ಉದ್ದನ್ನವರ ಮುಂದೆ ಕೀರ್ತನ

‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ್ನವರೇ ಆಗಿದ್ದಾರೆಂಬ ಭರವಸೆಯಾದ ಬಳಿಕ ಕೀರ್ತನಕಾರನು ತನ್ನ ಅಮೋಘವಾಣಿಯಿಂದ ಕೀರ್ತನ ಹೇಳಲು ಪ್ರಾರಂಭಿಸಿದನು.

ಸ್ತೋತ್ರವಾಯಿತು. ಉಪೋದ್ಘಾತ ಮುಗಿಯಿತು. ಮುಖ್ಯಕಥೆ ಮುಗುಳಿ ಮುಂದುವರೆಯಿತು. ಅಷ್ಟರಲ್ಲಿ ಸಂದರ್ಭಾನುಸಾರವಾಗಿ ಒಂದು ಅಡ್ಡಕತೆಯನ್ನು ಹೇಳುವದಕ್ಕೆ ಮೊದಲು ಮಾಡಿದನು ಕೀರ್ತನಕಾರನು. ಅದು ಏನೆಂದರೆ –

“ಒಮ್ಮೆ ತಿಪ್ಪೆಯಲ್ಲಿ ಬಿದ್ದ ಪತ್ರಾವಳಿಗೂ ಮಣ್ಣು ಹೆಂಟೆಗೂ ಮಾತುಕತೆ ನಡೆಯಿತು. ಪತ್ರಾವಳಿ ಅಂದಿತು – “ಹೆಂಟೆಣ್ಣ, ಮಳೆಗಾಲ ಆರಂಭವಾಗುವಂತೆ ತೋರುತ್ತದೆ. ಗಾಳಿ-ಮಳೆಗಳು ನಾಮುಂದೆ ನಾಮುಂದೆ ಎನ್ನುತ್ತ ಮೈ ಮೇಲೆ ದಾಳಿ ಮಾಡುವವು. ಅಂಥ ಸಂದರ್ಭದಲ್ಲಿ ನಾವು ಬದುಕುವ ಬಗೆಯೇನು? ಗಾಳಿ ಬಿರುಸಾಗಿ ಬೀಸಿದರೆ ನಾನು ಹಾರಿಹೋಗುತ್ತೇನೆ ಎಲ್ಲಿಯೋ. ಮರಮಳೆಹೊಡೆಯ ಹತ್ತಿದರೆ ನೀನು ಕರಗಿಹೋಗುತ್ತೀ. ಏನು ಉಪಾಯ ಇದಕ್ಕೆ?”

ಅಷ್ಟರಲ್ಲಿ ಶ್ರೋತೃವೃಂದದಿಂದ ಒಂದು ಮಾತು ಕೇಳಿಬಂದಿತು – ಗಾಳಿ ಮಳೆ ಎರಡೂ ಏಕಕಾಲಕ್ಕೆ ಕೂಡಿಕೊಂಡು ಬಂದರೆ ಹೇಗೆ ಮಾಡುವುದು?

ಆ ಅಡ್ಡ ಪ್ರಶ್ನೆಯನ್ನು ಕೇಳಿ ಕೀರ್ತನಕಾರನಿಗೆ ದಿಗಿಲಾಯಿತು. ಕಕ್ಕಾವಿಕ್ಕಿಯೇ ಆಗಿ ನಿಂತನು. ಊರ ಪ್ರಮುಖರನ್ನು ಹತ್ತಿರ ಕರೆದು ಕಿವಿಯಲ್ಲಿ ಹೇಳಿದನು – “ಶ್ರೋತೃವರ್ಗದಲ್ಲಿ ಇನ್ನೊಬ್ಬ ಗಿಡ್ಡನು ಉಳಿದುಕೊಂಡಿದ್ದಾನೆ. ಅವನನ್ನು ಎಬ್ಬಿಸಿ ಕಳಿಸಿರಿ. ಇಲ್ಲದಿದ್ದರೆ ಕೀರ್ತನೆ ಮುಂದೆ ಸಾಗುವದಿಲ್ಲ.”

ಜನರಲ್ಲಿ ಕಣ್ಣುತಪ್ಪಿಸಿ ಕುಳಿತ ಆ ಗಿಡ್ಡನನ್ನು ಎಬ್ಬಿಸಿ ಕಳಿಸಿದ ಬಳಿಕ, ಕೀರ್ತನವು ತಡೆಯಿಲ್ಲದೆ ಸಾಗತೊಡಗಿತು. ಉದ್ದನ್ನವರ ಮುಂದೆಯೇ ಅವನ
ಕೀರ್ತನ. ಯಾಕಂದರೆ – ಉದ್ದನ್ನವರಿಗೆ ಬುದ್ಧಿ ಕಡಿಮೆಯಂತೆ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೮೨
Next post ಕಡಲೇ ಒಮ್ಮೊಮ್ಮೆಯಾದರೂ ಬಾ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

cheap jordans|wholesale air max|wholesale jordans|wholesale jewelry|wholesale jerseys