Home / ಲೇಖನ / ಇತರೆ / ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನಕ್ಕೆ ಸಂದ-ಗೌರವ

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ.

ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌ಡಿ‌ಒದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಾಜಿ ಮುಖ್ಯ ನಿಯಂತ್ರಕ ಡಾ| ಎ. ಶಿವಥಾನು ಪಿಳ್ಳೆ ಅವರಿಗೆ ಗೀತಂ ಪ್ರತಿಷ್ಠಾನದ ಪ್ರಶಸ್ತಿ ಲಭಿಸಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಮೂಲದ ಗೀತಂ ವಿಶ್ವವಿದ್ಯಾಲಯದ ೩೫ ನೆಯ ಸಂಸ್ಥಾಪನಾ ದಿನಾಚರಣೆಯು ಆಗಸ್ಟ್ ೦೮, ೨೦೧೫ರಂದು ಶನಿವಾರದ ದಿನದಂದು ಜರುಗಿದ್ದು ಅವರಿಗೆ ಕರೆಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುವರು.

“ಇದು ವಿಜ್ಞಾನಕ್ಕೆ ಸಂದ ಗೌರವವೆಂದು” ಅವರು ಹೆಮ್ಮೆಯಿಂದ ನುಡಿದಿರುವರು! ಜ್ಞಾನಿಗಳು ವಿಜ್ಞಾನಿಗಳು ಅಂದರೆ ಯಾವಾಗಲೂ ಹೀಗಿರುವರು!

ಬ್ರಹ್ಮಸ್ ಏರೋಸ್ಪೇಸ್ ಸಂಸ್ಥೆಯ ಸಿ‌ಇ‌ಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಡಾ|| ಎ. ಶಿವಥಾನು ಪಿಳ್ಳೈ ಅವರ ನಾಯಕತ್ವ ಅನನ್ಯವಾಗಿತ್ತು ಎಂದು ವಿವಿಯ ಕುಲಪತಿ ಪ್ರೊ | ಜಿ. ಸುಬ್ರಮಣ್ಯಂ. ಹೇಳಿರುವರು…

ಬ್ರಹ್ಮೋಸ್ ಕ್ಷಿಪಣಿಗಳು ಭವ್ಯ ಭಾರತೀಯ ಸೇವಾ ಪಡೆಗೆ ಸೇರ್ಪಡೆಯಾಗಿವೆ. ಡಾ|| ಎ. ಶಿವಥಾನುಪಿಳ್ಳೈ ಅವರು ಈಗ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಗೆ ಸಂದರ್ಶಕ ಪ್ರೊಫೆಸರ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿರುವರು. ಇಷ್ಟೇ ಅಲ್ಲದೆ ಶ್ರೀಯುತರು ಹರಿಯಾಣದ ಕುರುಕ್ಷೇತ್ರದ ಎನ್‌ಐಟಿಯ ಹಾಲಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವರು.

ಮುದ್ದು ಮಕ್ಕಳೆ… ಡಾ|| ಎ. ಶಿವಥಾನು ಪಿಳ್ಳೈ ಅವರು ನಿಮಗೆಲ್ಲ ಸ್ಫೂರ್ತಿಯ ಸೆಲೆಯಾಗಲಿ ಎಂದು ಇವರ ಬಗ್ಗೆ ಇಷ್ಟನ್ನು ದಾಖಲಿಸಿದ್ದೇನೆ. ಏನೆಲ್ಲ ಸಮಸ್ಯೆ ಬಡತನ ಕಷ್ಟ ಕಾರ್ಪಣ್ಯಗಳ ದಾಟಿಕೊಂಡು ಈವತ್ತು ಇವರ ಸಾಧನೆ ಎಲ್ಲರಿಗೆ ಮಾರ್ಗದರ್ಶನವಾಗಿದೆ.

ಈವತ್ತು ನೀವೆಲ್ಲ ಮನಸ್ಸು ಮಾಡಿ, ನಾವೂ ಏನಾದರೊಂದು ಸಾಧಿಸಿ ತೋರಿಸುತ್ತೇವೆಂದು ಶಪಥ ಮಾಡುತ್ತೀರಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...