Home / ಕಥೆ / ಜನಪದ / ಉದ್ದನ್ನವರ ಮುಂದೆ ಕೀರ್ತನ

ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...