Home / ಕವನ / ಕವಿತೆ / ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಇರುವಿಗರಿವೇ ಮರೆವು, ಮರೆವಿಗೆ
ಅರಿವೆ ಇರುವಿನ ಪರಿಯು, ಈ ಪರಿ
ಹರಿವ ಇರುವಿನ ಅರಿವೆ ಹಿಗ್ಗಿನ
ಸಮರಸದ ಬಾಳು!

ಈ ಘನದ ನೆಲೆ ಪಿಂಡಗೊಂಡಿಹ
ಆ ಮಹತ್ತಿನ ಉಂಡೆ ಗರ್ಭೀ-
ಕರಿಸಿ ಮೊಗ್ಗಾಗಿಹುದು ಮನದುನ್ಮನದ ಬಯಲಿನಲಿ ॥೧॥

ಮನದ ಶೂನ್ಯ ಸ್ಥಿತಿಯು ಪೂರ್ಣದ
ವರ್ಣಗಳನಳವಡಿಸಿ ಪ್ರಾಣಕೆ
ಮಂತ್ರಮಾಲೆಯ ತೊಡಿಸಿ ದೇಹಕೆ ರೂಪು-
ಗೊಡುತಿಹುದು|

ಇದು ವಿರಾಟದ ಆಟ ಉತ್ತರ
ವೀರನಾ ಬಯಲಾಟವಲ್ಲವು
ಪ್ರಾಜ್ಞನಿಪ್ಪತ್ತಾರು ಪಕಳೆಯ ಕಮಲದರಳುವಿಕೆ ॥೨॥

ಒಂದರಲಿ ಎಂಟುಂಟು ಇಪ್ಪ-
-ತೇಳನೆಯ ಭೌತಿಕದ ಗಂಟಿನ
ಬಂಧಗಳೆ ಮನದಾಚೆ ಆ ಸಂಬಂಧ
ಪತಿಕರಿಸಿ|

ಮಹದ ಪದದಲಿ ಮನೆಯ ಹೂಡಲು
ಅತ್ತ ಘನವೋ ಇತ್ತ ಘನ ಎ-
-ತ್ತೆತ್ತು ಘನವೆನೆ ನರನ ನಾರಾಯಣತೆ ಮೆರೆಯುವವು ॥೩॥

ಮಾತು ಮಾತಿನ ಹೂತ ಬಯಲಲಿ
ಈ ಪದಾರ್ಥವೆ ಬದುಕು ಮಾಡಿದೆ
ಅದರ ರುಚಿಯನೆ ಹದವಗೊಳಿಸಲು
ಪಾಕ ಮಾಡುತಿವೆ |

ಡಂಭಕದ ಮಾತೇಕೆ ಆಡಂ-
ಬರದ ನಟನೆಯೆ ಬೇಕೆ, ಸಾಕೋ
ಆ ದಿಗಂಬರ ಭಾವ ಶಂಬರನಗರ ಸಂಹರಿಸೆ ॥೪॥

ಮಾತು ಭಾವದ ಕೀಲ, ರೂಪವು
ಸ್ಫುರಣ ಸ್ಫುರಣದ ಶೀಲ, ಛಂದವೊ
ಅಚ್ಚ ಸ್ವಚ್ಛಂದಕ್ಕೆ ಹೊದಿಸಿದ ಮೇಲುದದ
ತಾಲ |

ಮೌನ ಬ್ರಹ್ಮದ ಭಾಲ ಷಟ್ಪದಿ
ಬ್ರಹ್ಮಲಿಪಿ ಬರೆದಿಹುದು, ಅದ ನಿ-
-ರ್ವಚಿಸಲೆಂದೇ ಧ್ವನಿಸುತಿದೆ ಭಾರತಿಯ ಟೇಂಕಾರ ॥೫॥

ಇಳೆಗೆ ಭಾರತ ಮಹಿಮೆ ಅವತರಿ-
-ಸುತ್ತಿರಲು, ಕನ್ನಡದ ಹೊಕ್ಕರ-
-ಣೆಯಲಿ ಘನಸೋಪಾನ ರಚನೆಗೆ ಇಂಬು
ದೊರೆಕೊಳಿಸಿ |

ಸಾವಿರದ ಕೊರಳಿಂದ ಹೊರಟಿದೆ
ತಾನ ತಾನ ವಿತಾನ ಸುಭಗತೆ
ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು ಅರುಳಿನಲಿ ॥೬॥
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...