Home / ಕಥೆ / ಜನಪದ / ತಂದೆ ಮಗ

ತಂದೆ ಮಗ

ಸನಗಿನ ವ್ಯಾಪಾರಮಾಡುವುದರಲ್ಲಿಯೇ ಮುದುಕನಾದ ಶಿವಲಿಂಗಪ್ಪನು, ಕೈಗೆ ಬಂದ ಮಗನಿಗೆ ತನ್ನ ವ್ಯಾಪಾರದ ಹಾಗು ತನ್ನ ಗಿರಾಕಿಗಳ ಪರಿಚಯ ಮಾಡಿಸಿಕೊಟ್ಟರೆ ತಾನು ಕೆಲಸದಿಂದ ನಿವೃತ್ತನಾಗುವುದಕ್ಕೆ ನಿಶ್ಚಿಂತವಾಗುವುದೆಂದು ಆಲೋಚಿಸಿ, ಮಗನನ್ನು ಕರೆದು ತನ್ನ ವಿಚಾರವನ್ನು ಆತನ ಮುಂದೆ ವಿವರಿಸಿದನು. ಮಗನೂ ಅದಕ್ಕೆ ಸಮ್ಮತಿಸಿದನು.

ಕುದುರೆಯ ಮೇಲೆ ಸೀರೆಯ ಗಂಟುಗಳನ್ನು ಹೇರಿ, ನಾಲ್ಕು ದಿನ ಸಾಕಾಗುವಷ್ಟು ರೊಟ್ಟಿ – ಬುತ್ತಿ ಕಟ್ಟಿಕೊಂಡು ತಂದೆಯು ಮಗನೊಂದಿಗೆ ವ್ಯಾಪಾರಕ್ಕೆಂದು ತನ್ನ ದೂರದ ಹಳ್ಳಿಗಳತ್ತ ಹೊರಟನು. ಸರತಿ ಪ್ರಕಾರ ತಂದೆ-ಮಗ ಕುದುರೆ ಹತ್ತುತ್ತಿದ್ದರು. ಕುದುರೆ ತನ್ನದೇ ಆದ ವೇಗದಲ್ಲಿ ಸಾಗಬಹುದಾದರೂ ಅದರ ಬೆನ್ನ ಹಿಂದೆ ನಡೆಯುತ್ತ ಹೊರಟವರ ಸಲುವಾಗಿ ಮಂದವೇಗದಿಂದ ನಡೆಯಿತು. ಆ ಕಾರಣದಿಂದ ಅವರು ತಲಪಬೇಕಾದ ಹಳ್ಳಿಯನ್ನು ಸಾಯಂಕಾಲದೊಳಗಾಗಿ ತಲುಪಲು ಸಾಧ್ಯವಾಗಲಿಲ್ಲ. ಆ ಹಳ್ಳಿ ಇನ್ನೂ ಎರಡು ಹರದಾರಿ ದೂರವಿರುವಾಗಲೇ ಹೊತ್ತು ಮುಳುಗಿ ದೀಪಹಚ್ಚುವ ವೇಳೆಯಾಯಿತು. ತುಸು ರಾತ್ರಿಯಾದರೂ ಚಿಂತೆಯಿಲ್ಲ, ಹೋಗಿಯೇ ಬಿಡೋಣ ಎಂದು ಮಗ, ಇದೇ ಹಳ್ಳಿಯಲ್ಲಿ ರಾತ್ರಿ ಕಳೆದು ಮುಂಜಾನೆ ಹೋಗೋಣ ಎಂದು ತಂದೆ ಯೋಚಿಸತೊಡಗಿದನು.

ಮಗ ಕುದುರೆಯ ಮೇಲೆ ಕುಳಿತಿದ್ದಾನೆ. ತಂದೆ ನಡುವಿಗೆ ಒಲ್ಲಿಸುತ್ತಿ ಹಿಂದೆ ನಡೆದಿದ್ದಾನೆ. ಮುಂದಿನ ಊರ ಹಾದಿ ಹಿಡಿದ ಕುದುರೆಯನ್ನು ಹೊರಳಿಸಿ ಊರ ಅಗಸೆಯತ್ತ ಕರೆದೊಯ್ಯಲು ತಂದೆ ಲಗಾಮು ಹಿಡಿದಿದ್ದಾನೆ. ಮೇಲೆ ಕುಳಿತವನು ಮುಂದಿನ ದಾರಿ ಹಿಡಿಯಲು ತವಕಿಸುತ್ತಿದ್ದಾನೆ. ಆ ಹಳ್ಳಿಯ ಅಗಸೆಯ ಮುಂದೆ ತಂದೆ ಮಕ್ಕಳಲ್ಲಿ ಜಗ್ಗಾಟವೇ ನಡೆಯಿತು. “ನಿನಗೆ ತಿಳಿಯುವದಿಲ್ಲ. ನಾನು ಹೇಳಿದೆಂತೆ ಕೇಳು.” ಎಂಬುದೇ ಅವರಿಬ್ಬರ ಕಟ್ಟಾಜ್ಞೆಯಾಯಿತು. ಆ ಗಲವಿಲಿಗೆ ಹತ್ತೆಂಟುಜನ ನೆರೆಯಿತು ಅವರಲ್ಲೊಬ್ಬ ಕೇಳಿದರು –

“ನೀವು ಒಬ್ಬರಿಗೊಬ್ಬರು ಏನಾಗಬೇಕು ?”
“ತಂದೆ-ಮಗ” ಎಂದು ಮುದುಕನು ಹೇಳಿದೆನು.
“ಸುಳ್ಳು. ನಾನು ಮಾಲಿಕ, ಆತ ಗುಮಾಸ್ತ” ಎಂದವನು ಮಗ.
“ಆ ಹುಡುಗನದೇನು ಕೇಳುವಿರಿ ? ನಾವು ತಂದೆ ಮಕ್ಕಳು.”
“ಆ ಮುದುಕನದೇನು ಕೇಳುವಿರಿ ? ನಾವು ಮಾಲಿಕ – ಗುಮಾಸ್ತ.”
“ಮಗನಾದವನು ತಂದೆಯ ಮಾತು ಕೇಳಬೇಕಲ್ಲವೇ ?” ಎಂಬುದು ಮುದುಕನ ವಾದ.
“ಗುಮಾಸ್ತನಾದವನು ಮಾಲಿಕನು ಹೇಳಿದೆಂತೆ ನಡೆಯಬೇಕಲ್ಲವೇ ?” ಎಂಬುದು ಮಗನ ಪ್ರತಿವಾದ.

ಹಗ್ಗವೂ ಹರಿಯದೆ ಕೋಲೂ ಮುರಿಯದೆ ವಾದವಿವಾದವು ಸಾಗಿದ ಬಳಿಕ, ಊರವರು ಅವರ ಕುದುರೆಯನ್ನು ಜಗ್ಗಿಕೊಂಡು ಚಾವಡಿಗೊಯ್ದರು. ಗೌಡನು ಅವರ ವಾದ-ಪ್ರತಿವಾದಗಳನ್ನು ಕೇಳಿ, ಮುಂದಿನ ಯೋಚನೆ ಹೇಳಿದನು – “ನೀವು ತಂದೆಮಕ್ಕಳೋ ಮಾಲಿಕ ಗುಮಾಸ್ತರೋ ಸ್ಪಷ್ಟವಾಗುವವರೆಗೆ ನಿಮ್ಮನ್ನು ಇಲ್ಲಿಂದ ಬಿಡುವುದೇ ಇಲ್ಲ. ನಿಮ್ಮೂರಿನ ಗ್ರಾಮಸ್ಥರಿಂದ ನಿಮ್ಮ ಹತ್ತಗಡೆಯ ವಿಷಯವನ್ನು ತರಿಸಿಕೊಡಿರಿ.”

ಮರುದಿನ ಗೌಡನು ಓಲೆಕಾರನನ್ನು ಅವರೂರಿಗೆ ಕಳಿಸಿ ಅವರ ವಿಷಯವನ್ನು ತರಿಸಿಕೊಂಡರೆ ತಂದೆ-ಮಗ ಎನ್ನುವುದು ತಿಳಿಯಿತು. ಶಿವಲಿಂಗಪ್ಪನಿಂದ ಓಲೆಕಾರನಿಗೆ ಎರಡು ರೂಪಾಯಿ ಕೊಡಿಸಿ, ಮಗನಿಗೆ ಬುದ್ಧಿಹೇಳಿ ಅವರನ್ನು ಮುಂದಿನೂರಿಗೆ ಹೋಗಗೊಟ್ಟನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...