Home / ಕವನ / ಅನುವಾದ / ದೇಶಸೇವಕ

ದೇಶಸೇವಕ

(ಹಳೆಯ ಕಥೆ)
ಮಾಲೆಗಳು, ಮಾಲೆಗಳು ಬೀದಿ ಮನೆಮನೆಗೆ;
ಮುತ್ತುಗಳ ಸೇಸೆಗಳು ತಲೆಯೊಳಗೆ ಮಿನುಗೆ;
ಮಾಳಿಗೆಗಳೊಲೆದಾಡಿ ಹಿಗ್ಗು ಮುಗ್ಗಾಗೆ;
ಎತ್ತಿದಾ ಗುಡಿ ದೀಪಗೋಪುರವ ಬೆಳಗೆ-
ಒಂದು ವರುಷದ ಕೆಳಗೆ ನನಗೆ ಮೆರವಣಿಗೆ!
ಗಾಳಿ ನೊರೆಕೀಳುವುದು ವಾದ್ಯಗಳ ಮೊರೆಗೆ;
ಊರೆ ಕಿತ್ತೊಡುವುದು ಜನದ ಜಯಜಯಕೆ.
ಕೇಳಿದೆನೆ – “ಅಣ್ಣದಿರ, ಏಕೆ ಬರಿ ಬೊಬ್ಬೆ?
ಸೂರಿಯನ ತಂದುಕೊಡಿ” ಎನುತ – ಅವರೊಡನೆ
“ಆಯ್ತಾಯ್ತು; ಮತ್ತೇನು? ಕೇಳು” ಎನುತಿಹರು.
ನಾನಕಟ! ಸೂರ್ಯನನು ತರಲು ನೆಗೆದವನು!
ನಾಡಿನೊಲುಮೆಯ ಜನದ ಕಯ್ಗೆ ಕೊಡಲದನು.
ಮಾನವನು ಮಾಡುವುದನೆಲ್ಲ ಮಾಡಿದೆನು.
ನೋಡೆನ್ನ ಪಾಡೀಗ ನಾ ಬೆಳೆದ ಬೆಳಸು,
ಒಂದು ವರುಷವು ಕಳೆದು ನಾ ಕೊಯ್ದ ಕೊಯಲು.
ಮಾಳಿಗೆಯ ಮೇಲೀಗ ಒಂದು ತಲೆ ಕಾಣೆ!
ಕಿಟಕಿಯೊಳಗಲ್ಲಲ್ಲಿ ಹೆಳವರಿಣಿಕಿಹರು.
“ಏಳಿ, ಎಲ್ಲರು ಬನ್ನಿ, ನೋಟ ಬಲುಚೆನ್ನು,
ಸುಡುಗಾಡಿನೆಡೆಯಲ್ಲಿ ಶೂಲದಡಿಯಲ್ಲಿ!”
ಅಲ್ಲಿಗೋಡಿದಲೆಲ್ಲ, ತಳ್ಳಿ ತುಳಿದಾಡಿ.
ಮಳೆಯೊಳಗೆ ಹೋಗುವೆನು; ಮುಂಗಯ್ಯ ಕೊರೆದು
ಬೆನ್ನಿನಲಿ ನೇಣಿಂದ ಬಿಗಿದು ಕಟ್ಟಿಹರು.
ಇಳಿಯುತಿದೆ ಹಣೆಯಲ್ಲಿ ರಕ್ತ ಬಸಿಬಸಿದು,
ನನ್ನ ಕಡೆ ಕಲ್ಲೆಸೆದು ಮನಸುಬಂದವರು-
ಒಂದು ವರುಷದ ನಿನ್ನ ತಪ್ಪುಗಳಿಗೆಂದು!
ಹೇಗೆ ಬಂದೆನು ನಾನು, ಹೇಗೆ ಹೋಗುವೆನು!
ಹಿಂದೆ ವಿಜಯೋತ್ಸವದಿ ಸತ್ತುಬಿದ್ದಿಹರು!
“ಲೋಕವೇ ಫಲಕೊಡಲು, ನನ್ನ ಹಂಗೇನು?”
ಎಂದು ಕೇಳನೆ ಆಗ ಭಗವಂತ! ಈಗ,
ಕೊಡುವಾತ ಭಗವಂತ-ಕ್ಷೇಮ ಅದೆ ನನಗೆ.
*****
BROWNING (1812- 1889) : The Patriot
Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...