Home / ಲೇಖನ / ಇತರೆ / ವಿಜ್ಞಾನಕ್ಕೆ ಸವಾಲು

ವಿಜ್ಞಾನಕ್ಕೆ ಸವಾಲು

ಕೊಪ್ಪಳ ಸಮೀಪದಲ್ಲಿ ಭಾಗ್ಯ ನಗರವಿದೆ. ಅಲ್ಲಿ ವಿನಯ ವೀರೇಶ ಸವಡಿ ಎಂಬ ನಾಲ್ಕು ವರ್‍ಷದ ಬಾಲಕನಿದ್ದಾನೆ. ಮನೆಯಲ್ಲಿ ಕನ್ನಡ, ಶಾಲೆಯಲ್ಲಿ ಕನ್ನಡ, ಸ್ನೇಹಿತರೂ ಕನ್ನಡ ಮಾತನಾಡುವರು. ಶಾಲೆಯಲ್ಲಿ ನೆರೆಹೊರೆಯವರೂ ಕನ್ನಡ ಮಾತನಾಡುವರು. ಈ ಬಾಲಕನ ಅಣ್ಣ ವಿಕಾಸ ವೀರೇಶ ಸವಡಿಗೂ ಕನ್ನಡ ಮಾತ್ರ ಬರುವುದು. ತಾಯಿಗೆ ಕನ್ನಡ ಮಾತ್ರ ಗೊತ್ತಿರುವುದು, ತಂದೆ-ವೀರೇಶ ಸವಡಿಗೆ ಅಲ್ಪ ಸ್ವಲ್ಪ ಹಿಂದಿ ಗೊತ್ತು ! ಅಷ್ಟು ಬಿಟ್ಟರೆ ಯಾರಿಗೂ ಹಿಂದಿಯ ಗಂಧ ಗಾಳಿಯೇ ತಿಳಿಯದು ! ಆದರೆ.. ವಿನಯ ವೀರೇಶ ಸವಡಿ ಮಾತ್ರ ಮಾತನಾಡುವುದು ಹಿಂದಿಯಲ್ಲಿ. ಕನ್ನಡವೆಂದರೆ… ಅರ್‍ಥವಾಗದು… ಹೇಗಿದೆ ವಿನಯ ವೀರೇಶ ಸವಡಿಯ ಪೂರ್ವಜನ್ಮದ ಸುಕೃತ ಫಲ…??

ಯಾವುದೇ ಮಗು ಹುಟ್ಟಿದ ವರ್ಷದೊಳಗೆ ಮಾತನಾಡಲು ಶುರು ಮಾಡುತ್ತದೆ. ಆದರೆ.. ವಿನಯ ವೀರೇಶ ಸವಡಿ ಸುಮಾರು ಎರಡೂವರೆ ವರ್ಷ ಕಳೆದರೂ ಬರೀ ತೊದಲು ಮಾತನ್ನು ಕೂಡಾ ಆಡಿಲ್ಲ. ಇದು ಮನೆಯವರಿಗೆಲ್ಲ ಭಾರೀ ತಲೆನೋವು ತಂದಿತ್ತು. ಬರುಬರುತ್ತಾ ಮೂರನೆಯ ವರ್ಷಕ್ಕೆ ತೊದಲು ನುಡಿ ಮೊದಲ ನುಡಿ ಮೊದಲಾಯಿತು! ಅಮ್ಮಾ ಎಂದರೆ- ಆಯಿ, ಅಪ್ಪ ಎಂದರೆ ಅಬ್ಬ, ಹೋಗು ಎಂದರೆ- ತು ಜಾವ್, ಊಟಕ್ಕೆ ಬಾರೋ ಎಂದರೆ ಖಾನಾ ರೆಡಿ ಹೈ ? ಎನ್ನುವ.

ಇವರು ಕನ್ನಡ ಎಂದರೆ- ಬಾಲಕ ಮಾತ್ರ ಹಿಂದಿ ನುಡಿವ. ಟೀವಿ ಪ್ರಭಾವವಿಲ್ಲ. ಪರಿಸರ ಒತ್ತಡವಿಲ್ಲ. ಬಾಲಕ ಹಿಂದಿಯಲ್ಲಿ ಉತ್ತರಿಸುವ ಈಗಾಗಲೇ ಬಳ್ಳಾರಿ ಆಸ್ಪತ್ರೆಗೆ ಅಂಡಲೆದಿದ್ದು ಆಯಿತು. ಪರಿಹಾರವಿಲ್ಲ. ಮನೋವೈದ್ಯರು ಭಾಷಾ ವಿಜ್ಞಾನಿಗಳಿಗೆ ಈ ಬಾಲಕನಿಂದು ಸವಾಲಾಗಿದ್ದಾನೆ! ಈ ಬಾಲಕನ ಮಾತಿನ ರಹಸ್ಯ ಭೇದಿಸಲು ಇನ್ನು ಯಾರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಜನ್ಮ ರಹಸ್ಯನೂ ಇರಬಹುದೇನೋ.. ಸಾವಿರಕ್ಕೆ ಒಬ್ಬರು ಈ ರೀತಿ ಅಚ್ಚರಿ ಮೂಡಿಸಲು ಸಾಧ್ಯವಿದೆಯೆಂಬುದನ್ನು ಯಾರೂ ತಳ್ಳಿ ಹಾಕುವಂತಿಲ್ಲ.

ಏನೇ ಇರಲಿ ಎಂತ ಮಾತನಾಡಲಿ ಎನಯ ವೀರೇಶ ಸವಡಿಯ ಮಾತಿನ ಮರ್‍ಮ ಇಂದಲ್ಲ ನಾಳೇ ಬೆಳಕಿಗೆ ಬಂದೇ ಬರುವುದು! ಬರುಬರುತ್ತಾ ಬೆಳೆಬೆಳೆಯುತ್ತಾ ಸದರಿ ಬಾಲಕನೇ ಮಾತಿನ ಮರ್ಮ ಹೊರಗೆಡುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗದು.

ನಾವು ನೀವು ಎಲ್ಲರೂ ಕಾದು ನೋಡೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...