Home / ಲೇಖನ / ಹಾಸ್ಯ / ಕನಸು ನನಸಾಯಿತು

ಕನಸು ನನಸಾಯಿತು

ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್‍ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ.

ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ಆವರಿಸಿತ್ತು. ನನಗೆ ಮೈಸೂರಿಗೆ ವರ್‍ಗವಾಗಿ ರೈಲಿನಲ್ಲಿ ನಾನು ನನ್ನವಳ ಸಂಗಡ ಪ್ರಯಾಣಿಸಿ ಮೈಸೂರು ನಿಲ್ದಾಣದಲ್ಲಿ ಇಳಿದೆ. ನಮ್ಮ ಮಾವನವರು ನಮ್ಮನ್ನು ಸ್ವಾಗತಿಸಲು ಫ್ಲಾಟ್ ಫಾರಂನಲ್ಲಿ ಕಾಯುತ್ತಿರುವುದರ ಬಗ್ಗೆ ಕನಸು ಕಂಡೆ.

ಬೆಳಗ್ಗೆ ಎದ್ದೊಡನೆ ಕನಸಿನ ಬಗ್ಗೆ ನನ್ನವಳಿಗೆ ಹೇಳಿದೆ. “ರ್ರೀ, ನೀವು ಈಗಲೇ ಬೆಂಗಳೂರಿಗೆ ಹೋಗಿ ಹೆಡ್ ಆಫೀಸ್ನಲ್ಲಿ ಮೇಲಧಿಕಾರಿಯನ್ನು ಕಂಡು ಸಾಗರದ ಹವಾ ನನಗೆ ಒಗ್ಗುತ್ತಿಲ್ಲ. ಮೈಸೂರಿಗೆ ವರ್‍ಗಾ ಮಾಡಿ” ಎಂದು ಕೇಳಿಕೊಳ್ಳಿ ಎಂದು ಆಕೆ ಸಲಹೆ ನೀಡಿದಳು.

ಅವಳು ಹೇಳಿದ್ದು ಸರಿ ಎಂದೆನಿಸಿ ಕೂಡಲೇ ಬೆಂಗಳೂರಿಗೆ ಹೊರಟೆ. ಮೇಲಧಿಕಾರಿಗಳಲ್ಲಿ ವಿನಂತಿಸಿದೆ.

“ಏನು? ನಿಮಗೆ ಮೈಸೂರೇ ಆಗ ಬೇಕೋ? ನಿಮಗಿಂತ ಸೀನಿಯರ್ ಎಷ್ಟೋ ಜನ ವರ್‍ಗ ಬೇಕೆಂದು ಹಾರಾಡುತ್ತಿದ್ದಾರೆ. ಅದೆಲ್ಲ ಆಗೋದಿಲ್ಲ ಬೇಕಾದರೆ ಹತ್ತಿರದ ಯಾವುದಾದರೂ ಹಳ್ಳಿಗೆ ಹಾಕೋಣ” ಎಂದು ಆಧಿಕಾರಿ ಗುಡುಗಿದರು.

ಕನಸು ನನಸಾಗಿದ್ದರೆ, ಎಷ್ಟು ಚಿನ್ನಾಗಿರುತ್ತಿತ್ತು. ಬಂದ ದಾರಿಗೆ ಸುಂಕವಿಲ್ಲವಾಯಿತಲ್ಲ ಎಂದುಕೊಂಡು ಸಾಗರಕ್ಕೆ ಮರಳಿದೆ. ಒಂದು ವಾರ ಕಳದಿರ‍ಬಹುದು. ಬೆಳಿಗ್ಗ ಬ್ಯಾಂಕಿಗೆ ಹೋದಾಗ ಅಚ್ಚರಿಯೊಂದು ಕಾದಿತ್ತು. ಮ್ಯಾನೇಜರ್ ನನ್ನನ್ನು ಕರೆದು “ಎಲ್ಲರಿಗೂ ಸ್ವೀಟ್ ತರಿಸಿ” ಎಂದರು. ನನಗೆ ತಳಬುಡ ಏನೂ ತಿಳಿಯಲಿಲ್ಲ.

“ನೋಡಿ ನಿಮ್ಮ ವರ್‍ಗದ ಆರ್‍ಡರ್” ಎನ್ನುತ್ತಾ ನನ್ನ ಕೈಯಲ್ಲಿತ್ತರು. ನನಗೆ ಮೈಸೂರು ಹತ್ತಿರದ ಹಳ್ಳಿ ಯಾವುದಾದರೂ ಇರಬಹುದು ಎಂಬ ಆತಂಕ ಅದರೆ ದೈವವಶಾತ್ ಮೈಸೂರಿಗೇ ವರ್‍ಗವಾಗಿತ್ತು! ಮನಸ್ಸಿನಲ್ಲಿ ಮೇಲ್ನೋಟಕ್ಕೆ ತೀಕ್ಷ್ಣವಾಗಿ ಅಂತರಂಗದಲ್ಲಿ ಮೃದುವಾಗಿಯೂ ಇದ್ದ ಅಧಿಕಾರಿಯನ್ನು ಮನಸಾರೆ ವಂದಿಸಿದೆ.
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...