Home / ಲೇಖನ / ಇತರೆ / ವಜ್ರ ಕತೆ

ವಜ್ರ ಕತೆ

ವಜ್ರದ ಗಣಿಗಳು ನಮ್ಮ ದೇಶದಲ್ಲಿ ಮಾತ್ರ ಇದ್ದುದು. ಮೊತ್ತ ಮೊದಲು ವಜ್ರವನ್ನು ಬಳಸಿದ ಹಾಗೂ ಪರಿಚಯಿಸಿದ ದೇಶ ಭಾರತ!

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕೊಲ್ಲೂರು ಗಣಿಯಿದೆ. ಇದು ವಿಶ್ವಕ್ಕೇ ಮಾದರಿ. ಬಹು ದೊಡ್ಡ ಗಣಿಯಾಗಿದೆ. ಈ ಗಣಿಯಿಂದ ಕೊಹಿನೂರ್ ವಜ್ರವನ್ನು ಹೊರ ತೆಗೆದಿದ್ದು! ಇದು ಇಡೀ ವಿಶ್ವದಲ್ಲೇ ಅತಿ ದೊಡ್ಡ ವಜ್ರದ ಹರಳಾಗಿದ್ದು ಅದು ಸಾವಿರಾರು ಕೋಟಿ ಬೆಲೆ ಬಾಳುವುದು!

ಭವ್ಯ ಭಾರತವನ್ನು ಸುಮಾರು ೧೫೦ ವರ್ಷಗಳ ಕಾಲ ಬ್ರಿಟೀಶರು ಆಳಿದರು. ಆಗ ಬೆಲೆ ಬಾಳುವ ವಸ್ತು ಒಡವೆ ಮುತ್ತು ರತ್ನ ವಜ್ರ ವೈಡೂರ್ಯಗಳನ್ನು ಹಡಗಿನ ತುಂಬಾ ಬ್ರಿಟನ್‌ಗೆ ಸಾಗಿಸಿದರು! ಅದರಲ್ಲಿ ಕೊಹಿನೂರ್‌ ವಜ್ರನೂ ಸೇರಿದೆ.

ಜುಲೈ ೨೦೧೫ ರ ಆರಂಭ ದಿನಗಳಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ – “೨೦೦ ವರ್ಷಗಳ ಕಾಲ ಭಾರತವನ್ನು ಆಳಿ ಲೂಟಿ ಮಾಡಿದ್ದಕ್ಕೆ ಪ್ರತಿಯಾಗಿ ಭವ್ಯ ಭಾರತಕ್ಕೆ ಬ್ರಿಟನ್ ಸರ್ಕಾರ ಪೂರ್ಣನಷ್ಟ ಪರಿಹಾರವನ್ನು ತುಂಬಿ ಕೊಡಲೇಬೇಕು” ಎಂದು ವಾದಿಸಿದ್ದರು.

ಈಗ ಇದರ ಬೆನ್ನಲ್ಲೇ ದಿನಾಂಕ ೨೮-೦೭-೨೦೧೫ ರಂದು ಮಂಗಳವಾರದ ದಿನದಂದು “ಜಗತ್ ಪ್ರಸಿದ್ಧ ನಮ್ಮ ಕೊಹಿನೂರ್‌ ವಜ್ರವನ್ನು ಭವ್ಯ ಭಾರತಕ್ಕೆ ಈ ಕೂಡಲೇ ಹಿಂದಿರುಗಿಸತಕ್ಕದ್ದು” ಎಂದು ಭಾರತೀಯ ಮೂಲದ ಬ್ರಿಟನ್ ಸಂಸದ ಕೀತ್ ವಾಜ್ ಎಂಬುವರು ಧ್ವನಿಗೂಡಿಸಿರುವರು.

ಇದೇ ನವೆಂಬರ್ ೨೦೧೫ ರಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಬ್ರಿಟನ್ ದೇಶಕ್ಕೆ ಭೇಟಿ ನೀಡುತ್ತಿದ್ದು ಆ ವೇಳೆಯಲ್ಲಿ ಅವರ ಕೊಹಿನೂರ್‌ ವಜ್ರವನ್ನು ಭಾರತಕ್ಕೆ ಮರಳಿಸಿ ಎಂದು ಕೀತ್‌ವಾಜ್ ಸ್ಥಳೀಯ ಸರ್ಕಾರವನ್ನು ಗಟ್ಟಿಯಾಗಿ ಆಗ್ರಹಿಸಿರುವರು.

“ಶಶಿ ತರೂರ್ ಅವರ ಮಾತುಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಯನ್ನು ನಾನು ಸ್ವಾಗತಿಸುತ್ತೇನೆ. ಅವರ ನಿಲುವುಗಳನ್ನು ನಾನೂ ಕೂಡಾ ವ್ಯಕ್ತ ಪಡಿಸುತ್ತೇನೆ. ಅವರ ಅಗ್ರಹ ಅಪ್ಪಟವಾಗಿದ್ದು ಈ ಬಗ್ಗೆ ಎಲ್ಲರೂ ಯೋಚಿಸುವ ಅಗತ್ಯವಿದೆಯೆಂದು” ಕೀತ್ ವಾಜ್ ಮೇಲಿಂದ ಮೇಲೆ ವಾದಿಸಿದ್ದಾರೆ.

ಈ ಎಲ್ಲ ಬೆಳವಣಿಗೆಯನ್ನು ಗಮನಿಸಿದರೆ, ಭಾರತಕ್ಕೆ ಸರ್ವ ಸ್ವಾತಂತ್ರ್ಯವನ್ನೇ ಕೊಟ್ಟ ಅಂದಿನ ಬ್ರಿಟನ್ ಸರ್ಕಾರ ಇಂದು ಕೊಹಿನೂರ್‌ ವಜ್ರವನ್ನು ಮರಳಿಸಿ ಬಿಡುವುದು… ಇಷ್ಟೆಲ್ಲ ಪ್ರತಿಧ್ವನಿ ಮೊಳಗಿದ ಮೇಲೆ ಅದನ್ನು ಅವರು ತಮ್ಮ ಬಳಿ ಇಟ್ಟುಕೊಂಡರೆ ಸರಿ ಕಾಣದು ಅಲ್ಲವೇ?!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...