Home / ಲೇಖನ / ಇತರೆ / ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ.

ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌ಡಿ‌ಒದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಾಜಿ ಮುಖ್ಯ ನಿಯಂತ್ರಕ ಡಾ| ಎ. ಶಿವಥಾನು ಪಿಳ್ಳೆ ಅವರಿಗೆ ಗೀತಂ ಪ್ರತಿಷ್ಠಾನದ ಪ್ರಶಸ್ತಿ ಲಭಿಸಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಮೂಲದ ಗೀತಂ ವಿಶ್ವವಿದ್ಯಾಲಯದ ೩೫ ನೆಯ ಸಂಸ್ಥಾಪನಾ ದಿನಾಚರಣೆಯು ಆಗಸ್ಟ್ ೦೮, ೨೦೧೫ರಂದು ಶನಿವಾರದ ದಿನದಂದು ಜರುಗಿದ್ದು ಅವರಿಗೆ ಕರೆಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುವರು.

“ಇದು ವಿಜ್ಞಾನಕ್ಕೆ ಸಂದ ಗೌರವವೆಂದು” ಅವರು ಹೆಮ್ಮೆಯಿಂದ ನುಡಿದಿರುವರು! ಜ್ಞಾನಿಗಳು ವಿಜ್ಞಾನಿಗಳು ಅಂದರೆ ಯಾವಾಗಲೂ ಹೀಗಿರುವರು!

ಬ್ರಹ್ಮಸ್ ಏರೋಸ್ಪೇಸ್ ಸಂಸ್ಥೆಯ ಸಿ‌ಇ‌ಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಡಾ|| ಎ. ಶಿವಥಾನು ಪಿಳ್ಳೈ ಅವರ ನಾಯಕತ್ವ ಅನನ್ಯವಾಗಿತ್ತು ಎಂದು ವಿವಿಯ ಕುಲಪತಿ ಪ್ರೊ | ಜಿ. ಸುಬ್ರಮಣ್ಯಂ. ಹೇಳಿರುವರು…

ಬ್ರಹ್ಮೋಸ್ ಕ್ಷಿಪಣಿಗಳು ಭವ್ಯ ಭಾರತೀಯ ಸೇವಾ ಪಡೆಗೆ ಸೇರ್ಪಡೆಯಾಗಿವೆ. ಡಾ|| ಎ. ಶಿವಥಾನುಪಿಳ್ಳೈ ಅವರು ಈಗ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಗೆ ಸಂದರ್ಶಕ ಪ್ರೊಫೆಸರ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿರುವರು. ಇಷ್ಟೇ ಅಲ್ಲದೆ ಶ್ರೀಯುತರು ಹರಿಯಾಣದ ಕುರುಕ್ಷೇತ್ರದ ಎನ್‌ಐಟಿಯ ಹಾಲಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವರು.

ಮುದ್ದು ಮಕ್ಕಳೆ… ಡಾ|| ಎ. ಶಿವಥಾನು ಪಿಳ್ಳೈ ಅವರು ನಿಮಗೆಲ್ಲ ಸ್ಫೂರ್ತಿಯ ಸೆಲೆಯಾಗಲಿ ಎಂದು ಇವರ ಬಗ್ಗೆ ಇಷ್ಟನ್ನು ದಾಖಲಿಸಿದ್ದೇನೆ. ಏನೆಲ್ಲ ಸಮಸ್ಯೆ ಬಡತನ ಕಷ್ಟ ಕಾರ್ಪಣ್ಯಗಳ ದಾಟಿಕೊಂಡು ಈವತ್ತು ಇವರ ಸಾಧನೆ ಎಲ್ಲರಿಗೆ ಮಾರ್ಗದರ್ಶನವಾಗಿದೆ.

ಈವತ್ತು ನೀವೆಲ್ಲ ಮನಸ್ಸು ಮಾಡಿ, ನಾವೂ ಏನಾದರೊಂದು ಸಾಧಿಸಿ ತೋರಿಸುತ್ತೇವೆಂದು ಶಪಥ ಮಾಡುತ್ತೀರಲ್ಲವೇ?
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...