Home / ಕವನ / ಕವಿತೆ / ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು?

ಇರುವಿಗರಿವೇ ಮರೆವು, ಮರೆವಿಗೆ
ಅರಿವೆ ಇರುವಿನ ಪರಿಯು, ಈ ಪರಿ
ಹರಿವ ಇರುವಿನ ಅರಿವೆ ಹಿಗ್ಗಿನ
ಸಮರಸದ ಬಾಳು!

ಈ ಘನದ ನೆಲೆ ಪಿಂಡಗೊಂಡಿಹ
ಆ ಮಹತ್ತಿನ ಉಂಡೆ ಗರ್ಭೀ-
ಕರಿಸಿ ಮೊಗ್ಗಾಗಿಹುದು ಮನದುನ್ಮನದ ಬಯಲಿನಲಿ ॥೧॥

ಮನದ ಶೂನ್ಯ ಸ್ಥಿತಿಯು ಪೂರ್ಣದ
ವರ್ಣಗಳನಳವಡಿಸಿ ಪ್ರಾಣಕೆ
ಮಂತ್ರಮಾಲೆಯ ತೊಡಿಸಿ ದೇಹಕೆ ರೂಪು-
ಗೊಡುತಿಹುದು|

ಇದು ವಿರಾಟದ ಆಟ ಉತ್ತರ
ವೀರನಾ ಬಯಲಾಟವಲ್ಲವು
ಪ್ರಾಜ್ಞನಿಪ್ಪತ್ತಾರು ಪಕಳೆಯ ಕಮಲದರಳುವಿಕೆ ॥೨॥

ಒಂದರಲಿ ಎಂಟುಂಟು ಇಪ್ಪ-
-ತೇಳನೆಯ ಭೌತಿಕದ ಗಂಟಿನ
ಬಂಧಗಳೆ ಮನದಾಚೆ ಆ ಸಂಬಂಧ
ಪತಿಕರಿಸಿ|

ಮಹದ ಪದದಲಿ ಮನೆಯ ಹೂಡಲು
ಅತ್ತ ಘನವೋ ಇತ್ತ ಘನ ಎ-
-ತ್ತೆತ್ತು ಘನವೆನೆ ನರನ ನಾರಾಯಣತೆ ಮೆರೆಯುವವು ॥೩॥

ಮಾತು ಮಾತಿನ ಹೂತ ಬಯಲಲಿ
ಈ ಪದಾರ್ಥವೆ ಬದುಕು ಮಾಡಿದೆ
ಅದರ ರುಚಿಯನೆ ಹದವಗೊಳಿಸಲು
ಪಾಕ ಮಾಡುತಿವೆ |

ಡಂಭಕದ ಮಾತೇಕೆ ಆಡಂ-
ಬರದ ನಟನೆಯೆ ಬೇಕೆ, ಸಾಕೋ
ಆ ದಿಗಂಬರ ಭಾವ ಶಂಬರನಗರ ಸಂಹರಿಸೆ ॥೪॥

ಮಾತು ಭಾವದ ಕೀಲ, ರೂಪವು
ಸ್ಫುರಣ ಸ್ಫುರಣದ ಶೀಲ, ಛಂದವೊ
ಅಚ್ಚ ಸ್ವಚ್ಛಂದಕ್ಕೆ ಹೊದಿಸಿದ ಮೇಲುದದ
ತಾಲ |

ಮೌನ ಬ್ರಹ್ಮದ ಭಾಲ ಷಟ್ಪದಿ
ಬ್ರಹ್ಮಲಿಪಿ ಬರೆದಿಹುದು, ಅದ ನಿ-
-ರ್ವಚಿಸಲೆಂದೇ ಧ್ವನಿಸುತಿದೆ ಭಾರತಿಯ ಟೇಂಕಾರ ॥೫॥

ಇಳೆಗೆ ಭಾರತ ಮಹಿಮೆ ಅವತರಿ-
-ಸುತ್ತಿರಲು, ಕನ್ನಡದ ಹೊಕ್ಕರ-
-ಣೆಯಲಿ ಘನಸೋಪಾನ ರಚನೆಗೆ ಇಂಬು
ದೊರೆಕೊಳಿಸಿ |

ಸಾವಿರದ ಕೊರಳಿಂದ ಹೊರಟಿದೆ
ತಾನ ತಾನ ವಿತಾನ ಸುಭಗತೆ
ಕವಿಗೆ ಕಿವಿಗೊಡದಿಹರೆ ಎದೆಯುಳ್ಳವರು ಅರುಳಿನಲಿ ॥೬॥
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...