Home / ಲೇಖನ / ಇತರೆ / ನಗಿಸಲು ಹುಟ್ಟಿದವರು

ನಗಿಸಲು ಹುಟ್ಟಿದವರು

ಈ ನಮ್ಮ ಗಂಗಾವತಿಯ ಪ್ರಾಣೇಶ್, ಮೈಸೂರಿನ ಕೃಷ್ಣಗೌಡರು. ರಿಚರ್ಡ ಲೂಯಿಸ್, ನರಸಿಂಹ ಜೋಯಿಸ್, ಸುಧಾ ಬರಗೂರು ಮುಂತಾದವರೆಲ್ಲ ಜನರನ್ನು ನಗಿಸಲೆಂದೇ ಹುಟ್ಟಿದವರು.

ಇವರೆಲ್ಲ ನಿತ್ಯ ನಗೆಯ ಟಾನಿಕ್ ಕೈಯಲ್ಲಿ ಹಿಡಿದು ಕುಡಿಯುತ್ತಾ ಜನರಿಗೆ ಕುಡಿಸುತ್ತಾ ಸಂಭ್ರಮಿಸುವ ಸಜ್ಜನರು.

ಈವತ್ತು ಕಾಲ ಯಾವ ಮಟ್ಟಕ್ಕೆ ಹೋಗಿದೆಯೆಂದರೆ… ‘ನಗರಿ ನಗಿಸಿರಿ ಬಾಳಿ ಬದುಕಿ ಕನ್ನಡ ಕಲಿಯಿರಿ ಕಲಿಸಿರಿ…’ ಎಂದು ಜನರ ಮುಂದೆ ಬೊಬ್ಬೆ ಹೊಡೆಯೋ ಕಾಲ ಬಂದು ಬಿಟ್ಟಿದೆ.

ಅವರ ನಗೆಯ ಹಬ್ಬದಲ್ಲಿ ಪಾಲ್ಗೊಂಡು “ನಾನು ನಗಲಿಲ್ಲ. ನನ್ನ ನಗಿಸಲು ಅವರ ಕೈಲಿ ಆಗಲಿಲ್ಲ” ಎಂದು ಯಾರಾದರು ಹೇಳಿದರೆ ಅವರಿಗೆ ನಗದು ರೂಪದಲ್ಲಿ ಬಹುಮಾನ ಸನ್ಮಾನ ಮಾಡುವುದಾಗಿ ಇವರೆಲ್ಲ ಸಾರಿಕೊಂಡಂತೇ ನಗಿಸುವಲ್ಲಿ ನೂರಕ್ಕೆ ನೂರರಷ್ಟು ಫಲಪ್ರದವಾಗಿದ್ದಾರೆ.

ಒಮ್ಮೆ ನಕ್ಕರೆ ಹಾಲು ಸಕ್ಕರೆ ದಿನವೂ ನಕ್ಕರೆ ಆಯುಷ್ಯ ಹೆಚ್ಚುರೀ. ವರ್ಷದೂದ್ದಕ್ಕೂ ನಕ್ಕರೆ ಡಾಕ್ಟರ್ ದೂರಾರೀ… ಜೀವನದಲ್ಲಿ ಇದಕ್ಕಿನ್ನಾ ಇನ್ನೇನು ಬೇಕೂರೀ… ?!

ಮುಖ ಗಂಟಿಟ್ಟುಕೊಂಡು ಇರುವುದರಿಂದ ದೇಹದಲ್ಲಿರುವ ರಸದೂತಗಳು ಹಾರ್ಮೋನುಗಳು ಸುಪ್ತವಾಗಿರುತ್ತವೆ. ಸೋಂಕು ಪ್ರತಿರೋಧಕ ಕೋಶಗಳ ಸಂಖ್ಯೆಯನ್ನು ಕುಗ್ಗಿಸುತ್ತಾ ಹೋಗುವುದು. ಎಂಡಾರ್ಫಿನ್ ರಾಸಾಯನಿಕಗಳು ಬಿಡುಗಡೆಯಾಗುವುದಿಲ್ಲ.

ಒಂದೇ ಒಂದು ನಗು ಮನಸ್ಸು ಬಿಚ್ಚಿ ನಕ್ಕು ಬಿಟ್ಟರೆ ಇವೆಲ್ಲ ಸುಗಮವಾಗಿ ಕೆಲಸ ಮಾಡಲು ಶುರುವಾಗುತ್ತವೆ.

ರಕ್ತ ಸಂಚಾರ ಹೆಚ್ಚಿ ಹೃದಯದ ಆರೋಗ್ಯ ಹೆಚ್ಚಿ ಮೆದುಳು ಚುರುಕಾಗಿ ಬುದ್ಧಿಯ ವೇಗ ಹೆಚ್ಚುವುದು.

ನಗುವೊಂದು ಆಭರಣ. ಮನಸ್ಸನ್ನು ಲಕಲಕ ಹೊಳೆಯುವಂತೆ ಮಾಡುವುದು. ನಾನು ಆರೋಗ್ಯವಾಗಿದ್ದೇನೆ. ಚೆನ್ನಾಗಿ ಕಾಣುತ್ತಿದ್ದೇನೆ. ನನ್ನಲ್ಲಿಯೂ ಶಕ್ತಿಯಿದೆ. ಸಾಧಿಸಿ ತೋರಿಸುವೆ ಎಂಬ ಹುಮ್ಮಸ್ಸು ಒಂದು ನಗು ನೀಡುವುದು. ಏನೆಲ್ಲ ನಿವಾರಿಸುವ ಶಕ್ತಿಯುಕ್ತಿ ಹುರುಪು ಉತ್ಸಾಹ ನಗುವಿಗಿದೆ.

ಒಂದು ನಗು ಸಾಧಿಸಿದ್ದನ್ನು ನೂರು ಹಗೆ ಸಾಧಿಸಿಲ್ಲ! ಎಂಬುದನ್ನು ನಾವೆಲ್ಲ ನೆನೆಯುತ್ತಾ ನಗುನಗುತ್ತಾ ನೂರಾರು ವರ್ಷ ಬಾಳಿದರೆ ಚೆನ್ನಲ್ಲವೇ? ನಿಜವಾದ ಚಿನ್ನ, ರನ್ನ, ಮುತ್ತು, ಹವಳವಲ್ಲವೇ?

ಇವರೆಲ್ಲ ನಗೆಯ ಆಭರಣಗಳನ್ನು ಬಳ್ಳದಿಂದ ಊರಿಂದ ಊರಿಗೆ ಅಳೆದು ಮಾರುತ್ತಿರುವರು ಕೊಳ್ಳಿರಿ ನಗೆಯ ಸಿರಿಯ ಹರಿಯ ತೊರೆಯ…
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...