Home / ಕವನ / ಅನುವಾದ / ರಾವುತರ ದಾಳಿ

ರಾವುತರ ದಾಳಿ

ಹರಿದಾರಿ, ಹರಿದಾರಿ,
ಹರಿದಾರಿ ಮುಂದೆ,
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!
ಕೊಚ್ಚಿ ಗುಂಡನು!” ಎಂದ
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!”
ಕುಗ್ಗಿದವನೊಬ್ಬುಂಟೆ?
ಯಾರೊ ತಪ್ಪಿದರೆಂದು
ಧೀರರವರರಿದೂ?
ಹೇಳುವುದಕವರಲ್ಲ,
ಕೇಳುವುದಕವರಲ್ಲ,
ಮಾಡಿ ಮಡಿವುದಕವರು-
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಹರಿದು.
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಮುಂಗಡೆ ಗುಂಡು
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು ,
ಜಗ್ಗದೆಯೆ ನುಗ್ಗಿದರು.
ಮೃತ್ಯುವಿನ ದಾಡೆಯಲಿ,
ನರಕದುರಿಬಾಯಿಯಲ್ಲಿ,
ಆರ್ನೂರು ರಾವುತರು
ನುಗ್ಗಿದರು ತೂರಿ.
ಬೀಸಿ, ಝಳಪಿಸಿ ಕತ್ತಿ,
ನೆಗೆದು, ಕೈ ಮೇಗೆತ್ತಿ,
ಗುಂಡಿನವರನು ಕೆತ್ತಿ,
ಕೊತ್ತಿದರು ಪಡೆಯೊತ್ತಿ-
ಲೋಕ ಬೆರಗಾಯ್ತು!
ಮದ್ದು ಹೊಗೆಯಲಿ ಮುಳುಗಿ,
ಸಾಲು ಮುರಿದರು ನುಗ್ಗಿ;
ಕಾಸಕರು, ರಷ್ಯನರು,
ಕತ್ತಿಹೊಯ್ಲಿಗೆ ಹೊರಳಿ,
ಬೆದರಿ ಧೂಳಾಯ್ತು.
ಆಗ, ಹಿಂದಿರುಗಿದರ-
ಇಲ್ಲ, ಆರ್ನೂರಿಲ್ಲ,
ಹಿಂದಿರುಗಿದವರು!
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಹಿಂಗಡೆ ಗುಂಡು,
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು,
ಆಳು ಕುದುರೆಗಳುರುಳಿ,
ನುಗ್ಗಿದಾ ಧೀರರಲಿ,
ಮೃತ್ಯುವಿನ ಬಸಿರಿಂದ,
ನರಕದುರಿಬಾಯಿಂದ,
ಮರಳಿ ಬಂದರು ಕೆಲರು,
ಆರ್ನೂರು ರಾವುತರು
ಅಳಿದುಳಿದ ಕೆಲರು.
ಮಾಸದವರದು ಹೆಸರು!
ಬೀಸಿ, ಏನ್ನುಗ್ಗಿದರು!
ಲೋಕ ಬೆರಗಾಯ್ತು!
ನುಗ್ಗಿ ಹೊಯ್ದುದ ಹೊಗಳು!
ಜಗ್ಗದೆದೆಗಳ ಹೊಗಳು!
ಆರ್ನೂರು ರಾವುತರ ಶೌರ್ಯ ಹೊಗಳು!
*****
TENNYSON (1809 -1892) : Charge of the Light Brigade
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...