Home / ಕವನ / ಅನುವಾದ / ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರು

ಇಂಗ್ಲೆಂಡ ನಾವಿಕರಿರಾ – ಕಾಯುವಿರಿ
ನೀವೆಮ್ಮ ಕಡಲುಗಳನು;
ನಿಮ್ಮ ಬಾವುಟ ತಡೆಯಿತೊಂದು ಸಾವಿರ ವರುಷ
ಗಾಳಿಯನು ಕಾಳಗವನು.
ನಿನ್ನೊಮ್ಮೆ ನಿಮ್ಮ ವಿಜಯಧ್ವಜವ ತೂಗಿಬಿಡಿ
ಇನ್ನೊಬ್ಬ ಹಗೆಯ ತಾಗಿ
ಕಡಲಲ್ಲಿ ನಡೆಗೊಳ್ಳಿ-
ಬಿರುಗಾಳಿ ತೀಡುತಿರಲು
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು
ಬಿರುಗಾಳಿ ತೀಡುತಿರಲು.
ನಿಮ್ಮ ಪಿತೃಗಳು ಧೀರರು – ತೆರೆತೆರೆಗೆ
ಹೊಮ್ಮುವರು ಹುರಿಗೊಳಿಸಲು;
ಹಡಗಿನೆಟ್ಟವೆ ಅವರು ಕಾದಿ ಹೆಸರಾದ ಕಣ,
ಕಡಲ ಸುಳಿ ಹೂಳಿದ ಕುಳಿ.
ಎಲ್ಲಿ ಬ್ಲೇಕ್ ನೆಲ್ಸನರು ಚೆಲ್ಲಿ ನೆತ್ತರ ಕೆಡೆದ
ರಲ್ಲಿ ನಿಮಗೆದೆ ಕನಲದೆ,
ಕಡಲಲ್ಲಿ ನಡೆವಲ್ಲಿ?-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಕೋಟೆಗಳು ಕೊತ್ತಳಗಳು-ಬೇಡದೆ ಬ್ರಿ
ಟಾನಿಯಳು ಹದುಳವಿಹಳು;
ಬೆಟ್ಟದೆರೆಗಳ ತಲೆಯ ಮೆಟ್ಟುವಳು ದಾಳಿಯಲಿ.
ಕಡಲು ಮನೆಯಾಗಿರುವಳು
ಗುಡುಗಿ ತನ್ನಡವಿಗಳ ತೇಗುಮರದೊಡಲಿಂದ,
ಅಡಗಿಸುವಳಡಿಯ ಹೊನಲ
ಕರೆಯಲ್ಲಿ ಮೊರೆವಲ್ಲಿ-
ಬಿರುಗಾಳಿ ತೀಡುತಿರಲು,
ಹಿರಿದಾಗಿ ಕಾಳಗವು ಬೊಬ್ಬಿರಿದು ಹಬ್ಬಿರಲು,
ಬಿರುಗಾಳಿ ತೀಡುತಿರಲು.
ಇಂಗ್ಲೆಂಡ ಧ್ವಜಪಟವದು – ರೌದ್ರದಲಿ
ಧೂಮಕೇತುವೊಲುರಿವುದು;
ಬಿಗಿದ ಭೀತಿಯ ನಿಶಿಯ ಕಾರೊಡ್ಡು ಕರಗುತ್ತ
ನಗುವನಕ ಶಾಂತಿಯರಿಲು.
ಆಗ ಆಗುತ್ಸವದಿ, ಸಾಗರದ ವೀರರಿರ,
ಬೀಗುವೆವು, ಕೀರ್ತಿಸುವೆವು
ನಿಮ್ಮಗಳ ಹಮ್ಮುಗಳ-
ಬಿರುಗಾಳಿ ತೀಡಿ ನಿಲಲು,
ಘೋರಕದನದ ಬೊಬ್ಬೆ ತೂರಿ ಮೊರೆವುದು ನಿಲಲು,
ಬಿರುಗಾಳಿ ತೀಡಿ ನಿಲಲು.
*****
CAMPBELL (1777 – 1844) : Ye Mariners of England
Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...