Home / ಲೇಖನ / ಇತರೆ / ಮೊದಲ ಕತೆ

ಮೊದಲ ಕತೆ

ಸ್ವಾಮಿ ವಿವೇಕಾನಂದರು ಚಿಕಾಗೋ ನಗರದಲ್ಲಿದ್ದರು. ಒಮ್ಮೆ ಸಭೆಯಲ್ಲಿ ಒಬ್ಬ ಎದ್ದು ನಿಂತು- “ನಮ್ಮ ಸಂಸ್ಕೃತಿ ಮೊದಲೋ? ವಿಶ್ವದ ದೇವರುಗಳು ಮೊದಲೋ?” ಎಂದು ಪ್ರಶ್ನಿಸಿರ್ದ.

ಇಡೀ ಸಭೆಯೇ ನಿಶ್ಯಬ್ದವಾಯಿತು. ಅಲ್ಲಿದ್ದವರೆಲ್ಲ ಸ್ವಾಮಿ ವಿವೇಕಾನಂದರನ್ನು ಕುತೂಹಲದಿಂದ ನೋಡುತ್ತಾ ಕುಳಿತರು.

ಸ್ವಾಮಿ ವಿವೇಕಾನಂದರು- “ನನಗಿಂದು ಭಲೇ ಖುಷಿಯಾಗುತ್ತಿದೆ. ನನ್ನ ನೂರಾರು ಭಾಷಣ ಇಲ್ಲಿ ಚಿಕಾಗೋ ನಗರದಲ್ಲಿ ಪ್ರಭಾವ ಬೀರಿದೆಯೆನಿಸುವುದು ಬಹಳ ಒಳ್ಳೆಯ ಪ್ರಶ್ನೆಯನ್ನೇ ನೀವು ಕೇಳಿರುವಿರಿ. ಇದೊಂದು ಬೀಜವೃಕ್ಷದ ನ್ಯಾಯವಿದ್ದಂತೇ… ಮರ ಮೊದಲೋ? ಬೀಜ ಮೊದಲೋ? ಎಂಬ ಗಂಭೀರವಾದ ವಾದ ವಿವಾದ! ಸಂಸ್ಕೃತಿ ದೇವರು ಏಕಕಾಲದಲ್ಲಿ ಅಸ್ಥಿತ್ವಕ್ಕೆ ಬಂದಿವೆ. ಮನುಷ್ಯ ದೇವರನ್ನು ಸೃಷ್ಠಿಸಿದ ಎನ್ನುವ ವಾದ ಉದ್ಧಂಡತನವಾದ. ದೇವರು ಮೊದಲು, ನಂತರ ಮನುಷ್ಯ, ಈವತ್ತು ಮನುಷ್ಯ ಇತರೆ ಮನುಷ್ಯರನ್ನು ಅರ್ಥ ಮಾಡಿಕೊಂಡಿಲ್ಲ. ತನ್ನನ್ನು ತಾನು ಅರಿತಿಲ್ಲ. ಇನ್ನು ಗೌರವ ಕೊಡುವುದಿಲ್ಲ ಇವರೆಲ್ಲ ಮನುಷ್ಯರಲ್ಲ, ರಕ್ಕಸರು, ರಾವಣರು, ಸೈತಾನರು, ದೇವರು ಮನುಷ್ಯರೊಳಗಿರುವುದರಿಂದ ಒಬ್ಬರಿಗೆ ಒಬ್ಬರು ಪರಸ್ಪರ ಗೌರವ ಕೊಡುವ ತೆಗೆದುಕೊಳ್ಳುವುದನ್ನು ಮೊದಲು ಕಲಿತುಕೊಳ್ಳಬೇಕು! ಆಗಲೇ ದೇವರ ಮೇಲೆ ನಂಬಿಕೆ, ಭಕ್ತಿ, ಗೌರವ, ಮೂಡುವುದು.

ದೇವರ ಅಸ್ತಿತ್ವವಿರುವುದರಿಂದಲೆ ಎಲ್ಲರೂ ಭಯ, ಭಕ್ತಿ, ನೆಮ್ಮದಿಯಿಂದ ಜೀವನ ಮಾಡುತ್ತಿರುವುದು. ಇಲ್ಲಿ ನಮ್ಮಲ್ಲಿ ನೆಮ್ಮದಿಗೆ, ಸುಖ, ಸಂತೋಷಕ್ಕೆ, ಸಾವಿರಾರು ಮಾರ್‍ಗಗಳಿವೆ. ಏಕೆಂದರೆ… ದೇವರಿದ್ದಾನೆಂಬ ಒಂದೇ ಒಂದು ಕಾರಣಕ್ಕೇ… ಸಿದ್ಧಾಂತ, ತತ್ವ, ನಂಬಿಕೆ, ರಚನೆಯ ಆಧಾರದ ಮೇಲೆ ಸಂಸ್ಕೃತಿ- ದೇವರ ಅಸ್ಥಿತ್ವ ಕೂಡಾ… ನಿರ್‍ಧಾರವಾಗುವುದು” ಎಂದು ವಿವರಿಸುತ್ತಾ ನಿಂತರು.

ಅಲ್ಲಿದ್ದವರೇನು… ಪ್ರಶ್ನೆ ಕೇಳಿದ ವ್ಯಕ್ತಿ ಕೂಡಾ ಸ್ವಾಮಿ ವಿವೇಕಾನಂದರ ಪ್ರತಿಭೆ, ವಿದ್ವತ್ತು, ಕಂಚಿನಂಥಾ ಕಂಠಶ್ರೀಗೆ ನಿಬ್ಬೆರಗುಗೊಂಡನಲ್ಲದೆ, “ಸ್ವಾಮಿಗಳೆ… ಇಂದು ನಮ್ಮ ಕಣ್ಣು ತೆರೆಸಿದ್ದೀರಿ. ನಿಮ್ಮ ದೇವರು ನಮಗೆ ಗಾಡ್ ಆಗುವುದು. ನಮ್ಮ ವರ್ಷಿಪ್, ಫೇತ್‌, ಇಕ್ವಾಲಿಟಿ, ಬಿಲೀಫ್, ರೈಸ್… ನಿಮಗೆ ಅನ್ನ ದೇವರು- ಪೂಜೆ ವಿಶ್ವಾಸ, ಸಮಾನತೆ, ನಂಬಿಕೆ… ಇತ್ಯಾದಿ ರೂಪದಲ್ಲಿ ಕಾಣುವುದು!” ಎಂದು ಒಪ್ಪಿಕೊಂಡನಲ್ಲದೆ, ಸ್ವಾಮಿಗಳಿಗೆ ಅಡ್ಡಬಿದ್ದು ಹೊರಟ.

ಅಲ್ಲಿಗೆ ಅಂದಿನ ಕಾರ್ಯಕ್ರಮ ಮುಕ್ತಾಯಗೊಂಡಿತು.

ಸ್ವಾಮಿ ವಿವೇಕಾನಂದರಿಗೆ ಏನೋ ಸಾಧಿಸಿದ ತೃಪ್ತಿ, ಆನಂದ ಲಭಿಸಿತು. ತಿಳಿಯದಲೇ… ಜನರತ್ತ ಕೈಬೀಸಿ ಸಂಭ್ರಮಿಸಿದರು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...