Home / ಲೇಖನ / ಸಾಹಿತ್ಯ / ಯಾವ ಮಾದರಿಯೂ ಇಲ್ಲ

ಯಾವ ಮಾದರಿಯೂ ಇಲ್ಲ

ಗುರುವಿಂಗೆ ಗುರುವಿಲ್ಲ
ಲಿಂಗಕ್ಕೆ ಲಿಂಗವಿಲ್ಲ
ಜಂಗಮಕ್ಕೆ ಜಂಗಮವಿಲ್ಲ
ನನಗೆ ನಾನಿಲ್ಲ
ಕಣ್ದೆರೆದು ನೋಡುವಡೆ ಆರಿಗೆ ಆರೂ ಇಲ್ಲ
ಕಪಿಲಸಿದ್ಧಮಲ್ಲಿಕಾರ್ಜುನಾ

ಸಿದ್ಧರಾಮನ ವಚನ ಇದು. ಮಾದರಿಗಳನ್ನು ಅನುಸರಿಸುವವರು ಹೇಳಹೆಸರಿಲ್ಲದಾಗುತ್ತಾರೆ.

ಏಸು ಕ್ರಿಸ್ತ ಕ್ರಿಶ್ಚಿಯನ್ ಅಲ್ಲ, ಬುದ್ಧ ಬೌದ್ಧನಲ್ಲ, ಮಾರ್ಕ್ಸ್ ಮಾರ್ಕ್ಸ್‌ವಾದಿಯಲ್ಲ. ಕ್ರಿಸ್ತನನ್ನು ಅನುಸರಿಸಿದವರು ಕ್ರಿಶ್ಚಿಯನ್ನರು, ಬುದ್ಧನನ್ನು ಅನುಸರಿಸಿದವರು ಬೌದ್ಧರು, ಮಾರ್ಕ್ಸ್‌ನನ್ನು ಅನುಸರಿಸಿದವರು ಮಾರ್ಕ್ಸವಾದಿಗಳಾದರು. ನಾವು ಯಾರನ್ನು ಮಹಾಪುರುಷರು ಎಂದು ಗುರುತಿಸಿಕೊಂಡಿದ್ದೇವೆಯೋ ಅವರೆಲ್ಲರ ಮೇಲೂ ಇತರರ ಪ್ರಭಾವಗಳಿದ್ದರೂ ಅವರು ಯಾವ ಮಾದರಿಯನ್ನೂ ಅನುಕರಿಸದೆ, ಯಾರಂತೆಯೋ ಅಗಲು ಬಯಸದೆ ಬೆಳೆದವರು.

ಹಾಗೆಯೇ ಗುರು ಎಂಬ ಗುರುವಿಗೆ ಗುರುವೂ ಇಲ್ಲ. ಲಿಂಗ ಅನ್ನುವ ಲಿಂಗಕ್ಕೆ ಲಿಂಗವೂ ಇಲ್ಲ, ಜಂಗಮಕ್ಕೆ ಬೇರೆ ಇನ್ನೊಬ್ಬ ಜಂಗಮವಿಲ್ಲ. ಗುರು, ಲಿಂಗ ಮತ್ತು ಜಂಗಮ ಎಂಬವು ಮನುಷ್ಯ ವ್ಯಕ್ತಿಯಾಗಲೀ ವಸ್ತುವಾಗಲೀ ಅಲ್ಲ. ಅವು ಪರಿಕಲ್ಪನೆಗಳು. ಹಾಗೆಯೇ ನಾನು ಎಂಬುದು ಕೂಡ ಕಲ್ಪನೆಯೇ, ನಾನು ಎಂಬ ಕಲ್ಪನೆಗೆ ಬದ್ಧವಾಗಿರುವಷ್ಟು ಕಾಲವೂ ನನಗೆ ಒಂದು ಮಾದರಿ ಬೇಕು ಎಂದು ಹುಡುಕುತ್ತಲೇ ಇರುತ್ತೇನೆ. ನಿಜವಾಗಿ ಕಣ್ತೆರೆದು ನೋಡಿದರೆ ನಾನು ಎಂಬ ಕಲ್ಪನೆಗೆ ಆಧಾರವೇ ಇಲ್ಲ ಎಂಬುದು ಹೊಳೆದೀತು. ಅಷ್ಟೇ ಯಾಕೆ, ಯಾರಿಗೆ ಯಾರೂ ಇಲ್ಲ ಅನ್ನುವುದೂ ಅರಿವಿಗೆ ಬಂದೀತು. ಮಾದರಿಗಳ ನಿರಾಕಣೆಯ ಜೊತೆಗೇ `ನನಗೆ ನಾನಿಲ್ಲ’ ಅನ್ನುವ ಮಾತು `ನಾನೇ, ಎಲ್ಲವೂ ನನ್ನಿಷ್ಟದಂತೆಯೇ’ ಅನ್ನುವ ಭ್ರಮೆಯ ಅಹಂಕಾರವನ್ನೂ ನಿರಾಕರಿಸುವುದನ್ನು ಗಮನಿಸಿ, ಯಾರ ಹಾಗೆಯೋ ಆಗುವುದೂ ಅಲ್ಲ, `ನಾನೇ’ ಆಗುವುದೂ ಅಲ್ಲ, ಅಂದಮೇಲೆ ದಾರಿ ಯಾವುದು ಎಂಬ ಹುಡುಕಾಟಕ್ಕೆ ತೊಡಗಿಸುವಂತೆ ಇದೆ ಸಿದ್ಧರಾಮನ ಈ ವಚನ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...