Home / ಕಥೆ / ಜನಪದ / ಉದ್ದನ್ನವರ ಮುಂದೆ ಕೀರ್ತನ

ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...