Home / ಲೇಖನ / ವಿಜ್ಞಾನ / ಮಗುವನ್ನು ಅಲ್ಲಾಡಿಸಬೇಡಿ ಜೋಕೆ?!!

ಮಗುವನ್ನು ಅಲ್ಲಾಡಿಸಬೇಡಿ ಜೋಕೆ?!!

ಹೆತ್ತವರಿಗೆ ಹೆಗ್ಗಣವೂ ಮುದ್ದು ಎನ್ನುವಂತೆ ಮಕ್ಕಳು ಕಂಡರೆ ಯಾರಿಗೆ ತಾನೆ ಮುದ್ದು ಅಥವಾ ಪ್ರೀತಿ ಇರುವುದಿಲ್ಲ ಹೇಳಿ? ಪುಟ್ಟಮಕ್ಕಳನ್ನು ನಾವು ಅತಿಯಾಗಿ ಅಲುಗಿಸುತ್ತೇವೆ. ಸಣ್ಣ ಮಕ್ಕಳನ್ನು ಎತ್ತಿ ಹಿಸುಕಿ ತಲೆಸವರಿ, ಮೈದಡವಿ ಎತ್ತಿ ಹಾಸಿಗೆಯ ಮೇಲೆ ಹಾಕುತ್ತೇವೆ. ಅವು ಸೂಕ್ಷ್ಮವೆಂದು ತಿಳಿದರೂ ಹೊಟ್ಟೆಯ ಭಾಗದಿಂದ ಎತ್ತಿಹಾಗೆಯೆ ಮಲಗಿಸಿದಾಗ ತಲೆ ಅಲ್ಲಾಡಿ ಅಪಾಯ ಗ್ಯಾರೆಂಟಿ ಆಗುತ್ತದೆ. ಸಣ್ಣಮಕ್ಕಳ ಒಳ‌ಅಂಗಾಂಗಗಳು ಬಹಳ ಮೃದುವಾಗಿರುತ್ತವೆ. ಎಷ್ಟೋ ಸಣ್ಣ ಮಕ್ಕಳಲ್ಲಿ ತಲೆಬುರುಡೆಯು ಪೂರ್ಣವಾಗಿ ಗಡುಸಾಗಿರುವುದಿಲ್ಲ ಎಷ್ಟೋ ಜನ ಕಂದಮ್ಮಗಳನ್ನು ಜೋರಾಗಿ ಅಲ್ಲಾಡಿಸುವುದು ಉಂಟು. ಇಂಥಹ ಚಟುವಟಿಕೆಗಳಿಂದ ಮಗುವಿನ ಮೇಲೆ ಆಗಬಹುದಾದ ಆಘಾತಕರ ಪರಿಣಾಮದ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ. ಅಮೇರಿಕ ಒಂದರಲ್ಲೇ ಇಂಥಹ ಆಘಾತಗಳ ಕಾರಣಗಳಿಂದಾಗಿ ಪ್ರತಿ ವರ್ಷ ೧,೧೦೦ ಮಕ್ಕಳು ಸಾವಿಗೀಡಾಗುತ್ತಾರೆ. ಅಮೇರಿಕೆಯ ಕ್ಯಾಲಿಪೋನಿಯಾದಲ್ಲಿರುವ ಮಕ್ಕಳ ಆಸ್ಪತ್ರೆ ಮತ್ತು ಮಕ್ಕಳ ಆರೋಗ್ಯ ಕೇಂದ್ರದ ರಾಬರ್ಟ್ ಸ್ಟೀಯರ್ ಅಮೇರಿಕೆಯ ಪತ್ರಿಕೆಯೊಂದರಲ್ಲಿ ತಿಳಿಸಿರುವಂತೆ ಆ ದೇಶದಲ್ಲಿ ಒಂದುವರೆ ಲಕ್ಷ ಪುಟ್ಟ ಮಕ್ಕಳು “ಶೆಕನ್ ಬೇಬಿ ಸಿಂಡ್ರೋಮ”ನ ಪರಿಣಾಮವಾಗಿ ಗಂಭೀರ ಸ್ವರೂಪದ ದೈಹಿಕ ಗಾಯಕ್ಕೆ ಒಳಗಾಗುತ್ತಾರೆ. ಇವರಲ್ಲಿ ಎಷ್ಟೋ ಮಕ್ಕಳು ಶಾಶ್ವತವಾಗಿ ಅಂಗವಿಕಲರಾಗುವುದೂ ಸತ್ಯ.

ಶೇಕನ್ ಬೇಬಿಸಿಂಡ್ರೋಮ್’ಗೆ ಗುರಿಯಾದ ಮಗುವಿನ ಚಿತ್ರ ಬಹಳ ಭಯಾನಕವಾದುದು. ಮಿದುಳಿನ ಒಳಗೆ ಆಘಾತದ ಪರಿಣಾಮವಾಗಿ ರಕ್ತ ಸ್ರಾವವುಂಟಾಗುತ್ತದೆ. ಕೆಲವೊಮ್ಮೆ ಕಣ್ಣುಗಳಿಂದ ರಕ್ತಬರುವುದೂ ಇರುತ್ತದೆ. ಆದರೆ ತಲೆಯ ಹೊರಗೆ ಯಾವುದೇ ಬಗೆಯ ಗಾಯವಾಗಿರುವ ಸೂಚನೆ ಇರುವುದಿಲ್ಲ ಇಂಥಹ ಸಂದರ್ಭಗಳಲ್ಲಿ ಮಕ್ಕಳು ತೀವ್ರ ಅಪಾಯಕ್ಕೆ ಗುರಿಯಾಗುತ್ತಾರೆ. ಸಾವೂ ಕೂಡ ಸಂಭವಿಸುವುದಿದೆ. ಅಮೇರಿಕೆಯ ಮಿಚಿಗನ್ ವಿಶ್ವದ್ಯಾಲಯದ ತಜ್ಞರ ತಂಡವೊಂದು ಸೇಕನ್‌ಬೇಬಿ ಸಿಂಡ್ರೋಮ್‌ಗೆ ಗುರಿಯಾದ ಮಕ್ಕಳ ಬಗೆಗೆ ವ್ಯಾಪಕ ಅಧ್ಯಯನ ನಡೆಸಿದೆ. ಇವರ ಅಧ್ಯಯನದ ಪ್ರಕಾರ ಆಘಾತಕ್ಕೆ ಒಳಗಾದ ಮಕ್ಕಳ ಕಣ್ಣುಗಳ ಪರಿಶೀಲನೆಯಿಂದ ಅಪಾಯದ ಪ್ರಮಾಣದಲ್ಲಿ ಅಂದಾಜಿಸಬಹುದು. ಕಣ್ಣುಗಳ ಒಳಗೆ ಆಗಿರುವ ಹಾನಿಯಂತೆ ಮಿದುಳೊಳಗೂ ಕೂಡ ಆಗಿರುತ್ತದೆ. ಅಮೇರಿಕೆಯಲ್ಲಿ ಹೀಗೆಯೇ ಪ್ರೀತಿಗಾಗಿ ಮ್ಯಥ್ಯೂನ್ ಎಂಬ ಮಗುವನ್ನು ಒಬ್ಬ ವ್ಯಕ್ತಿ ಪ್ರೀತಿಯಿಂದ ಮೇಲಕ್ಕೆ ಎತ್ತಿ ಅಲ್ಲಾಡಿಸುತ್ತ ಹಾಸಿಗೆಯ ಮೇಲೆ ಮಲಗಿಸಿದ ಅದಕ್ಕೆ ಕೂಡಲೆ ಶೇಕನ್‌ಬೇಬಿ ಸಿಂಡ್ರೋಮ್ ಆಗಿಯೇ ಬಿಟ್ಟಿತು. ಆ ಮಗುವನ್ನು ಆಸ್ಪತ್ರೆಗೆ ಹಾಕಲಾಯಿತು. ಆ ಮಗುವಿನ ತಲೆಯ ಬುರುಡೆ ಬಿರುಕು ಬಿಟ್ಟಿತು. ಆಂತರೀಕ ರಕ್ತ ಸ್ರಾವದಿಂದ ಮಿದುಳು ಎಷ್ಟು ಊದಿಕೊಂಡಿತ್ತೆಂದರೆ ಶಸ್ತ್ರ ಕ್ರಿಯೆಯ ಸಂದರ್ಭದಲ್ಲಿ ಮಿದುಳಿನಲ್ಲಿ ಚಿಮ್ಮಿದ ರಕ್ತ ಆಸ್ಪತ್ರೆಯ ನೆಲದಲ್ಲಿ ಮಡುಗಟ್ಟಿ ನಿಂತಿತು! ಕೊನೆಗೆ ಆ ಮಗುವಿಗೆ ಸಾವು ಸಂಭವಿಸಿತು. ಈ ಕಾರಣಕ್ಕಾಗಿ ಮಗುವನ್ನು ಎತ್ತಿಮುದ್ದಾಡಿದ ವ್ಯಕ್ತಿ ಅಪರಾಧಿ ಎಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಅದಕ್ಕಾಗಿ ನೆನಪಿರಲಿ ಪುಟ್ಟ ಮಕ್ಕಳನ್ನು ಎಚ್ಚಿರಿಕೆಯಿಂದ ನೋಡಿಕೊಳ್ಳಬೇಕಿದೆ. ಅದು ಮಲಗಿದಲ್ಲೇ ನೋಡುವುದು ಒಳ್ಳೆಯದು. ಮುದ್ದಿಸಲು ಕೈಗೆತ್ತಿಕೊಳ್ಳಬೇಕೆನಿಸಿದರೆ ಒಂದು ಹೊದಿಕೆಯ ಸಂಗಡ ಮೃದುವಾಗಿ ಎತ್ತಿಕೊಳ್ಳಬೇಕು. ಎಷ್ಟೇ ಜನ ಮಕ್ಕಳನ್ನು ಬಿಗಿಯಾಗಿ ಅಪ್ಪಿ ಹಿಡಿದುಕೊಳ್ಳುವುದು ಮೇಲಕ್ಕೆತ್ತುವುದು, ಎಸೆದು ಹಿಡಿಯುವುದು ಇಂಥಹ ಭಯಾನಕ ಹಿಂಸೆಯನ್ನು ಮಕ್ಕಳಿಗೆಂದಿಗೂ ಮಾಡಬಾರದು.
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...