Home / ಕವನ / ಅನುವಾದ / ಸರ್ ಜಾನ್ ಮೂರನ್ನು ಹೂಳಿದ್ದು

ಸರ್ ಜಾನ್ ಮೂರನ್ನು ಹೂಳಿದ್ದು

ತಂಬಟೆಹೊಯಿಲಿಲ್ಲ, ವಾದ್ಯದ ಹಲುಬಿಲ್ಲ,
ಹೆಣವ ಕೋಟೆಗೆ ನಾವು ತ್ವರೆಯಲೊಯ್ದಾಗ;
ಒಬ್ಬ ಸಿಪಾಯಿಯ ಕಳುಹುವ ಸುರುಟಿಯಿಲ್ಲ,
ನಮ್ಮ ನಾಯಕನನು ಹೂಳುತಿದ್ದಾಗ.
ಹೂಳಿದೆವವನನು ಸರಿಹೊತ್ತಿನಿರುಳಲಿ,
ಮಣ್ಣ ಬಂದೂಕದ ಮೊನೆಯಿಂದ ತಿರುವಿ;
ನುಸುಳಿ ಬರುವ ಬೆಳದಿಂಗಳ ಮಂಜಲ್ಲಿ
ಮಂಕಾದ ಬೆಳಕಿನ ಲಾಂದರದಲ್ಲಿ.
ಒಡಲ ಪೇಳಿಗೆಯಲಿ ಒಪ್ಪ ಮಾಡಲು ಇಲ್ಲ,
ಬಟ್ಟೆ ದುಪ್ಪಟಿಯಲಿ ಸುತ್ತಲು ಇಲ್ಲ;
ನಿದ್ದೆಹೋಗುವ ವೀರನಂದದಿ ಬಿದ್ದಿದ್ದ
ಯುದ್ಧದ ನಿಲುವಂಗಿ ಮುಚ್ಚಿ ಮೈಯೆಲ್ಲ.
ಬೇಗ, ಒಂದೆರಡು ಪ್ರಾರ್ಥನೆಯನ್ನು ಹೇಳಿ.
ಉಕ್ಕುವ ದುಃಖವನೊಳಗೆಯೆ ಅದುಮಿ,
ಸೆಳೆಯಲಾರದೆ ಕಣ್ಣ , ಸತ್ತ ಮುಖವ ನೋಡಿ,
ನೆನೆದೆವು ರೋಷದಿ ನಾಳೆಯ ಪಾಡ.
ನೆನೆದೆವು, ಕಿರಿದು ಹಾಸಿಗೆಯನು ತೋಡುತ,
ಒಬ್ಬನೆ ಒರಗುವ ದಿಂಬನು ಸವರಿ-
ನಾಳೆ ಹೆರರು ಹಗೆಗಳು ತಲೆ ತುಳಿವರೆ!
ತೆರೆಯ ಮೇಲಿರುವೆವೆ ಬಲುದೂರ ನಾವು!
ಹೋದ ಜೀವವ ಜರೆದಾಡಿಕೊಳುವರಾಹ!
ತಣ್ಣಗಾದುರಿಯನು ಮೂದಲಿಸುವರು!
ಎಣಿಸುವನೇ? ತನ್ನ ಮುಟ್ಟದೆ ಬಿಟ್ಟರೆ
ಬ್ರಿಟನನಿಟ್ಟೀ ಕುಳಿಯಲಿ ಮಲಗಿರಲು
ನಮ್ಮ ಸಂಕಟದಲಿ ಕ್ರಿಯೆಯರೆಯಾಯಿತು;
ತುತ್ತುರಿಯಾಯಿತು ಹಿಮ್ಮೆಟ್ಟಿ ಬರಲು.
ಕೇಳಿತು ಕೋಪಿಸಿ ವೈರಿಗಳೊಮ್ಮೊಮ್ಮೆ
ಹಾರಿಸುತ್ತಿದ್ದುದು ದೂರದ ಗುಂಡು.
ಮೆಲ್ಲಗೆ, ಮರುಗುತ, ಮಣ್ಣಿನಲಿಟ್ಟೆವು
ರಣದ ರಕ್ತದ ಚೆಲುವಿನ ಚೆಲುವಿನಲಿ.
ಕಲ್ಲ ನೆಡದೆ ಒಂದು ಪಂಕ್ತಿಯ ಕೆತ್ತದೆ,
ಅವನ ಕೀರ್ತಿಯಲವನೆ ಬಿಟ್ಟೆವಲ್ಲಿ!
*****
C WOLFE (1791- 1823) : Burial of Sir John Moor
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...