Home / ಕವನ / ಅನುವಾದ / ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರಿರಾ – ಕಾಯುವಿರಿ
ನೀವೆಮ್ಮ ಕಡಲುಗಳನು;
ನಿಮ್ಮ ಬಾವುಟ ತಡೆಯಿತೊಂದು ಸಾವಿರ ವರುಷ
ಗಾಳಿಯನು ಕಾಳಗವನು.
ನಿನ್ನೊಮ್ಮೆ ನಿಮ್ಮ ವಿಜಯಧ್ವಜವ ತೂಗಿಬಿಡಿ
ಇನ್ನೊಬ್ಬ ಹಗೆಯ ತಾಗಿ
ಕಡಲಲ್ಲಿ ನಡೆಗೊಳ್ಳಿ-
ಬಿರುಗಾಳಿ ತೀಡುತಿರಲು
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು
ಬಿರುಗಾಳಿ ತೀಡುತಿರಲು.
ನಿಮ್ಮ ಪಿತೃಗಳು ಧೀರರು – ತೆರೆತೆರೆಗೆ
ಹೊಮ್ಮುವರು ಹುರಿಗೊಳಿಸಲು;
ಹಡಗಿನೆಟ್ಟವೆ ಅವರು ಕಾದಿ ಹೆಸರಾದ ಕಣ,
ಕಡಲ ಸುಳಿ ಹೂಳಿದ ಕುಳಿ.
ಎಲ್ಲಿ ಬ್ಲೇಕ್ ನೆಲ್ಸನರು ಚೆಲ್ಲಿ ನೆತ್ತರ ಕೆಡೆದ
ರಲ್ಲಿ ನಿಮಗೆದೆ ಕನಲದೆ,
ಕಡಲಲ್ಲಿ ನಡೆವಲ್ಲಿ?-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಕೋಟೆಗಳು ಕೊತ್ತಳಗಳು-ಬೇಡದೆ ಬ್ರಿ
ಟಾನಿಯಳು ಹದುಳವಿಹಳು;
ಬೆಟ್ಟದೆರೆಗಳ ತಲೆಯ ಮೆಟ್ಟುವಳು ದಾಳಿಯಲಿ.
ಕಡಲು ಮನೆಯಾಗಿರುವಳು
ಗುಡುಗಿ ತನ್ನಡವಿಗಳ ತೇಗುಮರದೊಡಲಿಂದ,
ಅಡಗಿಸುವಳಡಿಯ ಹೊನಲ
ಕರೆಯಲ್ಲಿ ಮೊರೆವಲ್ಲಿ-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಇಂಗ್ಲೆಂಡ ಧ್ವಜಪಟವದು – ರೌದ್ರದಲಿ
ಧೂಮಕೇತುವೊಲುರಿವುದು;
ಬಿಗಿದ ಭೀತಿಯ ನಿಶಿಯ ಕಾರೊಡ್ಡು ಕರಗುತ್ತ
ನಗುವನಕ ಶಾಂತಿಯರಿಲು.
ಆಗ ಆಗುತ್ಸವದಿ, ಸಾಗರದ ವೀರರಿರ,
ಬೀಗುವೆವು, ಕೀರ್ತಿಸುವೆವು
ನಿಮ್ಮಗಳ ಹಮ್ಮುಗಳ-
ಬಿರುಗಾಳಿ ತೀಡಿ ನಿಲಲು,
ಘೋರಕದನದ ಬೊಬ್ಬೆ ತೂರಿ ಮೊರೆವುದು ನಿಲಲು,
ಬಿರುಗಾಳಿ ತೀಡಿ ನಿಲಲು.
*****
CAMPBELL (1777 – 1844) : Ye Mariners of England
Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...