Home / ಲೇಖನ / ಇತರೆ / ಮೂರು ಕತೆ

ಮೂರು ಕತೆ

ಒಮ್ಮೆ- ರಮಣಮಹರ್ಷಿಗಳು ತಮ್ಮ ಶಿಷ್ಯರಿಗೆ ಉಪದೇಶ ನೀಡುತ್ತಿದ್ದರು. ಉಪದೇಶದ ಮಧ್ಯೆ ಒಂದು ಪ್ರಶ್ನೆ ಎತ್ತಿದರು. ‘ಜೀವನದಲ್ಲಿ ಮೂರು ಸೂತ್ರಗಳ್ಯಾವುವು?’ ಎಂದು ಅಲ್ಲಿದ್ದ ಶಿಷ್ಯರೆಲ್ಲರನ್ನೂ ಕೇಳುತ್ತಾ ಹೋದರು.

ಮೊತ್ತ ಮೊದಲು ಮರುಳ ಸಿದ್ದಯ್ಯ ಸ್ವಾಮಿಗಳದ್ದು- ಸ್ವಾಮಿಗಳ ಜೀವನದಲ್ಲಿ ಮಾತು, ಮಾನ, ಮರ್‍ಯಾದೆ ಎಂಬ ಮೂರು ಮುತ್ತುಗಳು ಒಡೆದು ಹೋಗದಂತೆ ಬಲು ಎಚ್ಚರಿಕೆಯಿಂದ ಬದುಕಬೇಕು…’ ಎಂದ.

“ಜೀವನದಲ್ಲಿ ನಾಲಿಗೆ-ಕಚ್ಛೆ-ಪಂಚೆ ಈ ಮೂರು ಜಾರದಂತೆ ಎಚ್ಚರಿಕೆ ವಹಿಸಬೇಕು. ಈ ಮೂರು ಒಮ್ಮೆ ಜಾರಿದರೆ ಇನ್ನೂ ಫಲವಿಲ್ಲ ಸ್ವಾಮಿಗಳೆ…” ಎಂದ ಮೃತ್ಯುಂಜಯ.

ಅಲ್ಲಿದ್ದ ಸೀನ್ಯ ಎದ್ದು ನಿಂತು ‘ಬಾಲ್ಯ, ಪ್ರೌಢ, ಯೌವ್ವನ ಈ ಮೂರು ಹಂತಗಳು ಹಾಳಾಗದಂತೆ ಬಲು ಎಚ್ಚರಿಕೆಯಿಂದ ಜೋಪಾನ ಮಾಡತಕ್ಕದ್ದು’ ಎಂದ.

ಗೌಡಪ್ಪನ ಸರದಿ ಬಂತು “ಸ್ವಾಮಿ… ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಆಡಬೇಡ, ಕೆಟ್ಟದ್ದನ್ನು ಕೇಳಬೇಡ ಎಂಬ ಮೂರು ಸೂತ್ರ ಪಾಲಿಸಿದರೆ ಯಾವುದೇ ಭಯವಿಲ್ಲ” ಎಂದ.

ವಲಿಯ ಎದ್ದು ನಿಂತ ‘ಸ್ವಾಮಿ… ಬ್ರಹ್ಮ ವಿಷ್ಣು ಮಹೇಶ್ವರರ ನಿತ್ಯ ಮರೆಯಬಾರದು ಅವರೇ ಜೀವನ ಆಧಾರವೆಂದ.’

ಎಲಿವಾಳ ಅವರು ಎದ್ದು ನಿಂತು – ‘ಗುರುಗಳೆ ಜೀವನದಲ್ಲಿ ನಾನು ಎಂಬುದ ಬಿಡಬೇಕು. ನಾವು ಎಂಬುದ ಹಿಡಿಬೇಕು. ಇನ್ನೊಬ್ಬರ ಬಗ್ಗೆ ಅಸಹ್ಯ ಪಡುವುದ ಬಿಡಬೇಕು’ ಎಂದ.

ರಮಣ ಮಹರ್ಷಿಗಳು ಕ್ಷಣ ಮೌನ ವಹಿಸಿ- ‘ಶಿಷ್ಯರೆ… ಮಾನವ ಜನ್ಮ ದೊಡ್ಡದು. ಅದನ್ನು ಸಾರ್ಥಕ ಮಾಡಿಕೊಳ್ಳಬೇಕೆಂದರೆ…. ಮೊದಲು ಸರಳ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಎರಡನೆಯದಾಗಿ ಮೌನವೇ ಆಭರಣ ಎಂಬುದನ್ನು ಪಾಲಿಸಬೇಕು. ದೇವರಿಗೆ ಸದಾ ಶರಣಾಗುವುದು. ಈ ಮೂರು ಸೂತ್ರದಲ್ಲಿ ಏನೆಲ್ಲ ಅಡಗಿದೆ. ಈ ಮೂರು ತತ್ವಗಳ ಪಾಲಿಸುವುದು ಕಡು ಕಷ್ಟ. ಈ ಮೂರು ಸೂತ್ರ ಪಾಲಿಸಿದರೆ ೧೪ ಲೋಕಂಗಳ ಗೆಲ್ಲಬಹುದು…’ ಎಂದರು.

ಶಿಷ್ಯರೆಲ್ಲ.. ಗುರುಗಳಿಗೆ ಅಡ್ಡ ಬಿದ್ದರು. ಮಹರ್ಷಿಗಳು ಹರ್ಷದಿ ಆಶೀರ್‍ವಾದಿಸಿದರು.

ಅಲ್ಲಿಗೆ ಅಂದಿನ ಉಪದೇಶಾಮೃತ ಮುಕ್ತಾಯಗೊಂಡಿತು. ಗುರುಗಳು ಧ್ಯಾನಸಕ್ತರಾದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...