Home / ಕಥೆ / ಜನಪದ / ಉದ್ದನ್ನವರ ಮುಂದೆ ಕೀರ್ತನ

ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...