Home / ಕವನ / ಅನುವಾದ / ಇಂಗ್ಲೆಂಡ್

ಇಂಗ್ಲೆಂಡ್

ಏನ ಮಾಡಿದೆ ನಾನು ನಿನಗೆ
ಇಂಗ್ಲೆಂಡ್, ನನ್ನಿಂಗ್ಲೆಂಡ್
ಏನ ಮಾಡೆನು ಹೇಳು ನಿನಗೆ
ನನ್ನ ಇಂಗ್ಲೆಂಡ್!
ದೇವನೊರೆವುದ ಕೇಳಿ,
ಕಣ್ಣ ಮಿನುಗನು ತಾಳಿ,
ಘೋರಯಜ್ಞವ ಬೇಳಿ,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಇಳೆಬಳಸಿ ತುತ್ತುರಿಯ ನೀನೂದಲು.
ಇನ್ನು ರವಿ ಎಲ್ಲಿ ಕಾಣುವನು,
ಇಂಗ್ಲೆಂಡ್, ನನ್ನಿಂಗ್ಲೆಂಡ್,
ನಿನ್ನಣೆಯ ಮಹತುಕಾರ್ಯವನು,
ನನ್ನ ಇಂಗ್ಲೆಂಡ್!
ಎಲ್ಲಿ ನಲಿವನು ಕಂಡು
ನಿನ್ನ ಧೀರರ ದಂಡು
ನೂಂಕುವೊಲು ಮುಂಕೊಂಡು,
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಎಡರಿನಲಿ ತುತ್ತುರಿಯ ನೀನೂದಲು!
ಬಳುಕುವೆವೆ ಭಕ್ತಿಯಲಿ ನಾವು
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಕೊಳು, ಕೊಲಿಸು; ನಿನ್ನವರು ನಾವು,
ನನ್ನ ಇಂಗ್ಲೆಂಡ್!
ನಿನ್ನ ಹೊಲ, ಮನೆ, ಚೆಂದ;
ಬಾಳು ಮಿಗಿಲಾನಂದ;
ಸಾವಳಿವು-ಸಾಯುವೆವು
ಗಾನದಲಿ ತುತ್ತುರಿಯ ನೀನೂದಲು,
ಇಂಗ್ಲೆಂಡ್,
ಸ್ವರ್ಗದಲಿ ತುತ್ತುರಿಯ ನೀನೂದಲು.
ಗರ್ವಿ, ಘಾತಕಿ, ಎಂಬರಮ್ಮ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಸರ್ವಧರೆ ನಿನ್ನ ಹೊರೆಯಮ್ಮ!
ನನ್ನ ಇಂಗ್ಲೆಂಡ್!
ವಜ್ರಕವಚವ ತೊಟ್ಟು,
ಗತಿಯ ಕಾವುದ ಬಿಟ್ಟು,
ಜರುಗುವೆಯ? ಮರುಗುವೆಯ?
ಗಾನದಲಿ ತುತ್ತುರಿಯ ನೀನೂದದೆ,
ಇಂಗ್ಲೆಂಡ್,
ನರಕದಲಿ ತುತ್ತುರಿಯ ನೀನೂದದೆ?
ತುಳಿದುಬಹ ನಾವೆಗಳ ತಾಯಿ,
ಇಂಗ್ಲೆಂಡ್, ನನ್ನಿಂಗ್ಲೆಂಡ್!
ಹಳೆಯುಗ್ರಸಾಗರನ ಕೆಳದಿ,
ನನ್ನ ಇಂಗ್ಲೆಂಡ್!
ಸ್ವಾಮಿಯಕ್ಕರ ಕುವರಿ,
ಧರ್ಮಖಡ್ಗದ ಮಡದಿ-
ಸೀಳಿರದೆ, ಖೂಳರೆದೆ,
ಗಾನದಲಿ ತುತ್ತುರಿಯ ನೀನೂದಲು
ಇಂಗ್ಲೆಂಡ್,
ಸತ್ಯದಲಿ ತುತ್ತುರಿಯ ನೀನೂದಲು!
*****
HENLEY (1849 – 1903) : What have I done for you , England, my England
Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...