Home / ಕವನ / ಅನುವಾದ / ಆಳೌ, ಬ್ರಿಟಾನಿಯಾ!

ಆಳೌ, ಬ್ರಿಟಾನಿಯಾ!

ಆದಿಯಲಿ, ದೈವಾಜ್ಞೆಯಲ್ಲಿ ಬ್ರಿಟನ್ ಭೂಮಾತೆ
ನೀಲಜಲರಾಶಿಯಿಂದುದ್ಭವಿಸಿದಂದು,
ಆದರಿಸಿ, ಅಭಿಮಾನದೇವತೆಗಳೊಲಿದು, ದಯ
ಪಾಲಿಸಿದರಾಕೆಗೀ ಶಾಸನವ ಹರಸಿ-
“ಆಳೌ, ಬ್ರಿಟಾನಿಯಾ! ಆಳ ತೆರೆಗಳನು!
ಎಂದಿಗೂ ಬ್ರಿಟನನಡಿಯಾಳೆನಿಸಿಕೊಳನು!”
ನಿನ್ನ ಪುಣ್ಯದ ಪಡೆದು ಬಾರದಿಹ ಜನವೆಲ್ಲ
ಕ್ರೂರರಾಜರ ಬಾಧೆಯಿಂದ ಕೃಶವಾಗಿ,
ನಿನ್ನ ಮಹಿಮೆಗೆ ಹೆದರಿ, ಕರುಬಿ, ಮಿಡಿಯುತ್ತಿರಲು,
ಧೀರೆ, ಸ್ವಾತಂತ್ರ್ಯದಲಿ ನೀನು ವರ್ಧಿಸುವೆ!
ವೈರಿಗಳು ಹೊಡೆದಷ್ಟು, ಘೋರರೂಪವ ತಾಳಿ,
ಧೈರ್ಯಗಾಂಭೀರ್ಯದಲಿ ನಸುನಗುತ ನಿಲುವೆ:
ಕೀರಿ, ಗಗನವ ಸೀಳಿ, ಬಿರುಗಾಳಿ ಕಿತ್ತಷ್ಟು,
ಬೇರೂರಿಕೊಳುವಂತೆ ನಿನ್ನಡವಿತೇಗು!
ಮಲೆತು ದುರ್ನೀತಿಯಲಿ ನಿನ್ನ ರಾಜರು ಕೆಟ್ಟು,
ಹಿಡಿದು ಸಂಕಲೆಯಿಟ್ಟು ಜಗ್ಗಿಸಲು ಬರಲು,
ಮಲಗಿದ್ದ, ಸಿಂಹದಂತುರಿದೆದ್ದು ತೆಗೆದೋದರಿ,
ಬಿಡುಗಡೆಯ ಕೈಕೊಂಡು ಕೀರ್ತಿಯನು ಪಡೆವ!
ನಿನ್ನದೆಯೆ ಹೊಂಬಣ್ಣ ತುಂಬಿ ತೂಗುವ ಬಯಲು,
ನಿನ್ನದೆಯೆ ವರ್ತಕರ ಸಿರಿ ಮೆರೆವ ಹೊಳಲು;
ನಿನ್ನದೆಯೆ ಸಾಗರದ ಸತ್ವಸಾಮ್ರಾಜ್ಯವೂ,
ನಿನ್ನದೆಯೆ ತೆರೆ ಬಳಸಿಬರುವೆಲ್ಲ ಕರೆಯು!
ವಾಣಿಯರು ಸ್ವಾತಂತ್ರ್ಯ ದಕ್ಕರೆಗೆ ನಡೆತಂದು
ನಿನ್ನ ಭೋಗದ ಭೂಮಿಯಲ್ಲೆ ನೆಲಸುವರು;
ರಾಣಿದೀವಿಯೆ, ನಿನ್ನ ಚೆಲುವೆಯರ ಪ್ರೇಮದಲಿ
ನಿನ್ನ ವೀರರು ಧರ್ಮವನ್ನು ಕಾಯುತಿಹರು!
ಆಳೌ, ಬ್ರಿಟಾನಿಯಾ! ಆಳು ತೆರೆಗಳನು!
ಎಂದಿಗೂ ಬ್ರಿಟನನಡಿಯಾಳೆನಿಸಿಕೊಳನು!”
*****
THOMSON (1700 -1748) : Rule Britannia
Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...