Home / ಲೇಖನ / ಇತರೆ / ನಗಿಸಲು ಹುಟ್ಟಿದವರು

ನಗಿಸಲು ಹುಟ್ಟಿದವರು

ಈ ನಮ್ಮ ಗಂಗಾವತಿಯ ಪ್ರಾಣೇಶ್, ಮೈಸೂರಿನ ಕೃಷ್ಣಗೌಡರು. ರಿಚರ್ಡ ಲೂಯಿಸ್, ನರಸಿಂಹ ಜೋಯಿಸ್, ಸುಧಾ ಬರಗೂರು ಮುಂತಾದವರೆಲ್ಲ ಜನರನ್ನು ನಗಿಸಲೆಂದೇ ಹುಟ್ಟಿದವರು.

ಇವರೆಲ್ಲ ನಿತ್ಯ ನಗೆಯ ಟಾನಿಕ್ ಕೈಯಲ್ಲಿ ಹಿಡಿದು ಕುಡಿಯುತ್ತಾ ಜನರಿಗೆ ಕುಡಿಸುತ್ತಾ ಸಂಭ್ರಮಿಸುವ ಸಜ್ಜನರು.

ಈವತ್ತು ಕಾಲ ಯಾವ ಮಟ್ಟಕ್ಕೆ ಹೋಗಿದೆಯೆಂದರೆ… ‘ನಗರಿ ನಗಿಸಿರಿ ಬಾಳಿ ಬದುಕಿ ಕನ್ನಡ ಕಲಿಯಿರಿ ಕಲಿಸಿರಿ…’ ಎಂದು ಜನರ ಮುಂದೆ ಬೊಬ್ಬೆ ಹೊಡೆಯೋ ಕಾಲ ಬಂದು ಬಿಟ್ಟಿದೆ.

ಅವರ ನಗೆಯ ಹಬ್ಬದಲ್ಲಿ ಪಾಲ್ಗೊಂಡು “ನಾನು ನಗಲಿಲ್ಲ. ನನ್ನ ನಗಿಸಲು ಅವರ ಕೈಲಿ ಆಗಲಿಲ್ಲ” ಎಂದು ಯಾರಾದರು ಹೇಳಿದರೆ ಅವರಿಗೆ ನಗದು ರೂಪದಲ್ಲಿ ಬಹುಮಾನ ಸನ್ಮಾನ ಮಾಡುವುದಾಗಿ ಇವರೆಲ್ಲ ಸಾರಿಕೊಂಡಂತೇ ನಗಿಸುವಲ್ಲಿ ನೂರಕ್ಕೆ ನೂರರಷ್ಟು ಫಲಪ್ರದವಾಗಿದ್ದಾರೆ.

ಒಮ್ಮೆ ನಕ್ಕರೆ ಹಾಲು ಸಕ್ಕರೆ ದಿನವೂ ನಕ್ಕರೆ ಆಯುಷ್ಯ ಹೆಚ್ಚುರೀ. ವರ್ಷದೂದ್ದಕ್ಕೂ ನಕ್ಕರೆ ಡಾಕ್ಟರ್ ದೂರಾರೀ… ಜೀವನದಲ್ಲಿ ಇದಕ್ಕಿನ್ನಾ ಇನ್ನೇನು ಬೇಕೂರೀ… ?!

ಮುಖ ಗಂಟಿಟ್ಟುಕೊಂಡು ಇರುವುದರಿಂದ ದೇಹದಲ್ಲಿರುವ ರಸದೂತಗಳು ಹಾರ್ಮೋನುಗಳು ಸುಪ್ತವಾಗಿರುತ್ತವೆ. ಸೋಂಕು ಪ್ರತಿರೋಧಕ ಕೋಶಗಳ ಸಂಖ್ಯೆಯನ್ನು ಕುಗ್ಗಿಸುತ್ತಾ ಹೋಗುವುದು. ಎಂಡಾರ್ಫಿನ್ ರಾಸಾಯನಿಕಗಳು ಬಿಡುಗಡೆಯಾಗುವುದಿಲ್ಲ.

ಒಂದೇ ಒಂದು ನಗು ಮನಸ್ಸು ಬಿಚ್ಚಿ ನಕ್ಕು ಬಿಟ್ಟರೆ ಇವೆಲ್ಲ ಸುಗಮವಾಗಿ ಕೆಲಸ ಮಾಡಲು ಶುರುವಾಗುತ್ತವೆ.

ರಕ್ತ ಸಂಚಾರ ಹೆಚ್ಚಿ ಹೃದಯದ ಆರೋಗ್ಯ ಹೆಚ್ಚಿ ಮೆದುಳು ಚುರುಕಾಗಿ ಬುದ್ಧಿಯ ವೇಗ ಹೆಚ್ಚುವುದು.

ನಗುವೊಂದು ಆಭರಣ. ಮನಸ್ಸನ್ನು ಲಕಲಕ ಹೊಳೆಯುವಂತೆ ಮಾಡುವುದು. ನಾನು ಆರೋಗ್ಯವಾಗಿದ್ದೇನೆ. ಚೆನ್ನಾಗಿ ಕಾಣುತ್ತಿದ್ದೇನೆ. ನನ್ನಲ್ಲಿಯೂ ಶಕ್ತಿಯಿದೆ. ಸಾಧಿಸಿ ತೋರಿಸುವೆ ಎಂಬ ಹುಮ್ಮಸ್ಸು ಒಂದು ನಗು ನೀಡುವುದು. ಏನೆಲ್ಲ ನಿವಾರಿಸುವ ಶಕ್ತಿಯುಕ್ತಿ ಹುರುಪು ಉತ್ಸಾಹ ನಗುವಿಗಿದೆ.

ಒಂದು ನಗು ಸಾಧಿಸಿದ್ದನ್ನು ನೂರು ಹಗೆ ಸಾಧಿಸಿಲ್ಲ! ಎಂಬುದನ್ನು ನಾವೆಲ್ಲ ನೆನೆಯುತ್ತಾ ನಗುನಗುತ್ತಾ ನೂರಾರು ವರ್ಷ ಬಾಳಿದರೆ ಚೆನ್ನಲ್ಲವೇ? ನಿಜವಾದ ಚಿನ್ನ, ರನ್ನ, ಮುತ್ತು, ಹವಳವಲ್ಲವೇ?

ಇವರೆಲ್ಲ ನಗೆಯ ಆಭರಣಗಳನ್ನು ಬಳ್ಳದಿಂದ ಊರಿಂದ ಊರಿಗೆ ಅಳೆದು ಮಾರುತ್ತಿರುವರು ಕೊಳ್ಳಿರಿ ನಗೆಯ ಸಿರಿಯ ಹರಿಯ ತೊರೆಯ…
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...