Home / ಲೇಖನ / ಇತರೆ / ಬಾಳಿನಲ್ಲಿ ಶೃದ್ಧೆ

ಬಾಳಿನಲ್ಲಿ ಶೃದ್ಧೆ

ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಷ್ಠೆ ಮತ್ತು ಶೃದ್ಧೆ ಇರಬೇಕು. ಶೃದ್ಧೆ ಇಲ್ಲದ ಕಾರ್ಯ ಎಂದಿಗೂ ಸುಗಮವಾಗದೆ ಕೆಡುತ್ತದೆ. ಅಂತಲೇ ನಾವು ಮಾಡುವ ಕಾಯಕದ ಮೇಲೆ ಮನಸಿಟ್ಟು ಮಾಡಬೇಕು. ಆದರೆ ಮನುಷ್ಯ ತಾನು ಮಾಡುತ್ತಿರುವ ಕಾರ್ಯದಲ್ಲಿ ತನುವು ತೊಡಗಿಸಿಕೊಂಡರೂ ಅವನ ಮನಸ್ಸು ಇನ್ನಾವುದೋ ವಿಚಾರದಲ್ಲಿ ತಲ್ಲೀನವಾಗುತ್ತದೆ. ಹೀಗೆ ಮಾಡುವುದರಿಂದ ಅವನೆಂದೂ ಜೀವನದಲ್ಲಿ ಸಾರ್ಥಕವಾದ ಕಾರ್ಯ ಮಾಡಲಾರನು.

ಈಗ ಅನೇಕ ಸಲ ಕಚೇರಿಯಲ್ಲಿ ನಾವು ನೋಡುತ್ತೇವೆ. ಕಾರ್ಯ ನಿರ್ವಹಿಸುವ ಆ ಕಚೇರಿಯ ಸಿಬ್ಬಂದಿ ವರ್ಗದವರು ಕಾರ್ಯ ಮಾಡುತ್ತಿರುವಾಗಲೇ ಇನ್ನಾವುದೋ ಮಾತುಗಳಲ್ಲಿ, ವಿಷಯಗಳಲ್ಲಿ ತೇಲಾಡುತ್ತಾರೆ. ಹೀಗಾಗುವುದರಿಂದ ಲೆಕ್ಕ ತಪ್ಪಾಗಬಹುದು. ಅವಘಡಕ್ಕೆ ಕಾರಣವಾಗಬಹುದು. ಬ್ಯಾಂಕಿನಲ್ಲಿ ನಗದು ಗುಮಾಸ್ತ ತನ್ನ ಗ್ರಾಹಕರಿಗೆ ನೀಡುವ ಪ್ರತಿಯೊಂದು ಚೆಕ್ಕಿನ ಬಗ್ಗೆಯೂ ಲೆಕ್ಕವಿರಬೇಕು. ತುಸು ಅಲಕ್ಷ್ಯವಾದರೂ ಕೈಯಿಂದ ಕಾಸು ಕಳೆದುಕೊಳ್ಳಬೇಕಾಗುತ್ತದೆ.

ಮನೆಯಲ್ಲಿ ನಾರಿಯರು ಮನೆಗೆಲಸಗಳನ್ನು ಮಾಡುವಾಗ ಯಾವ ಕಾರ್ಯ ಮಾಡುತ್ತಿರುತ್ತಾರೋ ಅದರಲ್ಲಿಯೇ ಅವರ ಮನಸ್ಸಿರಬೇಕು. ಅಡುಗೆ ಮಾಡುವಾಗ ಬಟ್ಟೆ ಒಗೆಯುವ ಬಗ್ಗೆ, ಬಟ್ಟೆ ತೊಳೆಯುವಾಗ ಪಾತ್ರೆ ಸ್ವಚ್ಛಗೊಳಿಸುವ ಬಗ್ಗೆ ಚಿಂತನೆ ಮಾಡಿದರೆ ಈಗಿರುವ ಕೆಲಸ ಮತ್ತು ಮಾಡಬೇಕಾದ ಕೆಲಸಗಳೂ ಹಾಳಾಗುತ್ತವೆ.

ನಮ್ಮ ಶೃದ್ಧೆ ಕೇವಲ ಕಾರ್ಯದ ಮೇಲೆ ಮಾತ್ರ ಇರದೆ ಹಿರಿಯರ ಮಾತುಗಳನ್ನು ಸಹ ನಾವು ಶೃದ್ಧೆಯಿಂದ ಕೇಳಿ ನಿರ್ವಹಿಸವಬೇಕು. ಅವರು ಹೇಳುವ ಕಾಟಾಚಾರಕ್ಕೆ ಕಾರ್ಯ ನಿರ್ವಹಿಸಿದರೆ ಅವರಿಗೂ ಖುಷಿ ಕೊಡುವುದಿಲ್ಲ. ಮತ್ತು ಕಾರ್ಯವೂ ಶಿಸ್ತಾಗುವುದಿಲ್ಲ.

ಶ್ರೀ ರಾಮಕೃಷ್ಣ ಪರಮಹಂಸರು ಒಂದು ಪುಟ್ಟ ಕಥೆ ಹೇಳುತಿದ್ದರು. ಓರ್ವ ಪ್ರಯಾಣಿಕ ದಾರಿಯಲ್ಲಿ ನಡೆದು ನದಿ ತೀರಕ್ಕೆ ಬಂದಿದ್ದ. ನದಿ ದಾಟಿ ಆಚೆಗೆ ಹೋಗುವ ಪಸ್ರಂಗ, ನದಿಯಲ್ಲಿ ತುಂಬ ಜಾಸ್ತಿ ನೀರಿತ್ತು. ಹಿಂತಿರುಗಿ ಹೋಗಲು ಕತ್ತಲಾಗುತಿತ್ತು. ಏನೂ ತೋಚದೆ ನಿಂತಿರಲು ಅಲ್ಲೋರ್ವ ಸಾಧು ಈ ಪ್ರಯಾಣಿಕನ ಹೊಯ್ದಾಟ ಕಂಡು ಹತ್ತಿರಕ್ಕೆ ಕರೆದು ಒಂದು ಎಲೆಯ ಮೇಲೆ ಏನೋ ಬರೆದು ಈ ಪ್ರಯಾಣಿಕನ ಕೈಗಿತ್ತು. ‘ಹೋಗು ನೀನು ಈ ನೀರಿನ ಮೇಲಿಂದ ನಡೆದುಕೊಂಡು ಹೋಗಬಹುದು’ ಎಂದರು. ಪ್ರಯಾಣಿಕನು ಸಂತಸಗೊಂಡು ಸಾಧುವಿಗೆ ಅಭಿನಂದನೆ ಹೇಳಿ ಅದನ್ನು ಪಡೆದು ನೀರ ಮೇಲೆ ಪಾದವಿಟ್ಟನು. ಪ್ರಯಾಣಿಕ ಮುಳುಗದೆ ನೀರಿನ ಮೇಲೆ ನಡೆಯತೊಡಗಿದ. ಕೊನೆಗೆ ಆಶ್ಚರ್ಯಚಕಿತನಾಗಿ ನೀರಿನ ಮೇಲಿದ್ದ ಎಲೆಯಲ್ಲಿ ಏನಿದೆಯೋ? ಎಂದು ಬಿಡಿಸಿ ನೋಡಿದಾಗ ಅದರ ಮೇಲೆ “ಶ್ರೀರಾಮ” ಬರೆದಿತ್ತು. ಅಯ್ಯೋ ಇಷ್ಟೆನಾ! ಎಂದಾಗ ಪ್ರಯಾಣಿಕನ ಶೃದ್ಧೆ ಕರಗಿತ್ತು. ಹಾಗೆ ಅವನು ನೀರಿನಲ್ಲಿ ಮುಳುಗಿದ. ಅಂತಲೇ ಶೃದ್ಧೆಯೇ ಸಾರ್ಥಕ ಬದುಕಿನ ಮೆಟ್ಟಿಲಾಗಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...