Home / ಲೇಖನ / ಇತರೆ / ಮೊದಲ ಕತೆ

ಮೊದಲ ಕತೆ

ಸ್ವಾಮಿ ವಿವೇಕಾನಂದರು ಚಿಕಾಗೋ ನಗರದಲ್ಲಿದ್ದರು. ಒಮ್ಮೆ ಸಭೆಯಲ್ಲಿ ಒಬ್ಬ ಎದ್ದು ನಿಂತು- “ನಮ್ಮ ಸಂಸ್ಕೃತಿ ಮೊದಲೋ? ವಿಶ್ವದ ದೇವರುಗಳು ಮೊದಲೋ?” ಎಂದು ಪ್ರಶ್ನಿಸಿರ್ದ.

ಇಡೀ ಸಭೆಯೇ ನಿಶ್ಯಬ್ದವಾಯಿತು. ಅಲ್ಲಿದ್ದವರೆಲ್ಲ ಸ್ವಾಮಿ ವಿವೇಕಾನಂದರನ್ನು ಕುತೂಹಲದಿಂದ ನೋಡುತ್ತಾ ಕುಳಿತರು.

ಸ್ವಾಮಿ ವಿವೇಕಾನಂದರು- “ನನಗಿಂದು ಭಲೇ ಖುಷಿಯಾಗುತ್ತಿದೆ. ನನ್ನ ನೂರಾರು ಭಾಷಣ ಇಲ್ಲಿ ಚಿಕಾಗೋ ನಗರದಲ್ಲಿ ಪ್ರಭಾವ ಬೀರಿದೆಯೆನಿಸುವುದು ಬಹಳ ಒಳ್ಳೆಯ ಪ್ರಶ್ನೆಯನ್ನೇ ನೀವು ಕೇಳಿರುವಿರಿ. ಇದೊಂದು ಬೀಜವೃಕ್ಷದ ನ್ಯಾಯವಿದ್ದಂತೇ… ಮರ ಮೊದಲೋ? ಬೀಜ ಮೊದಲೋ? ಎಂಬ ಗಂಭೀರವಾದ ವಾದ ವಿವಾದ! ಸಂಸ್ಕೃತಿ ದೇವರು ಏಕಕಾಲದಲ್ಲಿ ಅಸ್ಥಿತ್ವಕ್ಕೆ ಬಂದಿವೆ. ಮನುಷ್ಯ ದೇವರನ್ನು ಸೃಷ್ಠಿಸಿದ ಎನ್ನುವ ವಾದ ಉದ್ಧಂಡತನವಾದ. ದೇವರು ಮೊದಲು, ನಂತರ ಮನುಷ್ಯ, ಈವತ್ತು ಮನುಷ್ಯ ಇತರೆ ಮನುಷ್ಯರನ್ನು ಅರ್ಥ ಮಾಡಿಕೊಂಡಿಲ್ಲ. ತನ್ನನ್ನು ತಾನು ಅರಿತಿಲ್ಲ. ಇನ್ನು ಗೌರವ ಕೊಡುವುದಿಲ್ಲ ಇವರೆಲ್ಲ ಮನುಷ್ಯರಲ್ಲ, ರಕ್ಕಸರು, ರಾವಣರು, ಸೈತಾನರು, ದೇವರು ಮನುಷ್ಯರೊಳಗಿರುವುದರಿಂದ ಒಬ್ಬರಿಗೆ ಒಬ್ಬರು ಪರಸ್ಪರ ಗೌರವ ಕೊಡುವ ತೆಗೆದುಕೊಳ್ಳುವುದನ್ನು ಮೊದಲು ಕಲಿತುಕೊಳ್ಳಬೇಕು! ಆಗಲೇ ದೇವರ ಮೇಲೆ ನಂಬಿಕೆ, ಭಕ್ತಿ, ಗೌರವ, ಮೂಡುವುದು.

ದೇವರ ಅಸ್ತಿತ್ವವಿರುವುದರಿಂದಲೆ ಎಲ್ಲರೂ ಭಯ, ಭಕ್ತಿ, ನೆಮ್ಮದಿಯಿಂದ ಜೀವನ ಮಾಡುತ್ತಿರುವುದು. ಇಲ್ಲಿ ನಮ್ಮಲ್ಲಿ ನೆಮ್ಮದಿಗೆ, ಸುಖ, ಸಂತೋಷಕ್ಕೆ, ಸಾವಿರಾರು ಮಾರ್‍ಗಗಳಿವೆ. ಏಕೆಂದರೆ… ದೇವರಿದ್ದಾನೆಂಬ ಒಂದೇ ಒಂದು ಕಾರಣಕ್ಕೇ… ಸಿದ್ಧಾಂತ, ತತ್ವ, ನಂಬಿಕೆ, ರಚನೆಯ ಆಧಾರದ ಮೇಲೆ ಸಂಸ್ಕೃತಿ- ದೇವರ ಅಸ್ಥಿತ್ವ ಕೂಡಾ… ನಿರ್‍ಧಾರವಾಗುವುದು” ಎಂದು ವಿವರಿಸುತ್ತಾ ನಿಂತರು.

ಅಲ್ಲಿದ್ದವರೇನು… ಪ್ರಶ್ನೆ ಕೇಳಿದ ವ್ಯಕ್ತಿ ಕೂಡಾ ಸ್ವಾಮಿ ವಿವೇಕಾನಂದರ ಪ್ರತಿಭೆ, ವಿದ್ವತ್ತು, ಕಂಚಿನಂಥಾ ಕಂಠಶ್ರೀಗೆ ನಿಬ್ಬೆರಗುಗೊಂಡನಲ್ಲದೆ, “ಸ್ವಾಮಿಗಳೆ… ಇಂದು ನಮ್ಮ ಕಣ್ಣು ತೆರೆಸಿದ್ದೀರಿ. ನಿಮ್ಮ ದೇವರು ನಮಗೆ ಗಾಡ್ ಆಗುವುದು. ನಮ್ಮ ವರ್ಷಿಪ್, ಫೇತ್‌, ಇಕ್ವಾಲಿಟಿ, ಬಿಲೀಫ್, ರೈಸ್… ನಿಮಗೆ ಅನ್ನ ದೇವರು- ಪೂಜೆ ವಿಶ್ವಾಸ, ಸಮಾನತೆ, ನಂಬಿಕೆ… ಇತ್ಯಾದಿ ರೂಪದಲ್ಲಿ ಕಾಣುವುದು!” ಎಂದು ಒಪ್ಪಿಕೊಂಡನಲ್ಲದೆ, ಸ್ವಾಮಿಗಳಿಗೆ ಅಡ್ಡಬಿದ್ದು ಹೊರಟ.

ಅಲ್ಲಿಗೆ ಅಂದಿನ ಕಾರ್ಯಕ್ರಮ ಮುಕ್ತಾಯಗೊಂಡಿತು.

ಸ್ವಾಮಿ ವಿವೇಕಾನಂದರಿಗೆ ಏನೋ ಸಾಧಿಸಿದ ತೃಪ್ತಿ, ಆನಂದ ಲಭಿಸಿತು. ತಿಳಿಯದಲೇ… ಜನರತ್ತ ಕೈಬೀಸಿ ಸಂಭ್ರಮಿಸಿದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...