Home / ಕವನ / ಅನುವಾದ / ರಾಯಲ್ ಜಾರ್ಜು ಮುಳುಗಿಹೋದದ್ದು

ರಾಯಲ್ ಜಾರ್ಜು ಮುಳುಗಿಹೋದದ್ದು

ಅಳಿದರೇ ಹಾ ಧೀರರು!
ಕಳೆದುಹೋದರೆ ಧೀರರು!
ತಮ್ಮ ನಾಡಿನ ಕರೆಯೊಳೆಲ್ಲರು
ಮುಳುಗಿ ಹೋದರು ತೆರೆಯೊಳು.
ಎಂಟುನೂರ್ವರು ಧೀರರು,
ಕಂಡ ಕೆಚ್ಚಿನ ಧೀರರು,
ಒಂದು ಮಗ್ಗುಲಿಗೆಳೆದು ಬಗ್ಗಿಸಿ
ಒರಗಿಸಿದ್ದರು ಹಡಗನು.
ನೇಣುಗಳ ನೆಲಗಾಳಿ ಕುಲುಕಿತು.
ಹಡಗು ತಲೆಕೆಳಕಾಯಿತು.
ಹೋಯ್ತು ರಾಯಲ್ ಜಾರ್ಜು ತಳಗಡೆ
ಗೊಬ್ಬನುಳಿಯದೆ ದಳದೊಳು.
ಅಳಿದರಾಹ ಧೀರರು!
ಹೋದ ಕೆಂಪೆನ್‌ಫೆಲ್ಟನು!
ಅವನ ಕಡೆ ಹೋರಾಟ ಹೋರಿತು,
ಅವನ ಸಾಹಸ ತೀರಿತು.
ಕಾಳಗದೊಳದು ಆಗಲಿಲ್ಲ;
ಗಾಳಿ ಎರಗಿ ಒದರಲಿಲ್ಲ;
ಒಡಕು ಕಿತ್ತುದು ಮುಳುಗಲಿಲ್ಲ;
ಅಡಗಿದರೆಯನು ಹಾಯಲಿಲ್ಲ.
ಒರೆಯೊಳಿದ್ದುದು ಅವನ ಕತ್ತಿ.
ಬೆರಳಲಿದ್ದುದು ಬರೆವ ಕಡ್ಡಿ,
ತಳಕೆ ಕೆಂಪೆನ್‌ಫೆಲ್ಟು ಹೋದಾ
ಗೆರಡು ನಾನೂರ್‌ದಳದಲಿ.
ಎತ್ತಿ ಮೇಲಕೆ ಹಡಗನು!
ನಮ್ಮ ಹಗೆಯೆದೆನಡುಗನು!
ಕುಡಿತ ಮೆರೆತದಿ ಬಿಡದೆ, ಇಂಗ್ಲೆಂಡ್,
ಸಲಿಸು ಕಂಬನಿಕಡವನು.
ಹಡಗುಮರ ಕೆಡದಿರುವುದು.
ತೇಲಬಲ್ಲುದು ಮತ್ತದು.
ಹೇರಿಕೊಂಡಿಂಗ್ಲೆಂಡ ಗುಡುಗನು
ದೂರದಾಳವನುಳುವುದು.
ಹೋದ ಕೆಂಪೆನ್‌ಫೆಲ್ಟನು!
ಆದುವಾತನ ಜಯಗಳು!
ಅವನು ಅವನಾ ಎಂಟುನೂರ್ವರು
ತೆರೆಯನಿನ್ನುಳಲಾರರು!
*****
COWPER (1731- 1800) : Loss of the Royal George
Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...