Home / ಲೇಖನ / ಇತರೆ / ಚಿಪ್ಪು ಹಂದಿ ಕತೆ

ಚಿಪ್ಪು ಹಂದಿ ಕತೆ

ದಿನಾಂಕ ೦೩-೦೮-೨೦೧೫ ರಂದು ಕರ್ನಾಟಕದ ಭಾರತೀನಗರದ ಹತ್ತಿರ ತೊರೆಚಾಕನ ಹಳ್ಳಿಯಲ್ಲಿ ಜನಜಂಗುಳಿ ಸೇರಿತ್ತು! ಜನಾನೇ ಹಾಗೆ ದನಗಳ ಹಾಗೆ…

ಬೆಳ್ಳಂಬೆಳಿಗ್ಗೆ ಎಷ್ಟೊಂದು ಜನವೋ ಜನ! ಕಾರಣ ಹಂದಿಯೊಂದು ಕಾಡಿನಿಂದ ನಾಡಿಗೆ ಬಂದು ಬಿಟ್ಟಿದೆ. ಜನ ಮುಗಿಬಿದ್ದು ನೋಡತೊಡಗಿದ್ದರು!

ಹೌದು! ಎಲ್ಲರೂ ಊರ ಹಂದಿ ನೋಡಿದ್ದರು. ಅಪರೂಪಕ್ಕೆ ಕಾಡು ಹಂದಿ ನೋಡಿದವರುಂಟು. ಇನ್ನು ಮುಳ್ಳು ಹಂದಿಯಂತೂ ಕಂಡಿರುವ ಜನರೂ ಕಡಿಮೆ. ಅದರಲ್ಲಿಯೂ ಚಿಪ್ಪು ಹಂದಿಯನ್ನು ಕಂಡವರು ವಿರಳ.

ಅಂದು- ಮಹದೇವು ಎಂಬುವರ ಮನೆಗೆ ಚಿಪ್ಪು ಹಂದಿ ನುಗ್ಗಿತ್ತು ಹಜಾರದಲ್ಲಿ ಬಂದಿತ್ತು. ಮನೆಯವರೇನು… ಎಲ್ಲರೂ ಗಾಬರಿ ಬಿದ್ದು ಓಡಿದರು!

ಅಲ್ಲೇ ಒಬ್ಬ ವ್ಯಕ್ತಿ ಪಂಜರ ತಂದು ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಬಂಧಿಸಿದ. ಎಲ್ಲರೂ ಶಹಭಾಶ್‌ ಎಂದರು. ನಿಟ್ಟೂಸಿರು ಬಿಟ್ಟರು. ಅರಣ್ಯ ಇಲಾಖೆಗೆ ಮಾಹಿತಿ ಹೋಯಿತು. ಮೊಬೈಲ್ ಇರುವುದು ಅನುಕೂಲವಾಯಿತು!

ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿತು. ಜನರಿಗೆ ಧೈರ್ಯ ಹೇಳಿದರು. “ಚಿಪ್ಪು ಹಂದಿ ಈ ಭಾಗದಲ್ಲಿ ಇದೇ ಮೊದಲ ಭಾರಿಗೆ ಕಾಣಿಸಿಕೊಂಡಿದೆ. ಇದು ಮನುಷ್ಯರಿಗೆ ತೊಂದರೆ ಮಾಡದ ಪ್ರಾಣಿ. ಇದು ಇರುವೆ, ಕೀಟಗಳು, ಶೇಂಗಾ, ಗಡ್ಡೆಗೆಣಸು, ಕಂದ ಮೂಲಗಳ ತಿಂದು ನೀರು ಕುಡಿಯುವುದು, ಆಹಾರ ನೀರು ಅರಿಸಿ ನಾಡಿಗೆ ಆಕಸ್ಮಿಕವಾಗಿ ಹಾದಿ ತಪ್ಪಿ ಬಂದಿದೆಯೆಂದು ಹೇಳಿದರಲ್ಲದೆ, ಅಲ್ಲೇ ಪಕ್ಕದೂರಾದ ಅಂತರ ಹಳ್ಳಿಯ ಗುಡ್ಡಕ್ಕೆ ಅದನ್ನು ಸುರಕ್ಷಿತವಾಗಿ ಬಿಟ್ಟು ಬಂದರು.

ಶಾಲಾ ಮಕ್ಕಳಿಗೆ, ಊರು ಕೇರಿ ಜನರಿಗೆ ಚಿಪ್ಪು ಹಂದಿ ಗಾತ್ರ ಅದರ ಕಣ್ಣು ಬಣ್ಣ ಆಕಾರ ವಿಶೇಷವಾಗಿ ಚಿಪ್ಪಿನಿಂದ ಕೂಡಿದ ಶರೀರ ಕಂಡು ವಿಸ್ಮಯಗೊಂಡರು. ಜನರೇ ಹಾಗೆ ಎಂದೂ ನೋಡದವರ ಹಾಗೆ…

ಹೌದು! ಶತ್ರುಗಳಿಂದ ರಕ್ಷಿಸಿಕೊಳ್ಳಲು ಅದಕ್ಕೆ ಚಿಪ್ಪು ವರವಾಗಿದೆ. ಏಕೆಂದರೆ ಚಿಪ್ಪು ಮಿರಮಿರ ಮಿಂಚುತ್ತಿದ್ದು ನೋಡಲು ಸೋಜಿಗವೆನಿಸುವುದು. ಇಲ್ಲಿನ ಜನರ ನಾಲಿಗೆ ಮೇಲೆ ಎರಡು ಮೂರು ದಿನ ಚಿಪ್ಪು ಹಂದಿ ನಲಿನಲಿದು ಹೋಯಿತು! ಚಿಪ್ಪು ಹಂದಿಯ ಅದೃಷ್ಟವೋ… ಜನರ ಅದೃಷ್ಟವೋ… ಅಂತೂ ಇಂತೂ ಕಾಲ ಜಿಗಿಯಿತು!
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...