Home / ಲೇಖನ / ಇತರೆ / ೧೮೬೬

೧೮೬೬

ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಹೊಸದೊಂದು ಭಯಂಕರ ಮಾಹಿತಿಯೊಂದನ್ನು ಹೊರಗಡೆವಿದ್ದು ಭವ್ಯ ಭಾರತದಲ್ಲಿಂದು- ಒಟ್ಟು ೧೮೬೬ ನೋಂದಾಯಿತ ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿವೆಂದು ಅಧಿಕೃತವಾಗಿ ಘೋಷಿಸಿರುವುದು.

ಕಳೆದ ವರ್ಷ ೨೦೧೪ ಮಾರ್ಚಿನಿಂದ ೨೦೧೫ರ ಜುಲೈವರೆಗೆ ಹೊಸ ಹೊಸ ೨೩೯ ರಾಜಕೀಯ ಪಕ್ಷಗಳೂ ನೋಂದಣಿ ಮಾಡಿಕೊಳ್ಳುವ ಮೂಲಕ ಒಟ್ಟು ಸಂಖ್ಯೆ ೧೮೬೬ ಕ್ಕೇರಿದೆ!

ಈ ಪೈಕಿ ೫೬ ಪಕ್ಷಗಳು ರಾಷ್ಟ್ರೀಯ ರಾಜ್ಯ ಮಟ್ಟದಲ್ಲಿ ಗುರ್ತಿಸಿಕೊಂಡವುಗಳು. ಆದರೆ ಉಳಿದುವುಗಳು ಮಾನ್ಯತೆ ಪಡೆದಿರದ ಆದರೆ ನೋಂದಾಯಿತ ಪಕ್ಷಗಳು ಎಂದು ಆಯೋಗ ಸ್ಪಷ್ಟಪಡಿಸಿದೆ.

೨೦೧೪ರ ಮಾರ್ಚ್ ೫ ರಂದು ಲೋಕಸಭಾ ಚುನಾವಣೆ ಪ್ರಕಟವಾದ ನಂತರ ೨೬ ಹೊಸ ಪಕ್ಷಗಳು ನೋಂದಣಿ ಮಾಡಿಕೊಳ್ಳುವ ಮೂಲಕ ೧೬೨೭ ನೋಂದಾಯಿತ ರಾಜಕೀಯ ಪಕ್ಷಗಳಾದವು ಎಂದು ಆಯೋಗ ಖಚಿತ ಪಡಿಸಿದೆ.

ಈಗಾಗಲೇ ನೋಂದಣಿಯಾದರೂ ಸಕ್ರಿಯವಲ್ಲದ ಈ ಪಕ್ಷಗಳು ಸ್ವಂತ ಚಿನ್ಹೆಯೊಂದಿಗೆ ಸರ್ಧಿಸುವಂತಿರಲಿಲ್ಲ. ಅಂತಹ ಆಶಯವೂ ಅವುಗಳಿಗಿರಲಿಲ್ಲ. ಹಾಗಾಗಿ ಆಯೋಗ ಬಿಡುಗಡೆ ಮಾಡಿದ ಸ್ವತಂತ್ರ ಚಿಹ್ನೆಯ ಪಟ್ಟಿಯಿಂದ ಯಾವುದಾದರೊಂದನ್ನು ಆಯ್ದುಕೊಂಡು ಅವು ಸ್ಪರ್ಧಿಸಬೇಕಿತ್ತು. ಆಯೋಗದಲ್ಲಿ ಅಂತಹ ೮೪ ಚಿನ್ಹೆಗಳು ಲಭ್ಯ ಎಂದೂ ಕುತೂಹಲಕಾರಿ ಅಂಶವನ್ನು ಚುನಾವಣಾ ಆಯೋಗ ವಿವರಿಸಿದೆ.

ಚಪ್ಪಲಿಗಳು, ಬಲೂನ್, ಕಪಾಟ, ಹವಾನಿಯಂತ್ರಕ, ತೆಂಗಿನಕಾಯಿ, ಕಿಟಕಿ, ನೆಲಹಾಸು, ಬಾಟಲಿ, ಬ್ರೆಡ್… ಇವೆಲ್ಲ ಆಯೋಗವು ಬಿಡುಗಡೆ ಮಾಡಿರುವ ಈ ಉಚಿತ ಚಿಹ್ನೆಗಳ ಪಟ್ಟಿಯಲ್ಲಿ ಕೆಲವಾಗಿರುತ್ತವೆಂದು ತಿಳಿಸಿರುವರು.

ರಾಜಕೀಯ ಪಕ್ಷವೊಂದು ರಾಜ್ಯ ಇಲ್ಲವೇ ರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ತಾನು “ಮಾನ್ಯತೆ ಪಡೆದ” ಎಂದು ಗುರ್ತಿಸಿ ಕೊಳ್ಳಬೇಕಾದರೆ ಆಯೋಗವೇ ನಿಗದಿಪಡಿಸಿದ ಕೆಲವು ಮಾನದಂಡಗಳಿವೆ! ಸತತ ಐದು ವರ್ಷಗಳ ಕಾಲ ಅದು ಚಟುವಟಿಕೆಗಳಿಂದ ಕೂಡಿರಬೇಕು. ಇಲ್ಲವೇ ಚುನಾವಣೆಯಲ್ಲಿ ಯಾವುದೇ ವಿಧಾನಸಭಾ- ಲೋಕಸಭಾ ಕ್ಷೇತ್ರದಲ್ಲಿ ಚಲಾವಣೆಗೊಂಡ ಒಟ್ಟು ಮತಗಳಲ್ಲಿ ಕನಿಷ್ಠ ಶೇಕಡ ೪% ರಷ್ಟಾದರೂ ಮತಗಳನ್ನು ಗಳಿಸಲೇಬೇಕು.

ಈ ತನಕ ಬಿಜೆಪಿ – ಬಿ‌ಎಸ್‌ಪಿ- ಕಾಂಗ್ರೆಸ್, ಸಿಪಿ‌ಐ, ಸಿಪಿ‌ಎಂ, ಎನ್‌ಸಿಪಿಗಳು ರಾಷ್ಟ್ರೀಯ ಪಕ್ಷಗಳೆಂದು ಗುರ್ತಿಸಿಕೊಂಡಿದೆ. ಆದರೆ ದೇಶದಲ್ಲಿ ಒಟ್ಟು ೫೦ ಮಾನ್ಯತೆ ಪಡೆದ ಪಕ್ಷಗಳಿವೆಯೆಂದು ಚುನಾವಣೆ ಆಯೋಗವು ಖಚಿತಪಡಿಸಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...