Home / ಲೇಖನ / ಇತರೆ / ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ.

ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌ಡಿ‌ಒದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಾಜಿ ಮುಖ್ಯ ನಿಯಂತ್ರಕ ಡಾ| ಎ. ಶಿವಥಾನು ಪಿಳ್ಳೆ ಅವರಿಗೆ ಗೀತಂ ಪ್ರತಿಷ್ಠಾನದ ಪ್ರಶಸ್ತಿ ಲಭಿಸಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಮೂಲದ ಗೀತಂ ವಿಶ್ವವಿದ್ಯಾಲಯದ ೩೫ ನೆಯ ಸಂಸ್ಥಾಪನಾ ದಿನಾಚರಣೆಯು ಆಗಸ್ಟ್ ೦೮, ೨೦೧೫ರಂದು ಶನಿವಾರದ ದಿನದಂದು ಜರುಗಿದ್ದು ಅವರಿಗೆ ಕರೆಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುವರು.

“ಇದು ವಿಜ್ಞಾನಕ್ಕೆ ಸಂದ ಗೌರವವೆಂದು” ಅವರು ಹೆಮ್ಮೆಯಿಂದ ನುಡಿದಿರುವರು! ಜ್ಞಾನಿಗಳು ವಿಜ್ಞಾನಿಗಳು ಅಂದರೆ ಯಾವಾಗಲೂ ಹೀಗಿರುವರು!

ಬ್ರಹ್ಮಸ್ ಏರೋಸ್ಪೇಸ್ ಸಂಸ್ಥೆಯ ಸಿ‌ಇ‌ಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಡಾ|| ಎ. ಶಿವಥಾನು ಪಿಳ್ಳೈ ಅವರ ನಾಯಕತ್ವ ಅನನ್ಯವಾಗಿತ್ತು ಎಂದು ವಿವಿಯ ಕುಲಪತಿ ಪ್ರೊ | ಜಿ. ಸುಬ್ರಮಣ್ಯಂ. ಹೇಳಿರುವರು…

ಬ್ರಹ್ಮೋಸ್ ಕ್ಷಿಪಣಿಗಳು ಭವ್ಯ ಭಾರತೀಯ ಸೇವಾ ಪಡೆಗೆ ಸೇರ್ಪಡೆಯಾಗಿವೆ. ಡಾ|| ಎ. ಶಿವಥಾನುಪಿಳ್ಳೈ ಅವರು ಈಗ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಗೆ ಸಂದರ್ಶಕ ಪ್ರೊಫೆಸರ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿರುವರು. ಇಷ್ಟೇ ಅಲ್ಲದೆ ಶ್ರೀಯುತರು ಹರಿಯಾಣದ ಕುರುಕ್ಷೇತ್ರದ ಎನ್‌ಐಟಿಯ ಹಾಲಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವರು.

ಮುದ್ದು ಮಕ್ಕಳೆ… ಡಾ|| ಎ. ಶಿವಥಾನು ಪಿಳ್ಳೈ ಅವರು ನಿಮಗೆಲ್ಲ ಸ್ಫೂರ್ತಿಯ ಸೆಲೆಯಾಗಲಿ ಎಂದು ಇವರ ಬಗ್ಗೆ ಇಷ್ಟನ್ನು ದಾಖಲಿಸಿದ್ದೇನೆ. ಏನೆಲ್ಲ ಸಮಸ್ಯೆ ಬಡತನ ಕಷ್ಟ ಕಾರ್ಪಣ್ಯಗಳ ದಾಟಿಕೊಂಡು ಈವತ್ತು ಇವರ ಸಾಧನೆ ಎಲ್ಲರಿಗೆ ಮಾರ್ಗದರ್ಶನವಾಗಿದೆ.

ಈವತ್ತು ನೀವೆಲ್ಲ ಮನಸ್ಸು ಮಾಡಿ, ನಾವೂ ಏನಾದರೊಂದು ಸಾಧಿಸಿ ತೋರಿಸುತ್ತೇವೆಂದು ಶಪಥ ಮಾಡುತ್ತೀರಲ್ಲವೇ?
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...