Home / ಲೇಖನ / ಸಾಹಿತ್ಯ / ಯಾವ ಮಾದರಿಯೂ ಇಲ್ಲ

ಯಾವ ಮಾದರಿಯೂ ಇಲ್ಲ

ಗುರುವಿಂಗೆ ಗುರುವಿಲ್ಲ
ಲಿಂಗಕ್ಕೆ ಲಿಂಗವಿಲ್ಲ
ಜಂಗಮಕ್ಕೆ ಜಂಗಮವಿಲ್ಲ
ನನಗೆ ನಾನಿಲ್ಲ
ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ
ಕಪಿಲಸಿದ್ಧಮಲ್ಲಿಕಾರ್ಜುನಾ

ಸಿದ್ಧರಾಮನ ವಚನ ಇದು. ಮಾದರಿಗಳನ್ನು ಅನುಸರಿಸುವವರು ಹೇಳಹೆಸರಿಲ್ಲದಾಗುತ್ತಾರೆ.

ಏಸು ಕ್ರಿಸ್ತ ಕ್ರಿಶ್ಚಿಯನ್ ಅಲ್ಲ, ಬುದ್ಧ ಬೌದ್ಧನಲ್ಲ, ಮಾರ್ಕ್ಸ್ ಮಾರ್ಕ್ಸ್‌ವಾದಿಯಲ್ಲ. ಕ್ರಿಸ್ತನನ್ನು ಅನುಸರಿಸಿದವರು ಕ್ರಿಶ್ಚಿಯನ್ನರು, ಬುದ್ಧನನ್ನು ಅನುಸರಿಸಿದವರು ಬೌದ್ಧರು, ಮಾರ್ಕ್ಸ್‌ನನ್ನು ಅನುಸರಿಸಿದವರು ಮಾರ್ಕ್ಸವಾದಿಗಳಾದರು. ನಾವು ಯಾರನ್ನು ಮಹಾಪುರುಷರು ಎಂದು ಗುರುತಿಸಿಕೊಂಡಿದ್ದೇವೆಯೋ ಅವರೆಲ್ಲರ ಮೇಲೂ ಇತರರ ಪ್ರಭಾವಗಳಿದ್ದರೂ ಅವರು ಯಾವ ಮಾದರಿಯನ್ನೂ ಅನುಕರಿಸದೆ, ಯಾರಂತೆಯೋ ಅಗಲು ಬಯಸದೆ ಬೆಳೆದವರು.

ಹಾಗೆಯೇ ಗುರು ಎಂಬ ಗುರುವಿಗೆ ಗುರುವೂ ಇಲ್ಲ. ಲಿಂಗ ಅನ್ನುವ ಲಿಂಗಕ್ಕೆ ಲಿಂಗವೂ ಇಲ್ಲ, ಜಂಗಮಕ್ಕೆ ಬೇರೆ ಇನ್ನೊಬ್ಬ ಜಂಗಮವಿಲ್ಲ. ಗುರು, ಲಿಂಗ ಮತ್ತು ಜಂಗಮ ಎಂಬವು ಮನುಷ್ಯ ವ್ಯಕ್ತಿಯಾಗಲೀ ವಸ್ತುವಾಗಲೀ ಅಲ್ಲ. ಅವು ಪರಿಕಲ್ಪನೆಗಳು. ಹಾಗೆಯೇ ನಾನು ಎಂಬುದು ಕೂಡ ಕಲ್ಪನೆಯೇ, ನಾನು ಎಂಬ ಕಲ್ಪನೆಗೆ ಬದ್ಧವಾಗಿರುವಷ್ಟು ಕಾಲವೂ ನನಗೆ ಒಂದು ಮಾದರಿ ಬೇಕು ಎಂದು ಹುಡುಕುತ್ತಲೇ ಇರುತ್ತೇನೆ. ನಿಜವಾಗಿ ಕಣ್ತೆರೆದು ನೋಡಿದರೆ ನಾನು ಎಂಬ ಕಲ್ಪನೆಗೆ ಆಧಾರವೇ ಇಲ್ಲ ಎಂಬುದು ಹೊಳೆದೀತು. ಅಷ್ಟೇ ಯಾಕೆ, ಯಾರಿಗೆ ಯಾರೂ ಇಲ್ಲ ಅನ್ನುವುದೂ ಅರಿವಿಗೆ ಬಂದೀತು. ಮಾದರಿಗಳ ನಿರಾಕಣೆಯ ಜೊತೆಗೇ `ನನಗೆ ನಾನಿಲ್ಲ’ ಅನ್ನುವ ಮಾತು `ನಾನೇ, ಎಲ್ಲವೂ ನನ್ನಿಷ್ಟದಂತೆಯೇ’ ಅನ್ನುವ ಭ್ರಮೆಯ ಅಹಂಕಾರವನ್ನೂ ನಿರಾಕರಿಸುವುದನ್ನು ಗಮನಿಸಿ, ಯಾರ ಹಾಗೆಯೋ ಆಗುವುದೂ ಅಲ್ಲ, `ನಾನೇ’ ಆಗುವುದೂ ಅಲ್ಲ, ಅಂದಮೇಲೆ ದಾರಿ ಯಾವುದು ಎಂಬ ಹುಡುಕಾಟಕ್ಕೆ ತೊಡಗಿಸುವಂತೆ ಇದೆ ಸಿದ್ಧರಾಮನ ಈ ವಚನ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...