Home / ಕವನ / ಅನುವಾದ / ರಾವುತರ ದಾಳಿ

ರಾವುತರ ದಾಳಿ

ಹರಿದಾರಿ, ಹರಿದಾರಿ,
ಹರಿದಾರಿ ಮುಂದೆ,
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!
ಕೊಚ್ಚಿ ಗುಂಡನು!” ಎಂದ
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!”
ಕುಗ್ಗಿದವನೊಬ್ಬುಂಟೆ?
ಯಾರೊ ತಪ್ಪಿದರೆಂದು
ಧೀರರವರರಿದೂ?
ಹೇಳುವುದಕವರಲ್ಲ,
ಕೇಳುವುದಕವರಲ್ಲ,
ಮಾಡಿ ಮಡಿವುದಕವರು-
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಹರಿದು.
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಮುಂಗಡೆ ಗುಂಡು
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು ,
ಜಗ್ಗದೆಯೆ ನುಗ್ಗಿದರು.
ಮೃತ್ಯುವಿನ ದಾಡೆಯಲಿ,
ನರಕದುರಿಬಾಯಿಯಲ್ಲಿ,
ಆರ್ನೂರು ರಾವುತರು
ನುಗ್ಗಿದರು ತೂರಿ.
ಬೀಸಿ, ಝಳಪಿಸಿ ಕತ್ತಿ,
ನೆಗೆದು, ಕೈ ಮೇಗೆತ್ತಿ,
ಗುಂಡಿನವರನು ಕೆತ್ತಿ,
ಕೊತ್ತಿದರು ಪಡೆಯೊತ್ತಿ-
ಲೋಕ ಬೆರಗಾಯ್ತು!
ಮದ್ದು ಹೊಗೆಯಲಿ ಮುಳುಗಿ,
ಸಾಲು ಮುರಿದರು ನುಗ್ಗಿ;
ಕಾಸಕರು, ರಷ್ಯನರು,
ಕತ್ತಿಹೊಯ್ಲಿಗೆ ಹೊರಳಿ,
ಬೆದರಿ ಧೂಳಾಯ್ತು.
ಆಗ, ಹಿಂದಿರುಗಿದರ-
ಇಲ್ಲ, ಆರ್ನೂರಿಲ್ಲ,
ಹಿಂದಿರುಗಿದವರು!
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಹಿಂಗಡೆ ಗುಂಡು,
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು,
ಆಳು ಕುದುರೆಗಳುರುಳಿ,
ನುಗ್ಗಿದಾ ಧೀರರಲಿ,
ಮೃತ್ಯುವಿನ ಬಸಿರಿಂದ,
ನರಕದುರಿಬಾಯಿಂದ,
ಮರಳಿ ಬಂದರು ಕೆಲರು,
ಆರ್ನೂರು ರಾವುತರು
ಅಳಿದುಳಿದ ಕೆಲರು.
ಮಾಸದವರದು ಹೆಸರು!
ಬೀಸಿ, ಏನ್ನುಗ್ಗಿದರು!
ಲೋಕ ಬೆರಗಾಯ್ತು!
ನುಗ್ಗಿ ಹೊಯ್ದುದ ಹೊಗಳು!
ಜಗ್ಗದೆದೆಗಳ ಹೊಗಳು!
ಆರ್ನೂರು ರಾವುತರ ಶೌರ್ಯ ಹೊಗಳು!
*****
TENNYSON (1809 -1892) : Charge of the Light Brigade
Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...