Home / ಲೇಖನ / ಇತರೆ / ನಮಗೆ ನಿಮ್ಮ ಪ್ರೀತಿ ಸಾಕು

ನಮಗೆ ನಿಮ್ಮ ಪ್ರೀತಿ ಸಾಕು

‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂದಿದ್ದಾರೆ ಡಿವಿಜಿ. ಆದರೆ ಇವತ್ತು ಹಳೆ ಬೇರು ಹೊಸ ಚಿಗುರಿಗೆ ಬೇಡ ಎನ್ನುವುದಕ್ಕೆ ಪೂರಕವಾಗಿ ಒಂದು ಉದಾಹರಣೆ. ಯಾರೋ ಒಬ್ಬ ಹುಡುಗ ಹೆಣ್ಣು ನೋಡಲು ಹೋಗಿದ್ದ ಸಂದರ್‍ಭದಲ್ಲಿ ಆ ಹುಡುಗಿ ಹೇಳಿದ್ದಂತೆ ‘ನಿಮಗೆ ನಿಮ್ಮ ಅಪ್ಪ, ಅಮ್ಮನ ಮೇಲೆ ಪ್ರೀತಿ ಇದ್ದರೆ ನನ್ನ ತಕರಾರಿಲ್ಲ. ಆದರೆ ಅವರ ಫೋಟೋಗೆ ಮಾಲೆ ಹಾಕಿರಬೇಕು.’ ಒಂದು ಕ್ಷಣ ತಬ್ಬಿಬ್ಬು ಮತ್ತು ಆಘಾತ ಉಂಟು ಮಾಡುವ ಮಾತು. ಹಿರಿಯರ ಮೇಲೆ ಕಿರಿಯರಿಗಿರುವ ಪ್ರೀತಿ ಅಭಿಮಾನ ಮಾಯವಾಗುತ್ತಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಉದಾಹರಣೆ ಬೇಕಿಲ್ಲ. ಇದು ನೋವು ಕೊಡುವ ಸಂಗತಿಯಾದರೂ ಇವತ್ತಿನ ವಾಸ್ತವ.

ಬಾಲ್ಯದಲ್ಲಿ ತಂದೆ-ತಾಯಿಯ ಕೈಬೆರಳು ಹಿಡಿದು ಮಕ್ಕಳು ನಡುಗೆ ಕಲಿಯುತ್ತಾರೆ. ಬೆಳೆದು ದೊಡ್ಡವರಾಗುತ್ತಾ ತಮ್ಮ ಜೀವನದ ದಾರಿಯನ್ನು ಕಂಡುಕೊಂಡು ಹೆತ್ತವರ ಬೆಚ್ಚಗಿನ ಗೂಡಿನಿಂದ ದೂರ ಹಾರಿ ಹೋಗುತ್ತಾರೆ. ಹೀಗಿರುವಾಗ ಮಕ್ಕಳು ವೃದ್ಧಾಪ್ಯದ ಊರುಗೋಲು ಆಗಬೇಕು, ಕೊನೆಯ ಕಾಲದಲ್ಲಿ ಹತ್ತಿರವಿರಬೇಕು ಎನ್ನುವ ಒತ್ತಾಯ ಹೇರಿದರೆ ಕಿರಿಯರ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ. ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕಾದ ಕಾಲ, ಪರಿಸರ ಇಂದು ನಿರ್‍ಮಾಣವಾಗಿದೆ. ಮಕ್ಕಳು ಹತ್ತಿರದಲ್ಲಿಲ್ಲ ಎನ್ನುವ ಕಹಿ ಭಾವನೆಯಿಂದ ಹಿರಿಯರು ಮುಕ್ತರಾಗಲೇಬೇಕು.

ಮುಪ್ಪಿನ ಕಾಲಕ್ಕೆ ಬೇಕಾದ ಆರ್‍ಥಿಕ ಭದ್ರತೆಯನ್ನು ಮಾಡಿಕೊಂಡು ಸ್ವತಂತ್ರವಾಗಿ ಜೀವನ ಸಾಗಿಸುವ ಆತ್ಮವಿಶ್ವಾಸವನ್ನು ಇವತ್ತಿನ ಹಿರಿಯರು ಬೆಳೆಸಿಕೊಂಡಿರುವುದರಿಂದ ಹಿಂದಿನಂತೆ ಮುಪ್ಪಿನಲ್ಲಿ ಮಕ್ಕಳಿಗೆ ಭಾರವಾಗಿರಲು ಇಷ್ಟಪಡುವುದಿಲ್ಲ. ಇದೊಂದು ಆರೋಗ್ಯಕರ ಬೆಳವಣಿಗೆ ಮಕ್ಕಳ ಮೇಲಿನ ಪ್ರೀತಿ ಅವರನ್ನು ಸೆಳೆಯುತ್ತಿದ್ದರೂ ಮಕ್ಕಳು ಎಲ್ಲಾದರೂ ಚೆನ್ನಾಗಿರಲಿ ಎನ್ನುವುದಷ್ಟೇ ಅವರ ಆಶಯವಾಗಿರುತ್ತದೆ.

ಮುಪ್ಪಿನಲ್ಲಿ ಹಿರಿಯರಿಗೆ ಮುಖ್ಯವಾಗಿ ಬೇಕಾಗಿರುವುದು ಸಮಾಧಾನ ಹಾಗೂ ಮಾನಸಿಕ ನೆಮ್ಮದಿ. ಮಕ್ಕಳು ದೂರದಲ್ಲಿದ್ದರೂ ಮಾನಸಿಕ ಸಾಮೀಪ್ಯವನ್ನು ಬೆಳೆಸಿಕೊಂಡಿದ್ದರೆ ಅದರಲ್ಲೇ ಹೆತ್ತವರಿಗೆ ಸಮಾಧಾನ ಸಿಗುತ್ತದೆ. ಆದರೆ ಇಂದಿನ ಕ್ಲಿಷ್ಟಕರ ಜೀವನದಲ್ಲಿ ಹಿರಿಯರಿಗೆ ಅದೇ ಸಿಗುತ್ತಿಲ್ಲ. ಇದು ದುರ್‍ದೈವ.

ಹಿರಿಯರು, ಕಿರಿಯರು ಎಲ್ಲರೂ ಒಟ್ಟಾಗಿ ಒಂದೇ ಸೂರಿನಡಿಯಲ್ಲಿ ಜೀವಿಸುತ್ತಿದ್ದ ಕಾಲದಲ್ಲಿ ಹಿರಿಯರಿಗೂ, ಕಿರಿಯರಿಗೂ ಜೀವನ ಸುಲಭವಾಗಿತ್ತು. ಹಿರಿಯರು ಮುಪ್ಪಿಗೆ ಜಾರಿದಾಗ ಕಿರಿಯರು ಅವರನ್ನು ಹೆಚ್ಚಿನ ಪ್ರೀತಿಯಿಂದ, ಮುತುವರ್‍ಜಿಯಿಂದ ನೋಡಿಕೊಳ್ಳುತ್ತಿದ್ದರು. ಆದರೆ ಆಧುನಿಕ ಜಗತ್ತಿನ ಬದಲಾಗುತ್ತಿರುವ ಮೌಲ್ಯಗಳನ್ನು ಒಪ್ಪಿಕೊಂಡು ಬದುಕುತ್ತಿರುವ ಹೆಚ್ಚಿನ ಮಕ್ಕಳಿಗೆ ಹಿರಿಯರು ತಮ್ಮೊಂದಿಗಿರುವುದು ಇಷ್ಟವಿಲ್ಲ. ಮಕ್ಕಳಿಂದ ದೂರವಾಗಿ ಒಬ್ಬಂಟಿಗರಾಗಿಯೋ, ವೃದ್ಧಾಶ್ರಮದಲ್ಲೋ ಇರುವ ಬಹುಪಾಲು ಹಿರಿಯರಿಗೆ ಮುಪ್ಪು ಒಂದು ಶಾಪ ವಾಗುತ್ತಿರುವುದನ್ನು ಸುತ್ತಲೂ ನೋಡುತ್ತೇವೆ. ಇದನ್ನು ಮೀರಿ ಮುಪ್ಪಿನ ಜತೆಗೆ ಬದುಕಲು ಕಲಿತಾಗ ಮಕ್ಕಳೇ ಆಧಾರ ಎನ್ನುವ ಭಾವದಿಂದ ಮುಕ್ತರಾಗಿ ಸಮಾಧಾನದಿಂದ ಜೀವಿಸಬಹುದು.

ಜಗವಿಡೀ ಹಬ್ಬಿರುವ ಇವತ್ತಿನ ಮಕ್ಕಳಿಗೆ ಹಿರಿಯರು ಹೊರೆಯಾಗುತ್ತಿರುವ ಪರಿಸರದಲ್ಲಿ ವಿಶ್ವ ಹಿರಿಯರ ದಿನವನ್ನು ಆಚರಿಸುವ ಸಂದರ್‍ಭದಲ್ಲಿ ಹಿರಿಯರು ಇದನ್ನು ಅರಿತುಕೊಂಡು ಕಿರಿಯರಿಗೆ ಭಾರವಾಗದೆ ಜೀವಿಸಬಲ್ಲೆವು ನಮಗೆ ನಿಮ್ಮ ಪ್ರೀತಿ ಮಾತ್ರ ಸಾಕು ಎನ್ನುವ ಅರಿವುಂಟುಮಾಡುವುದು ಹೆಚ್ಚು ಸೂಕ್ತ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...