Home / ಲೇಖನ / ಸಾಹಿತ್ಯ / ಯಾವ ಮಾದರಿಯೂ ಇಲ್ಲ

ಯಾವ ಮಾದರಿಯೂ ಇಲ್ಲ

ಗುರುವಿಂಗೆ ಗುರುವಿಲ್ಲ
ಲಿಂಗಕ್ಕೆ ಲಿಂಗವಿಲ್ಲ
ಜಂಗಮಕ್ಕೆ ಜಂಗಮವಿಲ್ಲ
ನನಗೆ ನಾನಿಲ್ಲ
ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ
ಕಪಿಲಸಿದ್ಧಮಲ್ಲಿಕಾರ್ಜುನಾ

ಸಿದ್ಧರಾಮನ ವಚನ ಇದು. ಮಾದರಿಗಳನ್ನು ಅನುಸರಿಸುವವರು ಹೇಳಹೆಸರಿಲ್ಲದಾಗುತ್ತಾರೆ.

ಏಸು ಕ್ರಿಸ್ತ ಕ್ರಿಶ್ಚಿಯನ್ ಅಲ್ಲ, ಬುದ್ಧ ಬೌದ್ಧನಲ್ಲ, ಮಾರ್ಕ್ಸ್ ಮಾರ್ಕ್ಸ್‌ವಾದಿಯಲ್ಲ. ಕ್ರಿಸ್ತನನ್ನು ಅನುಸರಿಸಿದವರು ಕ್ರಿಶ್ಚಿಯನ್ನರು, ಬುದ್ಧನನ್ನು ಅನುಸರಿಸಿದವರು ಬೌದ್ಧರು, ಮಾರ್ಕ್ಸ್‌ನನ್ನು ಅನುಸರಿಸಿದವರು ಮಾರ್ಕ್ಸವಾದಿಗಳಾದರು. ನಾವು ಯಾರನ್ನು ಮಹಾಪುರುಷರು ಎಂದು ಗುರುತಿಸಿಕೊಂಡಿದ್ದೇವೆಯೋ ಅವರೆಲ್ಲರ ಮೇಲೂ ಇತರರ ಪ್ರಭಾವಗಳಿದ್ದರೂ ಅವರು ಯಾವ ಮಾದರಿಯನ್ನೂ ಅನುಕರಿಸದೆ, ಯಾರಂತೆಯೋ ಅಗಲು ಬಯಸದೆ ಬೆಳೆದವರು.

ಹಾಗೆಯೇ ಗುರು ಎಂಬ ಗುರುವಿಗೆ ಗುರುವೂ ಇಲ್ಲ. ಲಿಂಗ ಅನ್ನುವ ಲಿಂಗಕ್ಕೆ ಲಿಂಗವೂ ಇಲ್ಲ, ಜಂಗಮಕ್ಕೆ ಬೇರೆ ಇನ್ನೊಬ್ಬ ಜಂಗಮವಿಲ್ಲ. ಗುರು, ಲಿಂಗ ಮತ್ತು ಜಂಗಮ ಎಂಬವು ಮನುಷ್ಯ ವ್ಯಕ್ತಿಯಾಗಲೀ ವಸ್ತುವಾಗಲೀ ಅಲ್ಲ. ಅವು ಪರಿಕಲ್ಪನೆಗಳು. ಹಾಗೆಯೇ ನಾನು ಎಂಬುದು ಕೂಡ ಕಲ್ಪನೆಯೇ, ನಾನು ಎಂಬ ಕಲ್ಪನೆಗೆ ಬದ್ಧವಾಗಿರುವಷ್ಟು ಕಾಲವೂ ನನಗೆ ಒಂದು ಮಾದರಿ ಬೇಕು ಎಂದು ಹುಡುಕುತ್ತಲೇ ಇರುತ್ತೇನೆ. ನಿಜವಾಗಿ ಕಣ್ತೆರೆದು ನೋಡಿದರೆ ನಾನು ಎಂಬ ಕಲ್ಪನೆಗೆ ಆಧಾರವೇ ಇಲ್ಲ ಎಂಬುದು ಹೊಳೆದೀತು. ಅಷ್ಟೇ ಯಾಕೆ, ಯಾರಿಗೆ ಯಾರೂ ಇಲ್ಲ ಅನ್ನುವುದೂ ಅರಿವಿಗೆ ಬಂದೀತು. ಮಾದರಿಗಳ ನಿರಾಕಣೆಯ ಜೊತೆಗೇ `ನನಗೆ ನಾನಿಲ್ಲ’ ಅನ್ನುವ ಮಾತು `ನಾನೇ, ಎಲ್ಲವೂ ನನ್ನಿಷ್ಟದಂತೆಯೇ’ ಅನ್ನುವ ಭ್ರಮೆಯ ಅಹಂಕಾರವನ್ನೂ ನಿರಾಕರಿಸುವುದನ್ನು ಗಮನಿಸಿ, ಯಾರ ಹಾಗೆಯೋ ಆಗುವುದೂ ಅಲ್ಲ, `ನಾನೇ’ ಆಗುವುದೂ ಅಲ್ಲ, ಅಂದಮೇಲೆ ದಾರಿ ಯಾವುದು ಎಂಬ ಹುಡುಕಾಟಕ್ಕೆ ತೊಡಗಿಸುವಂತೆ ಇದೆ ಸಿದ್ಧರಾಮನ ಈ ವಚನ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...