Home / ಕವನ / ಅನುವಾದ / ಇಂಗ್ಲೆಂಡ್

ಇಂಗ್ಲೆಂಡ್

ಏನ ಮಾಡಿದೆ ನಾನು ನಿನಗೆ
ಇಂಗ್ಲೆಂಡ್, ನನ್ನಿಂಗ್ಲೆಂಡ್
ಏನ ಮಾಡೆನು ಹೇಳು ನಿನಗೆ
ನನ್ನ ಇಂಗ್ಲೆಂಡ್!
ದೇವನೊರೆವುದ ಕೇಳಿ,
ಕಣ್ಣ ಮಿನುಗನು ತಾಳಿ,
ಘೋರಯಜ್ಞವ ಬೇಳಿ,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಇಳೆಬಳಸಿ ತುತ್ತುರಿಯ ನೀನೂದಲು.
ಇನ್ನು ರವಿ ಎಲ್ಲಿ ಕಾಣುವನು,
ಇಂಗ್ಲೆಂಡ್, ನನ್ನಿಂಗ್ಲೆಂಡ್,
ನಿನ್ನಣೆಯ ಮಹತುಕಾರ್ಯವನು,
ನನ್ನ ಇಂಗ್ಲೆಂಡ್!
ಎಲ್ಲಿ ನಲಿವನು ಕಂಡು
ನಿನ್ನ ಧೀರರ ದಂಡು
ನೂಂಕುವೊಲು ಮುಂಕೊಂಡು,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಎಡರಿನಲಿ ತುತ್ತುರಿಯ ನೀನೂದಲು!
ಬಳುಕುವೆವೆ ಭಕ್ತಿಯಲಿ ನಾವು
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಕೊಳು, ಕೊಲಿಸು; ನಿನ್ನವರು ನಾವು,
ನನ್ನ ಇಂಗ್ಲೆಂಡ್!
ನಿನ್ನ ಹೊಲ, ಮನೆ, ಚೆಂದ;
ಬಾಳು ಮಿಗಿಲಾನಂದ;
ಸಾವಳಿವು-ಸಾಯುವೆವು
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಸ್ವರ್ಗದಲಿ ತುತ್ತುರಿಯ ನೀನೂದಲು.
ಗರ್ವಿ, ಘಾತಕಿ, ಎಂಬರಮ್ಮ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಸರ್ವಧರೆ ನಿನ್ನ ಹೊರೆಯಮ್ಮ!
ನನ್ನ ಇಂಗ್ಲೆಂಡ್!
ವಜ್ರಕವಚವ ತೊಟ್ಟು,
ಗತಿಯ ಕಾವುದ ಬಿಟ್ಟು,
ಜರುಗುವೆಯ? ಮರುಗುವೆಯ?
ಗಾನದಲಿ ತುತ್ತುರಿಯ ನೀನೂದದೆ,
ಇಂಗ್ಲೆಂಡ್,
ನರಕದಲಿ ತುತ್ತುರಿಯ ನೀನೂದದೆ?
ತುಳಿದುಬಹ ನಾವೆಗಳ ತಾಯಿ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಹಳೆಯುಗ್ರಸಾಗರನ ಕೆಳದಿ,
ನನ್ನ ಇಂಗ್ಲೆಂಡ್!
ಸ್ವಾಮಿಯಕ್ಕರ ಕುವರಿ,
ಧರ್ಮಖಡ್ಗದ ಮಡದಿ-
ಸೀಳಿರದೆ, ಖೂಳರೆದೆ,
ಗಾನದಲಿ ತುತ್ತುರಿಯ ನೀನೂದಲು
ಇಂಗ್ಲೆಂಡ್,
ಸತ್ಯದಲಿ ತುತ್ತುರಿಯ ನೀನೂದಲು!
*****
HENLEY (1849 – 1903) : What have I done for you , England, my England
Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...