Home / ಲೇಖನ / ಇತರೆ / ಧರ್ಮದ ಮಹತ್ವತೆ

ಧರ್ಮದ ಮಹತ್ವತೆ

ನಮ್ಮ ಬಾಳಿನಲ್ಲಿ ಧರ್ಮಕ್ಕೆ ಅತ್ಯಂತ ಮಹತ್ವ ನೀಡಬೇಕು. ಶ್ರೀ ಬಸವಣ್ಣನವರು ಹೇಳಿದ ಹಾಗೆ ‘ದಯವಿಲ್ಲದ ಧರ್ಮದೇವುದಯ್ಯ’ ಎಂದು ತಮ್ಮ ವಚನಗಳಲ್ಲಿ ಕೇಳುತ್ತಾರೆ. ಧರ್ಮ ಎಂದರೆ ನಮಗೆ ಸನ್ಮಾರ್ಗದತ್ತ ನಡೆಸುವುದೇ ಧರ್ಮ ಎನಿಸುತ್ತದೆ. ಹೊರತುಪಡಿಸಿ ಮೂಢ ನಂಬಿಕೆಗಳೆಲ್ಲ ಆಚರಣೆದಲ್ಲಿ ತರುವುದೆಂದರ್ಥವಲ್ಲ. ಜಗತ್ತಿನ ಧರ್ಮಗಳಲ್ಲೆಲ್ಲ ಮಾನವೀಯ ಸಂಬಂಧಗಳನ್ನು ಜೋಡಿಸಿಕೊಂಡಿವೆ. ಎಲ್ಲಿ ಸತ್ಯ, ನ್ಯಾಯ, ಮಾನವೀಯತೆ ಇದೆಯೊ ಅದೇ ಧರ್ಮ. ಎಲ್ಲ ಧರ್ಮಗಳು ವಿನಯವನ್ನು ಕಟ್ಟಿಕೊಡುತ್ತವೆ.

ನಯಸೇನನ ‘ಧರ್ಮಾಮೃತಂ’ ದಲ್ಲಿ ‘ಧರ್ಮವೇ ತಂದೆ, ಧರ್ಮವೇ ಪ್ರಿಯೆ, ಧರ್ಮವೇ ಬಂಧು ವರ್ಗ, ಸದ್ಧರ್ಮವೇ ಮುತ್ತಜ್ಜ, ಉತ್ತಮ ಅಜ್ಜ, ಹೇಗೆ ನೋಡಿದರೂ ಧರ್ಮವೇ ಮುಖ್ಯ ಎಂಬುದಾಗಿ ಸುಖವನ್ನು ಬಯಸುವಾತನು ಪರಿಭಾವಿಸುತ್ತಿರಲಿ’ ಎಂದು ಹೇಳಿದೆ. ಹಾಗೆ ನಾವು ಸದಾ ಸದ್ಧರ್ಮ, ಸದ್ವಿನಯದಲ್ಲಿ ಜೀವನ ಕಳೆಯಲು ಪ್ರಯತ್ನಿಸಬೇಕು.

ಶೃದ್ಧೆ ಆಚರಣೆಯಲ್ಲಿ ಬಾಳುವುದು ಇನ್ನೊಬ್ಬರಿಗೆ ನೋವಾಗದಂತೆ ನೋಡಿಕೊಳ್ಳುವುದು ನಡೆ-ನುಡಿಯಲ್ಲಿ ಏಕಸಾಮ್ಯ ತುಂಬಿಕೊಳ್ಳುವುದು, ಮನುಷ್ಯ ಮನುಷ್ಯರಿಗೆ ಸಹಕರಿಸುವುದು ಧರ್ಮವಾಗುತ್ತದೆ. ಒಬ್ಬರು ಕಷ್ಟಕಾಲದಲ್ಲಿದ್ದಾಗ ಸಹಕರಿಸುವುದು, ದುಃಖದಲ್ಲಿದ್ದದವರಿಗೆ ಸಾಂತ್ವನ ಹೇಳುವುದು, ವಯಸ್ಸಾದವರಿಗೆ ಊರುಗೋಲಾಗಿ ಉಪಕಾರ ಮಾಡುವುದೆಲ್ಲವೂ ಸಹಜ ಧರ್ಮವಾಗುತ್ತದೆ.

ಇವತ್ತು ಲೋಕದಲ್ಲಿ ಕೊಲೆ-ಸುಲಿಗೆ, ಸುಳ್ಳು ಮೋಸ ಸ್ವಾರ್ಥ, ಸ್ವಹಿತಪರ ಆಶ್ವಾಸನೆಗಳು ಮಿತಿಮೀರಿವೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಏನನ್ನಾದರೂ ಮಾಡಲು ಸಿದ್ಧನಾಗಿಹನು, ಅವನು ಧರ್ಮವನ್ನು ಕಡೆಗಣಿಸಿಹನು.

ನಮ್ಮ ಪಾಪ ಕರ್ಮಗಳಿಗೆ ಅಂಕುಶವಾಗಿರಬೇಕಾದುದೇ ಧರ್ಮ ಎನಿಸುತ್ತದೆ. ಜಾತಿ-ಪಂಗಡಗಳ ಸೂತಕದಿಂದ ಮುಕ್ತವಾಗಿ ಪತನದತ್ತ ಜಾರುತ್ತಿರುವ ವ್ಯಕ್ತಿಯನ್ನು ಅಪ್ಪಿ ಸನ್ಮಾರ್ಗಕ್ಕೆ ಎಳೆಸುವುದೇ ಧರ್ಮವಾಗುತ್ತದೆ.

ಗಾಂಧೀಜಿಯವರು ನಮ್ಮಲ್ಲಿರುವ ದೋಷಗಳಿಗೆ ಮುಕ್ತವಾಗಿಸುವ ಕರ್ತವ್ಯಕ್ಕೆ ಧರ್ಮ ಎಂದು ಕರೆದರು. ಯಾರಲ್ಲಿ ಅಂತಃಕರಣ, ಪ್ರೀತಿ, ಅನುಕಂಪ ಇಲ್ಲವೋ ಅವರಲ್ಲಿ ಧರ್ಮವೆಂಬುದು ಕನ್ನಡಿಯೊಳಗಿನ ಗಂಟು ಎಂದು ಹೇಳಬಹುದು.

ನಮ್ಮ ಪೂರ್ವಜರು ಈ ಲೋಕದಲ್ಲಿ ಎಲ್ಲರೂ ನೆಮ್ಮದಿಯಿಂದ ಬಾಳಲೆಂದೇ ಈ ಧರ್ಮವೆಂಬ ಕಟ್ಟುಪಾಡು ನಮಗೆ ಹಾಕಿದರು. ಎಲ್ಲ ಧರ್ಮಗಳು ಸಮಾನತೆ ಮತ್ತು ಸತ್ಯವನ್ನೇ ಸಾರಿವೆ. ಅಂಥ ಧರ್ಮವೇ ನಮ್ಮ ಬದುಕು ಬೆಳಗಿಸಲು ಕಾರಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...