Home / ಲೇಖನ / ಇತರೆ / ಯಾವುದು ಸತ್ಯ?

ಯಾವುದು ಸತ್ಯ?

ಬಹಳ ಹಿಂದೆ- ಭವ್ಯ ಭಾರತ ಕಂಡ ಅಪ್ರತಿಮ ಅಧ್ಯಾತ್ಮಿಕ ತತ್ವ ಸಿದ್ಧಾಂತಿ ಮಹಾ ಸಿದ್ಧಿ ಸಾಧಕರೊಬ್ಬರಿದ್ದರು. ಅವರ ಹೆಸರು- ರಮಣ ಮಹರ್ಷಿಗಳೆಂದು. ಅವರಿಗೆ ಬಹಳ ಜನ ಶಿಷ್ಯರಿದ್ದರು. ಅವರಲ್ಲಿ ಮರುಳ ಸಿದ್ದಯ್ಯ, ಬಸಪ್ಪಯ್ಯ ವಲಿಯ, ಸೀನ, ಮೃತ್ಯುಂಜಯ, ರಾಜ, ಕೊಟ್ರಯ್ಯ… ಎಂದೂ ಇದ್ದರು.

ಒಮ್ಮೆ- ಉಪದೇಶದ ಮಧ್ಯೆ ರಮಣ ಮಹರ್ಷಿಗಳು “ಅಯ್ಯಾ ಸತ್ಯ ಯಾವುದು? ನಿಮ್ಮಲ್ಲಿ ಯಾರು ಹೇಳ ಬಲ್ಲಿರಿ?” ಎಂದು ಅಲ್ಲಿದ್ದ ತಮ್ಮ ಶಿಷ್ಯರೆಲ್ಲರನೂ… ಒಂದು ಕಡೆಯಿಂದ ಕೇಳುತ್ತಾ ಹೋದರು. ಆಗ ಶಿಷ್ಯರೆಲ್ಲರು ತಲೆ ಕೆರೆಯುತ್ತಾ ಕುಳಿತರು.

“ಸ್ವಾಮಿಗಳೆ… ನಾವು ಕಾಣುವುದೆಲ್ಲ ಸತ್ಯ! ಉಳಿದ್ದಿದ್ದೆಲ್ಲ ಮಿಥ್ಯ” ಎಂದು ಮರುಳ ಸಿದ್ಧಯ್ಯ ಸ್ವಾಮಿಗಳು ಅಂದರು.

ಮೃತ್ಯುಂಜಯ ಎದ್ದು ನಿಂತು- “ಸ್ವಾಮಿಗಳೆ ಯಾವುದು ಸತ್ಯವಲ್ಲ! ಸತ್ಯವಿದ್ದರೆಲ್ಲವೇ ಸತ್ಯವೆನ್ನುವುದು! ಮಿಥ್ಯವನ್ನು ನಾವು ಸತ್ಯವೆಂದು ನಂಬಿದ್ದೇವೆ. ಕಾಣುವುದೆಲ್ಲ ಮಿಥ್ಯ ಸತ್ಯ ಇಲ್ಲದೇ ಇಲ್ಲ…” ಎಂದು ವಾದ ಮಾಡುತ್ತಾ ನಿಂತ.

ರಮಣ ಮಹರ್ಷಿಗಳು- “ಶಿಷ್ಯ ಮೃತ್ಯುಂಜಯ ಕೇಳಿದಕ್ಕೆ ಮಾತ್ರ ಉತ್ತರಿಸು ನೀ ಕುಳಿತುಕೋ.” ಎಂದು ಮೃತ್ಯುಂಜಯನ ಮೇಲೆ ಸಿಟ್ಟಾದರು.

ಸೀನ ಎದ್ದು ನಿಂತು “ಸ್ವಾಮಿಗಳೆ ಸತ್ಯ ಮಿಥ್ಯ ಎರಡು ಕಣ್ಣಿಗೆ ಹತ್ತಿರ. ಯಾವುದು ಸತ್ಯ ಯಾವುದು ಮಿಥ್ಯ ಕಣ್ಣಿಗೆ ತಿಳಿಯದ ಸಂಗತಿಗಳು” ಎಂದ.

“ಸ್ವಾಮಿಗಳೆ… ನಾನು ಮೃತ್ಯುಂಜಯ ಹಾಗೂ ಸೀನ ಹೇಳಿದ್ದನ್ನೇ ಅನುಮೋದಿಸುತ್ತೇನೆ. ನನಗೇನು ಹೆಚ್ಚಿಗೆ ತಿಳಿಯದು” ಎಂದು ವಲಿಯ ಹೇಳಿ ಕುಳಿತ.

ಬಸಪ್ಪಯ್ಯ ಎದ್ದು ನಿಂತು- “ಸ್ವಾಮಿಗಳೆ ನನಗೇನು ಹೊಳೆಯದು. ನನಗೆ ಎರಡು ದಿನ ಕಾಲಾವಕಾಶ ನೀಡಿದಲ್ಲಿ ಅಧ್ಯಯನ ಮಾಡಿ ಬಂದು ಅರುಹುವೆ” ಎಂದ.

ಅಲ್ಲಿದ್ದ ರಾಜ, ಕೊಟ್ರಯ್ಯ ತಲೆ ತಗ್ಗಿಸಿ- “ಮೌನಂ ಸರ್ವತ್ರ ಸಾಧನಂ…” ಎಂದು ಕುಳಿತ್ತಿದ್ದರು.

“ಅಯ್ಯಾ ಶಿಷ್ಯರೆ.. ನಾ ಎನ್ನುವ ಪ್ರಜ್ಞೆಯಷ್ಟೇ ಸತ್ಯಾಸ್ಯ ಸತ್ಯ! ಉಳಿದಿದ್ದೆಲ್ಲ ಮಿಥ್ಯಸ್ಯಾ ಮಿಥ್ಯ… ನೋಡಿ ಎಷ್ಟು ಸರಳ ಸುಂದರವಾಗಿದೆ” ಎಂದು ರಮಣ ಮಹರ್ಷಿಗಳು ಅಂದರು.

ಅಲ್ಲಿಗೆ ಅಂದಿನ ಕಾರ್ಯಕ್ರಮವು ಮುಗಿಯಿತು. ಶಿಷ್ಯರೆಲ್ಲ ಎದ್ದು ಹೊರಟರು. ಸ್ವಾಮಿಗಳು ಧ್ಯಾನಸ್ಥರಾದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...