲಿ ತಿಳಿಸಿರುವಂತೆ ಆ ದೇಶದಲ್ಲಿ ಒಂದುವರೆ ಲಕ್ಷ ಪುಟ್ಟ ಮಕ್ಕಳು “ಶೆಕನ್ ಬೇಬಿ ಸಿಂಡ್ರೋಮ”ನ ಪರಿಣಾಮವಾಗಿ ಗಂಭೀರ ಸ್ವರೂಪದ ದೈಹಿಕ ಗಾಯಕ್ಕೆ ಒಳಗಾಗುತ್ತಾರೆ. ಇವರಲ್ಲಿ ಎಷ್ಟೋ ಮಕ್ಕಳು ಶಾಶ್ವತವಾಗಿ ಅಂಗವಿಕಲರಾಗುವುದೂ ಸತ್ಯ.

ಶೇಕನ್ ಬೇಬಿಸಿಂಡ್ರೋಮ್’ಗೆ ಗುರಿಯಾದ ಮಗುವಿನ ಚಿತ್ರ ಬಹಳ ಭಯಾನಕವಾದುದು. ಮಿದುಳಿನ ಒಳಗೆ ಆಘಾತದ ಪರಿಣಾಮವಾಗಿ ರಕ್ತ ಸ್ರಾವವುಂಟಾಗುತ್ತದೆ. ಕೆಲವೊಮ್ಮೆ ಕಣ್ಣುಗಳಿಂದ ರಕ್ತಬರುವುದೂ ಇರುತ್ತದೆ. ಆದರೆ ತಲೆಯ ಹೊರಗೆ ಯಾವುದೇ ಬಗೆಯ ಗಾಯವಾಗಿರುವ ಸೂಚನೆ ಇರುವುದಿಲ್ಲ ಇಂಥಹ ಸಂದರ್ಭಗಳಲ್ಲಿ ಮಕ್ಕಳು ತೀವ್ರ ಅಪಾಯಕ್ಕೆ ಗುರಿಯಾಗುತ್ತಾರೆ. ಸಾವೂ ಕೂಡ ಸಂಭವಿಸುವುದಿದೆ. ಅಮೇರಿಕೆಯ ಮಿಚಿಗನ್ ವಿಶ್ವದ್ಯಾಲಯದ ತಜ್ಞರ ತಂಡವೊಂದು ಸೇಕನ್‌ಬೇಬಿ ಸಿಂಡ್ರೋಮ್‌ಗೆ ಗುರಿಯಾದ ಮಕ್ಕಳ ಬಗೆಗೆ ವ್ಯಾಪಕ ಅಧ್ಯಯನ ನಡೆಸಿದೆ. ಇವರ ಅಧ್ಯಯನದ ಪ್ರಕಾರ ಆಘಾತಕ್ಕೆ ಒಳಗಾದ ಮಕ್ಕಳ ಕಣ್ಣುಗಳ ಪರಿಶೀಲನೆಯಿಂದ ಅಪಾಯದ ಪ್ರಮಾಣದಲ್ಲಿ ಅಂದಾಜಿಸಬಹುದು. ಕಣ್ಣುಗಳ ಒಳಗೆ ಆಗಿರುವ ಹಾನಿಯಂತೆ ಮಿದುಳೊಳಗೂ ಕೂಡ ಆಗಿರುತ್ತದೆ. ಅಮೇರಿಕೆಯಲ್ಲಿ ಹೀಗೆಯೇ ಪ್ರೀತಿಗಾಗಿ ಮ್ಯಥ್ಯೂನ್ ಎಂಬ ಮಗುವನ್ನು ಒಬ್ಬ ವ್ಯಕ್ತಿ ಪ್ರೀತಿಯಿಂದ ಮೇಲಕ್ಕೆ ಎತ್ತಿ ಅಲ್ಲಾಡಿಸುತ್ತ ಹಾಸಿಗೆಯ ಮೇಲೆ ಮಲಗಿಸಿದ ಅದಕ್ಕೆ ಕೂಡಲೆ ಶೇಕನ್‌ಬೇಬಿ ಸಿಂಡ್ರೋಮ್ ಆಗಿಯೇ ಬಿಟ್ಟಿತು. ಆ ಮಗುವನ್ನು ಆಸ್ಪತ್ರೆಗೆ ಹಾಕಲಾಯಿತು. ಆ ಮಗುವಿನ ತಲೆಯ ಬುರುಡೆ ಬಿರುಕು ಬಿಟ್ಟಿತು. ಆಂತರೀಕ ರಕ್ತ ಸ್ರಾವದಿಂದ ಮಿದುಳು ಎಷ್ಟು ಊದಿಕೊಂಡಿತ್ತೆಂದರೆ ಶಸ್ತ್ರ ಕ್ರಿಯೆಯ ಸಂದರ್ಭದಲ್ಲಿ ಮಿದುಳಿನಲ್ಲಿ ಚಿಮ್ಮಿದ ರಕ್ತ ಆಸ್ಪತ್ರೆಯ ನೆಲದಲ್ಲಿ ಮಡುಗಟ್ಟಿ ನಿಂತಿತು! ಕೊನೆಗೆ ಆ ಮಗುವಿಗೆ ಸಾವು ಸಂಭವಿಸಿತು. ಈ ಕಾರಣಕ್ಕಾಗಿ ಮಗುವನ್ನು ಎತ್ತಿಮುದ್ದಾಡಿದ ವ್ಯಕ್ತಿ ಅಪರಾಧಿ ಎಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಅದಕ್ಕಾಗಿ ನೆನಪಿರಲಿ ಪುಟ್ಟ ಮಕ್ಕಳನ್ನು ಎಚ್ಚಿರಿಕೆಯಿಂದ ನೋಡಿಕೊಳ್ಳಬೇಕಿದೆ. ಅದು ಮಲಗಿದಲ್ಲೇ ನೋಡುವುದು ಒಳ್ಳೆಯದು. ಮುದ್ದಿಸಲು ಕೈಗೆತ್ತಿಕೊಳ್ಳಬೇಕೆನಿಸಿದರೆ ಒಂದು ಹೊದಿಕೆಯ ಸಂಗಡ ಮೃದುವಾಗಿ ಎತ್ತಿಕೊಳ್ಳಬೇಕು. ಎಷ್ಟೇ ಜನ ಮಕ್ಕಳನ್ನು ಬಿಗಿಯಾಗಿ ಅಪ್ಪಿ ಹಿಡಿದುಕೊಳ್ಳುವುದು ಮೇಲಕ್ಕೆತ್ತುವುದು, ಎಸೆದು ಹಿಡಿಯುವುದು ಇಂಥಹ ಭಯಾನಕ ಹಿಂಸೆಯನ್ನು ಮಕ್ಕಳಿಗೆಂದಿಗೂ ಮಾಡಬಾರದು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...