Home / ಕವನ / ಅನುವಾದ / ರಾವುತರ ದಾಳಿ

ರಾವುತರ ದಾಳಿ

ಹರಿದಾರಿ, ಹರಿದಾರಿ,
ಹರಿದಾರಿ ಮುಂದೆ,
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!
ಕೊಚ್ಚಿ ಗುಂಡನು!” ಎಂದ
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಮುಂದೆ.
“ನುಗ್ಗಿ ಮುಂದಕೆ, ಕುದುರೆ!”
ಕುಗ್ಗಿದವನೊಬ್ಬುಂಟೆ?
ಯಾರೊ ತಪ್ಪಿದರೆಂದು
ಧೀರರವರರಿದೂ?
ಹೇಳುವುದಕವರಲ್ಲ,
ಕೇಳುವುದಕವರಲ್ಲ,
ಮಾಡಿ ಮಡಿವುದಕವರು-
ಆರ್ನೂರು ರಾವುತರು
ಮೃತ್ಯುವಿನ ಪಂಜರಕೆ
ನುಗ್ಗಿದರು ಹರಿದು.
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಮುಂಗಡೆ ಗುಂಡು
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು ,
ಜಗ್ಗದೆಯೆ ನುಗ್ಗಿದರು.
ಮೃತ್ಯುವಿನ ದಾಡೆಯಲಿ,
ನರಕದುರಿಬಾಯಿಯಲ್ಲಿ,
ಆರ್ನೂರು ರಾವುತರು
ನುಗ್ಗಿದರು ತೂರಿ.
ಬೀಸಿ, ಝಳಪಿಸಿ ಕತ್ತಿ,
ನೆಗೆದು, ಕೈ ಮೇಗೆತ್ತಿ,
ಗುಂಡಿನವರನು ಕೆತ್ತಿ,
ಕೊತ್ತಿದರು ಪಡೆಯೊತ್ತಿ-
ಲೋಕ ಬೆರಗಾಯ್ತು!
ಮದ್ದು ಹೊಗೆಯಲಿ ಮುಳುಗಿ,
ಸಾಲು ಮುರಿದರು ನುಗ್ಗಿ;
ಕಾಸಕರು, ರಷ್ಯನರು,
ಕತ್ತಿಹೊಯ್ಲಿಗೆ ಹೊರಳಿ,
ಬೆದರಿ ಧೂಳಾಯ್ತು.
ಆಗ, ಹಿಂದಿರುಗಿದರ-
ಇಲ್ಲ, ಆರ್ನೂರಿಲ್ಲ,
ಹಿಂದಿರುಗಿದವರು!
ಅವರ ಬಲಗಡೆ ಗುಂಡು,
ಅವರ ಎಡಗಡೆ ಗುಂಡು,
ಅವರ ಹಿಂಗಡೆ ಗುಂಡು,
ಕಾರಿದುವು ಚೀರಿ.
ಸಿಡಿಮದ್ದು ಚೆರೆ ಬಿದ್ದು,
ಆಳು ಕುದುರೆಗಳುರುಳಿ,
ನುಗ್ಗಿದಾ ಧೀರರಲಿ,
ಮೃತ್ಯುವಿನ ಬಸಿರಿಂದ,
ನರಕದುರಿಬಾಯಿಂದ,
ಮರಳಿ ಬಂದರು ಕೆಲರು,
ಆರ್ನೂರು ರಾವುತರು
ಅಳಿದುಳಿದ ಕೆಲರು.
ಮಾಸದವರದು ಹೆಸರು!
ಬೀಸಿ, ಏನ್ನುಗ್ಗಿದರು!
ಲೋಕ ಬೆರಗಾಯ್ತು!
ನುಗ್ಗಿ ಹೊಯ್ದುದ ಹೊಗಳು!
ಜಗ್ಗದೆದೆಗಳ ಹೊಗಳು!
ಆರ್ನೂರು ರಾವುತರ ಶೌರ್ಯ ಹೊಗಳು!
*****
TENNYSON (1809 -1892) : Charge of the Light Brigade
Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...