Home / ಕವನ / ಅನುವಾದ / ಬಡವನ ಹುರುಡು

ಬಡವನ ಹುರುಡು

ಮಾನವಾಗಿ ತಾನು ಬದುಕಿ,
ಹೀನ ಬಡತನವೇನೆ ಇರಲಿ,
ನಾಚಿಕೊಳುವ ನೀಚತೊತ್ತ
ಆಚೆನೂಕು, ಏನೆ ಇರಲಿ,
ಏನೆ ಇರಲಿ, ಏನೆ ಇರಲಿ,
ಕಷ್ಟನಿಷ್ಟುರವೇನೆ ಇರಲಿ,
ಮೆರೆವ ಪದವಿ ವರಹಮುದ್ರೆ,
ಆಳು ಚಿನ್ನ, ಏನೆ ಇರಲಿ!
ಹೊಟ್ಟೆಗಿಷ್ಟು ಹಿಟ್ಟು ಗಂಜಿ,
ಬಟ್ಟೆ ಚಿಂದಿ, ಏನೆ ಇರಲಿ,
ಸೊಗಸು ಬೆಡಗು ತೆಗೆದು ಮಡಗು,
ಮಿಗುವುದಾಳು, ಏನೆ ಇರಲಿ.
ಏನೆ ಇರಲಿ, ಏನೆ ಇರಲಿ,
ಥಳಕುಪಳಕುಗಳೇನೆ ಇರಲಿ,
ಯಾರು ಸಾಜ, ಅವನೆ ರಾಜ,
ಭಂಗ, ಬಡತನ, ಏನೆ ಇರಲಿ!
ಅಕ್ಕೊ ಬಸುವ, ಸೊಕ್ಕಿ ಮೆರೆವ
ಲಕ್ಕಮುಕ್ಕ , ಏನೆ ಇರಲಿ;
ಅರಿತು ಕಣ್ಣ , ಹರಿವರಣ-
ಬೆಪ್ಪ, ಬಿಡೆಲಾ, ಏನೆ ಇರಲಿ,
ಏನೆ ಇರಲಿ, ಏನೆ ಇರಲಿ,
ಉಡಿಗೆತೊಡಿಗೆಗಳೇನೆ ಇರಲಿ,
ತನ್ನ ಬುದ್ದಿ ತನಗೆ ಸಿದ್ಧಿ
ಎನ್ನಬೇಡಾ, ಏನೆ ಇರಲಿ?
ಅರಸ ಕರಸಿ, ಬಿರುದ ಹೊರಿಸಿ,
ಮೆರಸಬಲ್ಲ, ಏನೆ ಇರಲಿ;
ಸಾಜಗಾರ ಎನಿಸಲಾರ,
ತೇಜವಿಲ್ಲ, ಏನೆ ಇರಲಿ,
ಏನೆ ಇರಲಿ, ಏನೆ ಇರಲಿ,
ಹಮುಹಮ್ಮೆಗಳೇನೆ ಇರಲಿ.
ತಿರುಳಿನರಿವು, ಹಿರಿಯ ನಡತೆ,
ಮೇಲುಸಾಲು, ಏನೆ ಇರಲಿ.
ಅರಿವು, ನಡತೆ, ಧರೆಯೊಳೆಲ್ಲ
ಮೆರೆವ ಕಾಲ, ಏನೆ ಇರಲಿ,
ಬರಲಿ ಬೇಗ, ಹರಸು ಈಗ;
ಬರದೆ ಇರದು, ಏನೆ ಇರಲಿ.
ಏನೆ ಇರಲಿ, ಏನೆ ಇರಲಿ,
ಬಂದೆ ಬರುವುದು, ಏನೆ ಇರಲಿ,
ಅಣ್ಣ ತಮ್ಮದಿರಾಗಿ ಎಲ್ಲಾ
ಇರುವ ಕಾಲ, ಏನೆ ಇರಲಿ.
*****
BURNS (1759 -1796) : A Man’s a man for a `that
Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...