Home / ಕಥೆ / ಜನಪದ / ಅಳಿಯನ ಅರ್ಹತೆ

ಅಳಿಯನ ಅರ್ಹತೆ

ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ತಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನನ್ನು ಅಳಿಯತನಕ್ಕೆ ಇಟ್ಟುಕೊಳ್ಳಬೇಕೆಂದು ನಿರ್ಣಯಿಸಿದ್ದನು.

ಅದೆಷ್ಟೋ ಜನ ವರಗಳು ಬಂದು ಬಂದು ಹೋದವು. ಆದರೆ ಶ್ರೀಮಂತ ಮಾವನಿಗೆ ಅವರಾರಲ್ಲಿಯೂ ಅರ್ಹತೆ ಕಂಡುಬರಲಿಲ್ಲ. ಆದರೆ ಬಕ್ಕಣಗಿ ಎಂಬ ಹಳ್ಳಿಯಲ್ಲಿ ಅದೇ ಗೋತ್ರದ ಒಂದು ಮನೆತನವಿತ್ತು. ಅಲ್ಲಿ ಇಬ್ಬರು ಅಣ್ಣತಮ್ಮಂದಿರಿದ್ದರು. ಅವರಿಗಿನ್ನೂ ಮದಿವೆಯಾಗಿರಲಿಲ್ಲ. ಆ ಶ್ರೀಮಂತ ಮನೆತನಕ್ಕೆ ಅಳಿಯನಾಗಿ ನಿಲ್ಲಲು ಅರ್ಹನಾದ ಒಬ್ಬ ವರ ಬೇಕಾಗಿದ್ದಾನೆಂಬ ಸಂಗತಿ ತಿಳಿಯಿತು. ಅವರ ತಂದೆಯು ಮಕ್ಕಳಿಬ್ಬರನ್ನೂ ಕೆರೆದು – “ನೀವಿಬ್ಬರೂ ಹೋಗಿ ನಿಮ್ಮ ನಿಮ್ಮ ಬುದ್ದಿವಂತಿಕೆ ತೋರಿಸಿ, ಇಬ್ಬರಲ್ಲಿ ಒಬ್ಬರು ಅಳಿಯತನಕ್ಕೆ ನಿಂತರೆ ಒಳ್ಳೆಯದಾಗುತ್ತದೆ ಎಂದು ಹೇಳಿದನು.

ತಂದೆಯ ಸೂಚನೆಯಂತೆ ಅವರಿಬ್ಬರೂ ಆ ಶ್ರೀಮಂತನ ಊರಿಗೆ ಹೋಗಿ ಅವನನ್ನು ಭೆಟ್ಟಿಯಾದರು. ಅವನು ಒಬ್ಬೊಬ್ಬರನ್ನು ಪರಭಾರೆ ಕರೆದೊಯ್ದು ಅವರ ಅರ್ಹತೆಯನ್ನು ಪರೀಕ್ಷಿಸತೊಡಗಿದನು.

“ಇದ್ದ ಆಸ್ತಿಯನ್ನು ಉಳಿಸುವುದಕ್ಕೂ ಬೆಳೆಸುವುದಕ್ಕೂ ನೀನಾವ ಬುದ್ಧಿವಂತಿಕೆಯಿಂದ ಸಂಸಾರ ಮಾಡುತ್ತೀ” ಎಂದು ಕೇಳಿದನು.

ಹಿರಿಯವನು ತನ್ನ ಅರ್ಹತೆಯನ್ನು ವಿವರಿಸುತ್ತಾನೆ – “ನನಗೆ ದಿನಕ್ಕೆ ಒಂದು ರೊಟ್ಟಿಯಾದರೆ ಸಾಕು. ಅದನ್ನು ತಿಂದು ತಂಬಿಗೆ ನೀರು ಕುಡಿದು ಒಂದು ದಿನ ಕಳೆಯುತ್ತೇನೆ.” ಆ ಮಾತು ಕೇಳಿ ಶ್ರೀಮಂತನು ಮನಸ್ಸಿನಲ್ಲಿ – ಅಬಬಬಾ ! ಅಂದುಕೊಂಡು – “ಅಡ್ಡಯಿಲ್ಲ, ನಿನ್ನ ತಮ್ಮನನ್ನು ಒಳಗೆ ಕಳಿಸಿಕೊಡು” ಎಂದು ಹಿರಿಯ ವರನಿಗೆ ಹೇಳಿದನು. ಚಿಕ್ಕವನು ಶ್ರೀಮಂತನ ಬಳಿಗೆ ಬರಲು ಆತನಿಗೆ – “ಈ ಆಸ್ತಿಯನ್ನೆಲ್ಲ ನೀನೆಂತು ಕಾಪಾಡಿಕೊಂಡು ಹೋಗಬಲ್ಲೆ ? ಯಾವ ಯುಕ್ತಿಯನ್ನು ಅನುಸರಿಸುವಿ?” ಎಂದು ಕೇಳಿದನು.

ಆತನು ತನ್ನ ಜೀವನ ರೀತಿಯನ್ನು ಹೇಳುತ್ತಾನೆ – “ಒಂದು ದಾರದೆಳೆಗೆ ಒಂದು ರೊಟ್ಟಿ ಕಟ್ಟಿ ಅದನ್ನು ತೂಗಿಬಿಡುವುದು. ಹತ್ತಿರದಲ್ಲಿ ಒಂದು ತಂಬಿಗೆ ಕುಡಿಯುವ ನೀರನ್ನು ತುಂಬಿಟ್ಟುಕೊಳ್ಳುವದು. ಮೊದಲು ನೇತಾಡುವ ರೊಟ್ಟಿಯನ್ನು ಕಣ್ತುಂಬ ನೋಡಿ, ಆ ಬಳಿಕ ತಂಬಿಗೆಯೊಳಗಿನ ನೀರಿನ ಕಡೆಗೆ ಕಣ್ಣು ಹೊರಳಿಸಿದರೆ ತೀರಿತು ನನ್ನ ಊಟ. ತರುವಾಯ ಅಡಿಕೆಹೋಳು ಇದ್ದರೂ ಸರಿ, ಇರದಿದ್ದರೂ ಸರಿ. ಸಾಗಿತು ನಮ್ಮ ಗಾಡಿ.”

ಶ್ರೀಮಂತನು ಚಿಕ್ಕವನ ಅರ್ಹತೆಗೆ ಮೆಚ್ಚಿ, ಆತನನ್ನು ಅಳಿಯತನಕ್ಕೆ ಇಟ್ಟುಕೊಂಡು ಮಗಳನ್ನು ಕೊಟ್ಟು ಮದುವೆ ಮಾಡಿದನು.

ಅಳಿಯನೇ ಶ್ರೀಮಂತ ಆಸ್ತಿಗೆ ಒಡೆಯನಾಗಿ, ಆತನ ಸರಿಯಾದ ಸಂಪತ್ತನ್ನು ಉಪಭೋಗಿಸುತ್ತ ಸುಖದಿಂದ ಕಾಲಕಳೆಯಹತ್ತಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...