Home / ಕಥೆ / ಜನಪದ / ಉದ್ದನ್ನವರ ಮುಂದೆ ಕೀರ್ತನ

ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...