Home / ಲೇಖನ / ಇತರೆ / ರ್‍ಯೂಹೈ ಕತೆ

ರ್‍ಯೂಹೈ ಕತೆ

ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ.

ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಗೋದಾಮಿನ ಕಟ್ಟಡ ಛಿದ್ರವಿಚಿದ್ರವಾಗಿದೆ.

ಈ ಸ್ಫೋಟದಿಂದ ಸಿಡಿದ ಬೆಂಕಿಯ ತುಣುಕುಗಳಿಂದ ಸುತ್ತಮುತ್ತಲಿನ ಕಟ್ಟಡ ಹಾಗೂ ಗೋದಾಮುಗಳಿಗೂ ಬೆಂಕಿ ಹತ್ತಿಕೊಂಡಿದೆ.

ಇಲ್ಲಿ ಇನ್ನೊಂದು ದುರಂತವನ್ನು ಹೇಳಲೇಬೇಕು! ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳದ ೨೧ ಮಂದಿ ಬೆಂಕಿಗೆ ಆಹುತಿಯಾಗಿರುವರು.

ಇದು ಉತ್ತರ ಚೀನಾದ ಪ್ರಮುಖ ಬಂದರು ಪಟ್ಟಣ ಟೈನ್‌ಜಿನ್‌ನ ಪ್ರದೇಶವಾಗಿದ್ದು ಈವರೆಗೆ ೫೦ ಮಂದಿ ಮೃತರಾಗಿರುವರು.

ಈ ಸರಣಿ ಸ್ಫೋಟದಲ್ಲಿ ೭೦೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ ೭೧ ಗಾಯಾಳುಗಳ ಸ್ಥಿತಿ-ಗತಿ ತುಂಬಾ ಗಂಭೀರವಾಗಿದೆ.

ಈ ದುರಂತದಲ್ಲಿ ಇನ್ನೊಂದು ದುರಂತವೆಂದರೆ… ಸುಮಾರು ೨೧ ಮಂದಿ ಈಗಾಗಲೇ ನಾಪತ್ತೆಯಾಗಿರುವರು.

ಅಬ್ಬಾ! ಸುರಕ್ಷತೆಯ ತೀವ್ರ ದೃಷ್ಠಿಯಿಂದ ಸ್ಫೋಟದ ಸ್ಥಳದಿಂದ ಸುಮಾರು ೧೦,೦೦೦ ಕ್ಕೂ ಹೆಚ್ಚು ಜನರನ್ನು ತೆರವು ಮಾಡಲಾಗಿದೆಂದು ಅಲ್ಲಿನ ಅಧಿಕಾರಿಗಳು ಈಗಾಗಲೇ ದೃಢಪಡಿಸಿರುವರು.

ಈ ಘಟನಾ ಸ್ಥಳದಲ್ಲಿ ಮತ್ತಷ್ಟು ಜನರು ಅಪಾಯಕ್ಕೆ ಸಿಲುಕಿರುವ ಸಾಧ್ಯತೆಗಳಿವೆಯೆಂದೂ ಇನ್ನೂ ಸಾವು ನೋವಿನ ಸಂಖ್ಯೆ ದುಪ್ಪಟ್ಟಾಗುವ ಎಲ್ಲ ಅವಕಾಶಗಳು ಹೆಚ್ಚಿವೆಯೆಂದೂ ಇದು ಬೃಹತ್ ಚೀನಾದಲ್ಲಿನ ಈವರೆಗಿನ ಬಹು ದೊಡ್ಡ ಕೈಗಾರಿಕಾ ಅವಘಡವಾಗಿಯೆಂದೂ ಚೀನಾದ ರಕ್ಷಣಾ ಕಾರ್ಯಕರ್ತರು ತೀವ್ರ ಶಂಕೆ ವ್ಯಕ್ತಪಡಿಸಿರುವರು!

ಮುದ್ದು ಮಕ್ಕಳೆ. ಈವತ್ತು ನಾವೆಲ್ಲ ಭಾರಿ ಭಾರೀ ಮುಂದುವರೆದಿದ್ದೇವೆಂದು ಭ್ರಮಿಸಿದ್ದೇವೆ. ಅಪಾಯ-ದುರಂತ ಸಂಭವಿಸಿದಾಗ ಅದರಿಂದ ಪಾರಾಗಲು ಇನ್ನು ಸಾಧ್ಯವಾಗುತ್ತಿಲ್ಲವೆಂಬುದನ್ನು ನಮ್ಮ ಜನರು ಅರ್ಥ ಮಾಡಿಕೊಳ್ಳಬೇಕು. ಗರ್ವ ಪಡಲು ಇಲ್ಲಿ ಅಂಥಾ ಸಾಧನೆಯಾಗಿಲ್ಲವೆಂಬುದನ್ನು ಅರಿತು ವಿನಯದಿಂದ ಬಾಳಿದರೆ ಜೀವನ ಸಾರ್ಥಕವಾಗುವುದು ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...