Home / ಲೇಖನ / ಇತರೆ / ಸನ್ಯಾಸಿ ಕತೆ

ಸನ್ಯಾಸಿ ಕತೆ

ಬೆಂಗಳೂರೆಂಬ ದೊಡ್ಡ ಪಟ್ಟಣದಲ್ಲಿ ಬಲು ದೊಡ್ಡ ಮಠವಿತ್ತು. ಒಂದು ದಿನ ಒಬ್ಬ ಸನ್ಯಾಸಿ ಮಠದೊಳಕ್ಕೆ ಐದಾರು ಶಿಷ್ಯರೊಂದಿಗೆ ಗೂಳಿ ನುಗ್ಗಿದಂತೆ ನುಗ್ಗಿ ಬಂದ, ಮಠದಲ್ಲಿದ್ದವರೆಲ್ಲ ಗಾಬರಿಯಾದರು.

“ಸ್ವಾಮಿಗಳೆ ತಾವು ಯಾರು? ನಿಮಗ್ಯಾರು ಬೇಕಾಗಿತ್ತು? ನಿಮಗೇನಾಗ ಬೇಕಾಗಿತ್ತು?” ಎಂದು ಮಠದ ಮರಿಸ್ವಾಮಿಗಳೆಲ್ಲ ಆ ಸನ್ಯಾಸಿಯನ್ನು ವಿಜ್ಞಾಪಿಸಿದರು.

“ನಾನೊಬ್ಬ ದೇವದೂತ. ನಿಮಗೇನು ಬೇಕೆಂದು ಕೇಳಿಕೊಳ್ಳಿರಿ. ನನಗೇನು ಬೇಕಾಗಿಲ್ಲ. ನಿಮ್ಮ ಹಿರಿಸ್ವಾಮಿಯನ್ನು ನನ್ನಲ್ಲಿಗೆ ಕರೆದುಕೊಂಡು ಬನ್ನಿ” ಎಂದು ಸನ್ಯಾಸಿ ಅಲ್ಲಿದ್ದವರನ್ನೆಲ್ಲ ಜೋರು ಜೋರು ಮಾಡಿದ.

ಮಠದ ಮರಿಸ್ವಾಮಿಗಳೆಲ್ಲ ಒಳಗೆ ಓಡಿದರು. ಹಿರಿಸ್ವಾಮಿಗಳಿಗೆ ಸುದ್ದಿ ಮುಟ್ಟಿಸಿದರು. ಹಿರಿಸ್ವಾಮಿಗಳು ಗಾಬರಿ ಬಿದ್ದರು.

ಹಿರಿಸ್ವಾಮಿಗಳು ಏಳಲಾರದೆ ಬೇಗ ಎದ್ದು ಅವಸರದಿ ಸನ್ಯಾಸಿ ಬಳಿಗೆ ಬಂದರು. “ಸ್ವಾಮಿಗಳೆ ತಮ್ಮ ಹೆಸರು, ಊರು, ಯಾವ ಮಠದವರು ? ತಮಗೆ ನಮ್ಮಿಂದೇನಾಗಬೇಕು?” ಎಂದು ಕೇಳಿದರು.

“ನನ್ನ ಹೆಸರು ಮೃತ್ಯುವೆಂದು. ಎಲ್ಲರೂ ಭಯಭಕ್ತಿಯಿಂದ ಮೃತ್ಯುಂಜಯ ಮಹಾಸ್ವಾಮಿಗಳೆಂದು ಕರೆಯುವರು. ನಮ್ಮದು ಬಲು ಎತ್ತರದ ಊರು! ಉತ್ತರ ಭಾರತದ ಹಿಮಾಲಯದ ತಪ್ಪಲಿನಿಂದ ಬಂದವರು! ಸಿದ್ಧಿ ಪ್ರಸಿದ್ಧಿ ಸಾಧಕರು! ನಿಮಗೇನಾದರು ಬೇಕಿದ್ದರೆ ಹೇಳಿ. ನಿಮ್ಮಿಂದ ನಮಗೆ ಪೂಜಾ ಏರ್ಪಾಡು, ಉಳಿಯಲು ವಾರದ ಮಟ್ಟಿಗೆ ವಸತಿ, ಪ್ರಸಾದದ ವ್ಯವಸ್ಥೆಯಾಗಬೇಕೆಂದು” ಜೋರು ಮಾಡಿದರು.

ಇದೇನು ಸ್ವಾಮಿಗಳೆ ನಿಮ್ಮದೇ ಮಠವೇನೋ ಶಾಖ ಮಠವೆಂಬಂತೆ ನಮ್ಮನ್ನು ನಿಮ್ಮ ಕಿರಿಸ್ವಾಮಿ ಎಂಬಂತೇ ಜೋರು ಜೋರು… ಮಾಡುತ್ತಿರುವಿರಲ್ಲಾ? ಇದೇನು ತೋಟದಪ್ಪನ ಪುಣ್ಯ ಛತ್ರವೆಂದು ತಿಳಿದಿರೇನು? ನೀವ್ಯಾರೋ… ನಮಗೇ ತಿಳಿಯದು ದಯಮಾಡಿ ಮುಂದೆ ಹೋಗಿ” ಎಂದು ಹಿರಿಸ್ವಾಮಿಗಳು ಅಂದರು.

“ನಿಮಗೆ ನಮ್ಮ ಮಹಿಮೆ ತಿಳಿಯದು. ದೇವರು ನಿಮಗೆ ನೀಡಿದ್ದನ್ನು ನಮ್ಮಂಥಾ ಸನ್ಯಾಸಿಗೆ ನೀಡುವುದರಲ್ಲಿ ತಪ್ಪಿಲ್ಲವಲ್ಲಾ? ಎಲ್ಲ ದೇವರ ಕೊಡುಗೆಯಲ್ಲವೇ? ಹೀಗಾಗಿ ಈ ಮಠದ ಮೇಲೆ ನನಗೂ ಹಕ್ಕಿದೆ. ಪಾಲಿದೆ” ಎಂದ ಸನ್ಯಾಸಿ.

“ನಿಮ್ಮಂಥ ಸನ್ಯಾಸಿಗಳು ನಿತ್ಯ ನೂರಾರು ಜನ ಬಂದು ಹೋಗುವರು ನಿಮ್ಮ ರೀತಿ ವರ್ತಿಸಿದ್ದು ನಾ ಕಾಣೆ. ನೀವ್ಯಾರೋ ಕೆಟ್ಟ, ಕಪಟ ಸ್ವಾಮಿ ಇರಬೇಕು” ಎಂದ ಮಠದ ಹಿರಿಯ ಸ್ವಾಮಿ.

“ಏ ನೀ ನನ್ನ ಅನುಮಾನಿಸುತ್ತೀಯಾ? ನನ್ನ ವೇಷಭೂಷಣ ಶಿಷ್ಯರ ನೋಡಿದರೆ ನಿನಗೆ ಜ್ಞಾನೋದಯವಾಗಬೇಕಾಗಿತ್ತು!! ಆದರೆ ನಿನಗೆ ನೂರಾರು ವರ್ಷ ವಯಸ್ಸಾಗಿದೆ. ಬುದ್ಧಿ ಬಲಿತಿಲ್ಲ” ಎಂದ ಸನ್ಯಾಸಿ.

“ನಾವು ಇಲ್ಲಿ ಈ ಮಠದಲ್ಲಿ ೫೦ ವರ್ಷದಿಂದ ಇದ್ದೇವೆ! ನಮಗೆ ತಿಳಿದಿದೆ ಯಾರು ನಿಜದ ಸ್ವಾಮಿಗಳೆಂದು… ಬರಿಯ ಕಾವಿ ತೊಟ್ಟರೆ ಕಾಮ ಹೋಗುವುದಿಲ್ಲ! ಕರ್ಮ ಕಳೆದುಕೊಂಡು ನಮ್ಮಲ್ಲಿಗೆ ಬಾ… ಹೋಗು” ಎಂದ ಹಿರಿಸ್ವಾಮಿ.

“ನನ್ನ ಏಕವಚನದಲ್ಲಿ ಮಾತನಾಡಿಸುತ್ತೀಯಾ? ನೀನು ನರಕಕ್ಕೆ ಹೋಗುವೆ ಪಾಪಿ! ನಿನಗೆ ಜಾತಿಯ ಮದ, ಅಧಿಕಾರದ ಹಮ್ಮು, ಜನಬಲದ ಸೊಕ್ಕು ಹಣದ ದುರಂಕಾರ, ಜಾಸ್ತಿಯಾಗಿದೆ ನಾನಿನ್ನು ಬರುತ್ತೇನೆ” ಎಂದು ಹೊರಡಲನುವಾದ.

ಹಿರಿಸ್ವಾಮಿಗಳು ಸುಮ್ಮನೆ ಬಿಟ್ಟಾರೆಯೇ?

“ಏ ಇವನನ್ನು ಹಿಡಿಯಿರಿ ಮಠದಿಂದ ಎಳೆಯಿರಿ ನಾಲ್ಕು ಭಾರಿಸಿ…” ಎಂದು ಕೂಗಿಯೇ ಬಿಟ್ಟರು. ಶಿಷ್ಯರಿಗೆ ಇಷ್ಟೇ ಸಾಕಾಯಿತು!

ಅಲ್ಲಿದ್ದ ಇವರ ಶಿಷ್ಯರೆಲ್ಲ ಮೃತ್ಯುಂಜಯ ಸ್ವಾಮಿಯನ್ನು ಮುತ್ತಿದರು. ಮಠದಿಂದ ಹೊರಗೆ ಎಳೆದರು. ಚೆನ್ನಾಗಿ ಬಿಸಿ ಮುಟ್ಟಿಸಿದರು. ಇನ್ನೆಂದೂ ಮಠದತ್ತ ಇಣಕಿ ನೋಡದಂತೆ ಮಾಡಿದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...