Home / ಕವನ / ಕವಿತೆ / ದಶಾವತಾರ

ದಶಾವತಾರ

ನೆಲದ ಮೇಲೆ ಈಸುವುದು,
ನೋಡಿದಿರಾ ಮೀನಾವತಾರ !
ಮನುಕುಲೋದ್ಧಾರಕ ನನ್ನ ಕುವರ !

ಬಯಲನ್ನೆಲ್ಲ ಬೆನ್ನಲಿ ಹೊತ್ತಿರುವುದು,
ನೋಡಿದಿರಾ ಕೂರ್ಮಾವತಾರ !
ವಂಶಾಧಾರಸ್ತಂಭ ನನ್ನ ಕುವರ !

ಮುಗಿಲನ್ನೆ ಮೊಗದಿಂದೆತ್ತಲು ಹವಣಿಸುವದು.
ನೋಡಿದಿರಾ ವರಾಹಸ್ವಾಮಿ !
ಹೂಂಕರಿಸುವ ನನ್ನ ಕುವರ !

ತನ್ನ ತಾಯ ಬಸಿರನ್ನೆ ಬಗೆದು ಅವಳ ಕರುಳಮಾಲೆಯನ್ನು
ಧರಿಸುವ ವಿಚಿತ್ರ ನೃಸಿಂಹಸ್ವಾಮಿ !
ನೋಡಿದಿರಾ ಬಾಲ ಪ್ರಲ್ಹಾದ ನನ್ನ ಕುವರ !

ತಾಯಿಯ ಮೇಲೆ ಕೈಯೆತಲು ಬಂದ
ದಿಟ್ಟ ಪರಶುರಾಮನ ಕಂಡಿರಾ!
ಶಾಪಚಾಪ ಸವ್ಯಸಾಚಿ ನನ್ನ ಕುವರ !

ಬೈರಾಗಿಗಳಲ್ಲಿ ರಾಗ ಹುಟ್ಟಿಸುವ !
ಭೋಗಿಗಳಿಗೆ ತ್ಯಾಗ ಬೋಧಿಸುವ!
ಕಂಡಿರಾ ನವೋನವ ಸುಂದರ ನನ್ನ ಕುವರ!

ತಾಯಿತಂದೆಗಳ ಸೆರೆ ಬಿಡಿಸಿ ಗೀತೆಯ ಹಾಡುವ
ಶ್ರೀಕೃಷ್ಣನ ಕಂಡಿರಾ !
ಲೀಲಾವತಾರಿ ನನ್ನ ಕುವರ !

ಕಂಡಿರಾ ದಿಗಂಬರ ಮೂರ್ತಿ ! ಬಾಲಬುದ್ಧದೇವ !

ಕೋಲಕುದುರೆಯನೇರುವ ಕಲ್ಕಿ !
ಮ್ಲೇಂಛ ಮೋಹವ ಕೊಂದು ಪ್ರೇಮಧರ್ಮವ
ಪ್ರತಿಷ್ಠಾಪಿಸುವ ನನ್ನ ಕುವರ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...