Home / ಲೇಖನ / ಇತರೆ / ಚಿಪ್ಪು ಹಂದಿ ಕತೆ

ಚಿಪ್ಪು ಹಂದಿ ಕತೆ

ದಿನಾಂಕ ೦೩-೦೮-೨೦೧೫ ರಂದು ಕರ್ನಾಟಕದ ಭಾರತೀನಗರದ ಹತ್ತಿರ ತೊರೆಚಾಕನ ಹಳ್ಳಿಯಲ್ಲಿ ಜನಜಂಗುಳಿ ಸೇರಿತ್ತು! ಜನಾನೇ ಹಾಗೆ ದನಗಳ ಹಾಗೆ…

ಬೆಳ್ಳಂಬೆಳಿಗ್ಗೆ ಎಷ್ಟೊಂದು ಜನವೋ ಜನ! ಕಾರಣ ಹಂದಿಯೊಂದು ಕಾಡಿನಿಂದ ನಾಡಿಗೆ ಬಂದು ಬಿಟ್ಟಿದೆ. ಜನ ಮುಗಿಬಿದ್ದು ನೋಡತೊಡಗಿದ್ದರು!

ಹೌದು! ಎಲ್ಲರೂ ಊರ ಹಂದಿ ನೋಡಿದ್ದರು. ಅಪರೂಪಕ್ಕೆ ಕಾಡು ಹಂದಿ ನೋಡಿದವರುಂಟು. ಇನ್ನು ಮುಳ್ಳು ಹಂದಿಯಂತೂ ಕಂಡಿರುವ ಜನರೂ ಕಡಿಮೆ. ಅದರಲ್ಲಿಯೂ ಚಿಪ್ಪು ಹಂದಿಯನ್ನು ಕಂಡವರು ವಿರಳ.

ಅಂದು- ಮಹದೇವು ಎಂಬುವರ ಮನೆಗೆ ಚಿಪ್ಪು ಹಂದಿ ನುಗ್ಗಿತ್ತು ಹಜಾರದಲ್ಲಿ ಬಂದಿತ್ತು. ಮನೆಯವರೇನು… ಎಲ್ಲರೂ ಗಾಬರಿ ಬಿದ್ದು ಓಡಿದರು!

ಅಲ್ಲೇ ಒಬ್ಬ ವ್ಯಕ್ತಿ ಪಂಜರ ತಂದು ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಬಂಧಿಸಿದ. ಎಲ್ಲರೂ ಶಹಭಾಶ್‌ ಎಂದರು. ನಿಟ್ಟೂಸಿರು ಬಿಟ್ಟರು. ಅರಣ್ಯ ಇಲಾಖೆಗೆ ಮಾಹಿತಿ ಹೋಯಿತು. ಮೊಬೈಲ್ ಇರುವುದು ಅನುಕೂಲವಾಯಿತು!

ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿತು. ಜನರಿಗೆ ಧೈರ್ಯ ಹೇಳಿದರು. “ಚಿಪ್ಪು ಹಂದಿ ಈ ಭಾಗದಲ್ಲಿ ಇದೇ ಮೊದಲ ಭಾರಿಗೆ ಕಾಣಿಸಿಕೊಂಡಿದೆ. ಇದು ಮನುಷ್ಯರಿಗೆ ತೊಂದರೆ ಮಾಡದ ಪ್ರಾಣಿ. ಇದು ಇರುವೆ, ಕೀಟಗಳು, ಶೇಂಗಾ, ಗಡ್ಡೆಗೆಣಸು, ಕಂದ ಮೂಲಗಳ ತಿಂದು ನೀರು ಕುಡಿಯುವುದು, ಆಹಾರ ನೀರು ಅರಿಸಿ ನಾಡಿಗೆ ಆಕಸ್ಮಿಕವಾಗಿ ಹಾದಿ ತಪ್ಪಿ ಬಂದಿದೆಯೆಂದು ಹೇಳಿದರಲ್ಲದೆ, ಅಲ್ಲೇ ಪಕ್ಕದೂರಾದ ಅಂತರ ಹಳ್ಳಿಯ ಗುಡ್ಡಕ್ಕೆ ಅದನ್ನು ಸುರಕ್ಷಿತವಾಗಿ ಬಿಟ್ಟು ಬಂದರು.

ಶಾಲಾ ಮಕ್ಕಳಿಗೆ, ಊರು ಕೇರಿ ಜನರಿಗೆ ಚಿಪ್ಪು ಹಂದಿ ಗಾತ್ರ ಅದರ ಕಣ್ಣು ಬಣ್ಣ ಆಕಾರ ವಿಶೇಷವಾಗಿ ಚಿಪ್ಪಿನಿಂದ ಕೂಡಿದ ಶರೀರ ಕಂಡು ವಿಸ್ಮಯಗೊಂಡರು. ಜನರೇ ಹಾಗೆ ಎಂದೂ ನೋಡದವರ ಹಾಗೆ…

ಹೌದು! ಶತ್ರುಗಳಿಂದ ರಕ್ಷಿಸಿಕೊಳ್ಳಲು ಅದಕ್ಕೆ ಚಿಪ್ಪು ವರವಾಗಿದೆ. ಏಕೆಂದರೆ ಚಿಪ್ಪು ಮಿರಮಿರ ಮಿಂಚುತ್ತಿದ್ದು ನೋಡಲು ಸೋಜಿಗವೆನಿಸುವುದು. ಇಲ್ಲಿನ ಜನರ ನಾಲಿಗೆ ಮೇಲೆ ಎರಡು ಮೂರು ದಿನ ಚಿಪ್ಪು ಹಂದಿ ನಲಿನಲಿದು ಹೋಯಿತು! ಚಿಪ್ಪು ಹಂದಿಯ ಅದೃಷ್ಟವೋ… ಜನರ ಅದೃಷ್ಟವೋ… ಅಂತೂ ಇಂತೂ ಕಾಲ ಜಿಗಿಯಿತು!
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...